April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು : ಜಾನುವಾರುಗಳಿಗೆ ಚರ್ಮಗಂಟು ರೋಗದ ವಿರುದ್ಧ ಲಸಿಕಾ ಅಭಿಯಾನ

ಇಂದಬೆಟ್ಟು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಬೆಳ್ತಂಗಡಿ ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟ ನಿಯಮಿತ, ಕುಲಶೇಖರ, ಮಂಗಳೂರು ಹಾಲು ಉತ್ಪಾದಕರ ಸಂಘ, ಕಜೆ, ಇಂದಬೆಟ್ಟು ಇವರುಗಳ ಸಂಯುಕ್ತ ಆಶ್ರಯದಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗದ ವಿರುದ್ಧ ಲಸಿಕಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಜೂ.26 ರಂದು ಉಮೇಶ್ ಗುಡಿಗಾರ್ ಇವರ ಡೈರಿ ಫಾರ್ಮ್ ನಲ್ಲಿ ಜರುಗಿತು.

ಇಂದಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಉಷಾಲತಾ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಸಭೆಯಲ್ಲಿ ಕಜೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಉಮೇಶ್ ಗೌಡ, ಡಾ. ರವಿಕುಮಾರ್ ಎಮ್, ಮುಖ್ಯ ಪಶು ವೈದ್ಯಾಧಿಕಾರಿ (ಆಡಳಿತ) ಹಾಗೂ ಡಾ. ಗಣಪತಿ ಸಹಾಯಕ ವ್ಯವಸ್ಥಾಪಕರು ಕೆ.ಎಂ.ಎಫ್ ಬೆಳ್ತಂಗಡಿ, ಪಶುವೈದ್ಯಕೀಯ ಪರೀಕ್ಷಕರಾದ ಪ್ರಶಾಂತ್, ರಾಜವರ್ಮ ಜೈನ್, ಶ್ರೀಧರ್ ಉಪಸ್ಥಿತರಿದ್ದರು.

Related posts

ಬೆಳೆ ವಿಮೆ ಸೌಲಭ್ಯ ಇದುವರೆಗೂ ದೊರೆಯದಿರುವ ಕುರಿತು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಮಲ್ಲಿಕಾರ್ಜುನರಿಗೆ ಪತ್ರ

Suddi Udaya

ಕೋಳಿ ತ್ಯಾಜ್ಯದಿಂದ ಅಶುದ್ಧಿಯಾಗುತ್ತಿರುವ ಶಿಶಿಲದ‌ ” ಕಪಿಲೆ”

Suddi Udaya

SKSSF ಮದ್ದಡ್ಕ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕೊಯ್ಯೂರು : ಕಲ್ಪಾಮೃತ -ಸ್ವಾನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭ

Suddi Udaya

ಬ್ರೈಟ್ ಇಂಡಿಯಾ, ಮದ್ದಡ್ಕ ವತಿಯಿಂದ ವಿಕಲಚೇತನರಿಗೆ ಸಾಧನಾ ಸಲಕರಣೆಗಳ ವಿತರಣೆ

Suddi Udaya

ಬೆಳ್ತಂಗಡಿ : ವಿಕಲಚೇತನ ವ್ಯಕ್ತಿಯನ್ನು ಮನೆಯವರು ಎತ್ತಿಕೊಂಡು ಮತಗಟ್ಟೆಗೆ ಹೋಗಿ ಮತ ಚಲಾವಣೆ

Suddi Udaya
error: Content is protected !!