23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಆಟೋರಿಕ್ಷಾ ಜಖಂ ಆದ ವಿಚಾರದಲ್ಲಿ ಪರಿಹಾರಕ್ಕಾಗಿ ಅನುಮತಿ ಪಡೆಯದೆ ಸಾರ್ವಜನಿಕ ರಸ್ತೆಯಲ್ಲಿ ಕೂತು ವಾಹನ ಸಂಚಾರಕ್ಕೆ ತಡೆಒಡ್ಡಿ ಜನಸಂಚಾರಕ್ಕೆ ಅಡ್ಡಿ ಉಂಟುಮಾಡಿದವರ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಉಜಿರೆ ಮಾವಂತೂರು ಲಾಡ್ಜ್ ಎದುರು ಪಾರ್ಕ್ ಮಾಡಿದ್ದ ಅಟೋರಿಕ್ಷಾ ಒಂದರ ಮೇಲೆ ಮರಬಿದ್ದು ಅಟೋರಿಕ್ಷಾ ಜಖಂ ಆದ ವಿಚಾರದಲ್ಲಿ ಪರಿಹಾರಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಅಥವಾ ಪೊಲೀಸ್ ಇಲಾಖೆಯಿಂದ ಯಾವುದೇ ಪೂರ್ವಾನುಮತಿ ಪಡೆಯದೇ ಕಾನೂನು ಬಾಹಿರವಾಗಿ ಅಕ್ರಮವಾಗಿ ಜನರನ್ನು ಗುಂಪು ಸೇರಿಸಿ ಸಾರ್ವಜನಿಕ ರಸ್ತೆಯಲ್ಲಿ ಕೂತು ವಾಹನ ಸುಗಮ ಸಂಚಾರಕ್ಕೆ ತಡೆಒಡ್ಡಿ ಜನಸಂಚಾರಕ್ಕೆ ಅಡ್ಡಿ ಉಂಟುಮಾಡಿದವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆ ಸಹಾಯಕ ಪೊಲೀಸ್ ಉಪ ನಿರೀಕ್ಷಕ ರಾಮಚಂದ್ರ ರವರು ಜೂ. 24 ರಂದು ಉಜಿರೆ ರೌಂಡ್ಸ್ ಕರ್ತವ್ಯದಲ್ಲಿ ನೇಮಿಸಿದಂತೆ ರೌಂಡ್ಸ್ ಕರ್ತವ್ಯದಲ್ಲಿದ್ದು, ಚಾರ್ಮಾಡಿ ರೋಡ್ ಕಡೆಯಿಂದ ಬೆಳ್ತಂಗಡಿ ಸಂಚಾರ ಠಾಣೆ ಕಡೆ ಬರುತ್ತಿರಲು ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಉಜಿರೆ ಪೇಟೆಯ ಮಾವಂತೂರು ಲಾಡ್ಜ್ ಎದುರುಗಡೆ ಕೆಲವು ಜನರು ಸೇರಿ ರಸ್ತೆ ತಡೆನಡೆಸಿ ಅಂದರೆ ಸಾರ್ವಜನಿಕ ಡಾಮಾರು ರಸ್ತೆಯ ಮಧ್ಯೆಕೂತು ವಾಹನ ಸಂಚಾರ ಹಾಗೂ ಜನಸಂಚಾರಕ್ಕೆ ತಡೆ ಒಡ್ಡುತ್ತಿದ್ದ ಸಮಯ ಸ್ಥಳಕ್ಕೆ ಹೋಗಿ ನೋಡಲಾಗಿ ನೋಡಿ ಪರಿಚಯ ಇರುವ ಪ್ರವೀಣ್ ಫೆರ್ನಾಂಡಿಸ್, ರಮೇಶ ಗಾಂಧಿನಗರ, ಶೀನಗಾಂಧಿನಗರ, ಇಕ್ಷಾಲ್ ಅತ್ತಾಜೆ, ಸಂತೋಷ್ ಉಜಿರೆ, ಉಮೇಶ ಆಚಾರ್ಯ, ಅಣು ಗಾಂಧಿನಗರ, ಸುಜನ್ ಪಜಿರಡ್ಡ, ಬಾಬು ಗಾಂಧಿನಗರ, ಗಿರೀಶ ಪೆರ್ಲ, ಗೋಪಾಲ ಗಾಂಧಿನಗರ, ಗಣೇಶ ಬಡೆಕೊಟ್ಟು, ಉಮರ್ ಟಿ.ಬಿಕ್ರಾಸ್, ರಂಜನ್ ಗಾಂಧಿನಗರ ಮತ್ತು ಇತರರು ಸ್ಥಳದಲ್ಲಿ ಸೇರಿದ್ದು ವಿಚಾರಿಸಲಾಗಿ, ಮಾವಂತೂರುಲಾಡ್ಜ್ ಎದುರು ಪಾರ್ಕ್ ಮಾಡಿದ್ದ ಅಟೋರಿಕ್ಷಾ ಒಂದರ ಮೇಲೆ ಮರಬಿದ್ದು ಅಟೋರಿಕ್ಷಾ ಜಖಂ ಆದ ವಿಚಾರದಲ್ಲಿ ಪರಿಹಾರಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಅಥವಾ ಪೊಲೀಸ್ ಇಲಾಖೆಯಿಂದ ಯಾವುದೇ ಪೂರ್ವಾನುಮತಿ ಪಡೆಯದೇ ಕಾನೂನು ಬಾಹಿರವಾಗಿ ಅಕ್ರಮವಾಗಿ ಜನರನ್ನು ಗುಂಪು ಸೇರಿಸಿ ಸಾರ್ವಜನಿಕ ರಸ್ತೆಯಲ್ಲಿ ಕೂತು ವಾಹನ ಸುಗಮ ಸಂಚಾರಕ್ಕೆ ತಡೆಒಡ್ಡಿ ಜನಸಂಚಾರಕ್ಕೆ ಅಡ್ಡಿ ಉಂಟುಮಾಡಿದವರ ವಿರುದ್ಧ ಪ್ರಕರಣ ದಾಖಲಾಗಿದೆ.

