September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು : ಜಾನುವಾರುಗಳಿಗೆ ಚರ್ಮಗಂಟು ರೋಗದ ವಿರುದ್ಧ ಲಸಿಕಾ ಅಭಿಯಾನ

ಇಂದಬೆಟ್ಟು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಬೆಳ್ತಂಗಡಿ ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟ ನಿಯಮಿತ, ಕುಲಶೇಖರ, ಮಂಗಳೂರು ಹಾಲು ಉತ್ಪಾದಕರ ಸಂಘ, ಕಜೆ, ಇಂದಬೆಟ್ಟು ಇವರುಗಳ ಸಂಯುಕ್ತ ಆಶ್ರಯದಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗದ ವಿರುದ್ಧ ಲಸಿಕಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಜೂ.26 ರಂದು ಉಮೇಶ್ ಗುಡಿಗಾರ್ ಇವರ ಡೈರಿ ಫಾರ್ಮ್ ನಲ್ಲಿ ಜರುಗಿತು.

ಇಂದಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಉಷಾಲತಾ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಸಭೆಯಲ್ಲಿ ಕಜೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಉಮೇಶ್ ಗೌಡ, ಡಾ. ರವಿಕುಮಾರ್ ಎಮ್, ಮುಖ್ಯ ಪಶು ವೈದ್ಯಾಧಿಕಾರಿ (ಆಡಳಿತ) ಹಾಗೂ ಡಾ. ಗಣಪತಿ ಸಹಾಯಕ ವ್ಯವಸ್ಥಾಪಕರು ಕೆ.ಎಂ.ಎಫ್ ಬೆಳ್ತಂಗಡಿ, ಪಶುವೈದ್ಯಕೀಯ ಪರೀಕ್ಷಕರಾದ ಪ್ರಶಾಂತ್, ರಾಜವರ್ಮ ಜೈನ್, ಶ್ರೀಧರ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಕುಣಿತ ಭಜನ ತರಬೇತುದಾರರಿಂದ ಕೊಡಗು ಜಿಲ್ಲೆಯಲ್ಲಿ ಕುಣಿತ ಭಜನಾ ತರಬೇತಿ ಪ್ರಾರಂಭ

Suddi Udaya

ಧರ್ಮಸ್ಥಳ ಬೂತ್ ಸಂಖ್ಯೆ 163ರ ಅಧ್ಯಕ್ಷ ಉಮಾನಾಥ್ ರವರ ಮನೆಗೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ಶ್ರೀ ಕ್ಷೇತ್ರ ಪಾರೆಂಕಿ ಶ್ರೀ ಮಹಿಷಮರ್ದಿನೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೂತನ ಅಧ್ಯಕ್ಷರಾಗಿ ಮಾಲಾಡಿ ಗ್ರಾ. ಪಂ. ಅಧ್ಯಕ್ಷ, ಯುವ ನಾಯಕ ಪುನೀತ್ ಕುಮಾರ್ ಅವಿರೋಧ ಆಯ್ಕೆ

Suddi Udaya

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಭಡ್ತಿಗೊಂಡ ಕೊರಗಪ್ಪ ಟಿ.ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಚುನಾವಣಾ ಕಾರ್ಯಕ್ಕೆ 18 ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ

Suddi Udaya

ಕೊಕ್ಕಡ : ಗಾಳಿ ಮಳೆಗೆ ಹಾರಿ ಹೋದ ಮನೆಯ ಛಾವಣಿ

Suddi Udaya
error: Content is protected !!