23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ಪಡ್ಲಾಡಿ ದ.ಕ.ಜಿ.ಪಂ ಶಾಲೆಯ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಪಡ್ಲಾಡಿ ಲಾಯಿಲ ಮಕ್ಕಳಿಗೆ ಜೂ.26ರಂದು ಉಚಿತ ಬರೆಯುವ ಪುಸ್ತಕ ವಿತರಣೆ ನಡೆಯಿತು.


ಕಾರ್ಯಕ್ರಮದಲ್ಲಿ ಉಚಿತವಾಗಿ ಪುಸ್ತಕ ನೀಡಿದ ದಾನಿಗಳಾದ ಉದ್ಯಮಿ ಲಾಯಿಲ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಸದಾನಂದ ಶೆಟ್ಟಿ ಹಾಗೂ ಗುತ್ತಿಗೆದಾರರಾದ ಜಗನ್ನಾಥ ಶೆಟ್ಟಿ ಕರ್ನೋಡಿ ಭಾಗವಹಿಸಿ ಮಕ್ಕಳಿಗೆ ಪುಸ್ತಕ ವಿತರಿಸಿ ಶುಭ ಹಾರೈಸಿದರು.
ಗ್ರಾಮ ಪಂಚಾಯತ್ ಸದಸ್ಯ ಪ್ರಸಾದ್ ಶೆಟ್ಟಿ ಎಣಿಂಜೆ ಮಾತನಾಡಿ ನಮ್ಮ ಶಾಲೆಯ ಮಕ್ಕಳೂ ಖಾಸಗಿ ಶಾಲೆಯ ಮಕ್ಕಳಂತೆ ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯಬೇಕು ಎಂಬ ಕಲ್ಪನೆಯಲ್ಲಿ ಕಳೆದ ಎರಡು ವರ್ಷಗಳಿಂದ ಉತ್ತಮ ಗುಣಮಟ್ಟದ ಬರೆಯುವ ಪುಸ್ತಕಗಳನ್ನು ದಾನಿಗಳ ಮೂಲಕ ನೀಡಲಾಗುತ್ತಿದೆ. ಇದಕ್ಕೆ ಸ್ಪಂದಿಸಿದ ಸದಾನಂದ ಶೆಟ್ಟಿ ಹಾಗೂ ಜಗನ್ನಾಥ ಶೆಟ್ಟಿಯವರಿಗೆ ಕೃತಜ್ಞತೆಗಳು. ಅದೇ ರೀತಿ ಪುಸ್ತಕ ಪಡೆದ ಮಕ್ಕಳು ಮುಂದೆ ಒಳ್ಳೆಯ ವಿದ್ಯಾಭ್ಯಾಸ ಪಡೆದು ಶಾಲೆ ಹಾಗೂ ಊರಿಗೆ ಉತ್ತಮ ಹೆಸರನ್ನು ತಂದುಕೊಡುವುದಲ್ಲದೇ ಉದ್ಯೋಗ ಸಿಕ್ಕಿದ ನಂತರ ಬಡ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಸಹಾಯ ಹಸ್ತ ಚಾಚಬೇಕು ಈ ಮೂಲಕ ಪುಸ್ತಕ ನೀಡಿದ ದಾನಿಗಳಿಗೆ ಕೃತಜ್ಞತೆ ಸಲ್ಲಿಸಬೇಕು ಎಂದರು.


ಈ ಸಂದರ್ಭದಲ್ಲಿ ಎಸ್. ಡಿ. ಎಂ. ಸಿ ಉಪಾಧ್ಯಕ್ಷ ದಿವಾಕರ್ ಕುರುವ, ಸದಸ್ಯರುಗಳಾದ ಶೋಭಾ ಪಡ್ಲಾಡಿ, ಬೇಬಿ ಪಡ್ಲಾಡಿ, ಅಧ್ಯಾಪಕ ವೃಂದವರು ಉಪಸ್ಥಿತರಿದ್ದರು.
ಪ್ರಭಾರ ಮುಖ್ಯ ಶಿಕ್ಷಕರಾದ ಯೋಗೀಶ್ ಸ್ವಾಗತಿಸಿ ಸಹ ಶಿಕ್ಷಕ ಮಧು ಧನ್ಯವಾದವಿತ್ತರು.

Related posts

ಕೊಕ್ಕಡದಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ

Suddi Udaya

ಮಿತ್ತಬಾಗಿಲು ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ಸುಳ್ಯ ಕೆರ್ಪಳ ಪಯಸ್ಸಿನಿ ಯುವಕ ಮಂಡಲ ವತಿಯಿಂದ ಲಕ್ಷ್ಮಿನಾರಾಯಣರವರಿಗೆ ಪಯಸ್ಸಿನಿ ಗೌರವ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಬಳ್ಳಮಂಜ 27ನೇ ವರ್ಷದ ಶೇಷ-ನಾಗ ಕೋಡುಕರೆ ಕಂಬಳ: ಫಲಿತಾಂಶ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿಯ ರಥೋತ್ಸವ

Suddi Udaya
error: Content is protected !!