25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ಪಡ್ಲಾಡಿ ದ.ಕ.ಜಿ.ಪಂ ಶಾಲೆಯ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಪಡ್ಲಾಡಿ ಲಾಯಿಲ ಮಕ್ಕಳಿಗೆ ಜೂ.26ರಂದು ಉಚಿತ ಬರೆಯುವ ಪುಸ್ತಕ ವಿತರಣೆ ನಡೆಯಿತು.


ಕಾರ್ಯಕ್ರಮದಲ್ಲಿ ಉಚಿತವಾಗಿ ಪುಸ್ತಕ ನೀಡಿದ ದಾನಿಗಳಾದ ಉದ್ಯಮಿ ಲಾಯಿಲ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಸದಾನಂದ ಶೆಟ್ಟಿ ಹಾಗೂ ಗುತ್ತಿಗೆದಾರರಾದ ಜಗನ್ನಾಥ ಶೆಟ್ಟಿ ಕರ್ನೋಡಿ ಭಾಗವಹಿಸಿ ಮಕ್ಕಳಿಗೆ ಪುಸ್ತಕ ವಿತರಿಸಿ ಶುಭ ಹಾರೈಸಿದರು.
ಗ್ರಾಮ ಪಂಚಾಯತ್ ಸದಸ್ಯ ಪ್ರಸಾದ್ ಶೆಟ್ಟಿ ಎಣಿಂಜೆ ಮಾತನಾಡಿ ನಮ್ಮ ಶಾಲೆಯ ಮಕ್ಕಳೂ ಖಾಸಗಿ ಶಾಲೆಯ ಮಕ್ಕಳಂತೆ ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯಬೇಕು ಎಂಬ ಕಲ್ಪನೆಯಲ್ಲಿ ಕಳೆದ ಎರಡು ವರ್ಷಗಳಿಂದ ಉತ್ತಮ ಗುಣಮಟ್ಟದ ಬರೆಯುವ ಪುಸ್ತಕಗಳನ್ನು ದಾನಿಗಳ ಮೂಲಕ ನೀಡಲಾಗುತ್ತಿದೆ. ಇದಕ್ಕೆ ಸ್ಪಂದಿಸಿದ ಸದಾನಂದ ಶೆಟ್ಟಿ ಹಾಗೂ ಜಗನ್ನಾಥ ಶೆಟ್ಟಿಯವರಿಗೆ ಕೃತಜ್ಞತೆಗಳು. ಅದೇ ರೀತಿ ಪುಸ್ತಕ ಪಡೆದ ಮಕ್ಕಳು ಮುಂದೆ ಒಳ್ಳೆಯ ವಿದ್ಯಾಭ್ಯಾಸ ಪಡೆದು ಶಾಲೆ ಹಾಗೂ ಊರಿಗೆ ಉತ್ತಮ ಹೆಸರನ್ನು ತಂದುಕೊಡುವುದಲ್ಲದೇ ಉದ್ಯೋಗ ಸಿಕ್ಕಿದ ನಂತರ ಬಡ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಸಹಾಯ ಹಸ್ತ ಚಾಚಬೇಕು ಈ ಮೂಲಕ ಪುಸ್ತಕ ನೀಡಿದ ದಾನಿಗಳಿಗೆ ಕೃತಜ್ಞತೆ ಸಲ್ಲಿಸಬೇಕು ಎಂದರು.


ಈ ಸಂದರ್ಭದಲ್ಲಿ ಎಸ್. ಡಿ. ಎಂ. ಸಿ ಉಪಾಧ್ಯಕ್ಷ ದಿವಾಕರ್ ಕುರುವ, ಸದಸ್ಯರುಗಳಾದ ಶೋಭಾ ಪಡ್ಲಾಡಿ, ಬೇಬಿ ಪಡ್ಲಾಡಿ, ಅಧ್ಯಾಪಕ ವೃಂದವರು ಉಪಸ್ಥಿತರಿದ್ದರು.
ಪ್ರಭಾರ ಮುಖ್ಯ ಶಿಕ್ಷಕರಾದ ಯೋಗೀಶ್ ಸ್ವಾಗತಿಸಿ ಸಹ ಶಿಕ್ಷಕ ಮಧು ಧನ್ಯವಾದವಿತ್ತರು.

Related posts

ಅನರ್ಹ ಬಿಪಿಎಲ್ ಕಾರ್ಡ್ ದಾರರಿಗೆ ನೋಟೀಸ್ ಜಾರಿ ಮಾಡಿದ ಆಹಾರ ಇಲಾಖೆ: ಬೆಳ್ತಂಗಡಿ ತಾಲೂಕಿನಲ್ಲಿ 2683 ಕಾರ್ಡ್ ರದ್ದತಿಗೆ ಸೂಚನೆ

Suddi Udaya

ಕೋರಂ ಕೊರತೆ ಹಾಗೂ ಇಲಾಖಾಧಿಕಾರಿಗಳ ಗೈರುಹಾಜರಿಯಲ್ಲಿ ರದ್ದುಗೊಂಡ ಮಡಂತ್ಯಾರು ಗ್ರಾಮಸಭೆ

Suddi Udaya

ಉಜಿರೆ: ಶ್ರೀ ಧ. ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 75ನೇ ವರ್ಷದ ಜನ್ಮದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಶೃಂಗೇರಿ ಶ್ರೀ ಶಾರದಾ ಪೀಠದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಭೇಟಿ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya

ಚಿಬಿದ್ರೆ ಮತ್ತು ನೆರಿಯ ಗ್ರಾಮಗಳಲ್ಲಿ ಹಾನಿಗೊಳಗಾದ ಸದಸ್ಯರ ತೋಟಗಳಿಗೆ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಂಘದ ಪದಾಧಿಕಾರಿಗಳ ಭೇಟಿ

Suddi Udaya
error: Content is protected !!