Related posts

ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬೆಳ್ತಂಗಡಿ ಉಪ ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ

Suddi Udaya

ಕರ್ನಾಟಕ ಮುಸ್ಲಿಮ್ ಜಮಾಅತ್ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್‌ನ ನೂತನ ಸಮಿತಿ ರಚನೆ

Suddi Udaya

ಇಂದಬೆಟ್ಟು: ಬಲ್ಲಾಳ್ ಬಸ್ಸಿನ ಚಾಲಕ ಸಂತೋಷ್ ಗೌಡ ಹೃದಯಾಘಾತದಿಂದ ನಿಧನ

Suddi Udaya

ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿನಿಯನ್ನು ಅಪಹರಣಕ್ಕೆ ಯತ್ನಿಸಿದ ಮುಸುಕುಧಾರಿಗಳು: ಚೂರಿಯಿಂದ ಇರಿದು ಹಲ್ಲೆ: ಗಾಯಗೊಂಡ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲು

Suddi Udaya

ಎ.6: ಬೆಂಗಳೂರು ಶ್ರೀ‌ ಪ್ರಸನ್ನ ಕಾರ್ಯಸಿದ್ದಿ ಬೈಲಾಂಜನೇಯ ದೇವಾಲಯದಲ್ಲಿ ರಾಮನವಮಿ ಪ್ರಯುಕ್ತ ನಡೆಯುವ ಭಜನಾ ಕಾರ್ಯಕ್ರಮದಲ್ಲಿ ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿ ಹಾಗೂ ಸವಣಾಲು ಪಲ್ಗುಣಿ ಭಜನಾ ತಂಡ

Suddi Udaya

ಬಂದಾರು: ಒಟೆಚ್ಚಾರ್ ನಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಕೃಷಿ ನಾಶ

Suddi Udaya
error: Content is protected !!