25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಮತ್ತು ಆಪ್ತ ಸಮಾಲೋಚನಾ ಕಾರ್ಯಾಗಾರ

ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಅಧಿಕಾರಿ ಕಚೇರಿ ಬೆಳ್ತಂಗಡಿ , ಸ್ನೇಹ ಕ್ಲಿನಿಕ್ ಬೆಳ್ತಂಗಡಿ ಮತ್ತು ಸರಕಾರಿ ಪ್ರೌಢಶಾಲೆ ಕಾಶಿಪಟ್ಣ ಇವುಗಳ ಸಹಯೋಗದೊಂದಿಗೆ ಆರೋಗ್ಯ ಮಾಹಿತಿ ಮತ್ತು ಆಪ್ತ ಸಮಾಲೋಚನಾ ಇತ್ತೀಚೆಗೆ ಸರಕಾರಿ ಪ್ರೌಢಶಾಲೆ ಕಾಶಿಪಟ್ಣದಲ್ಲಿ ಜರುಗಿತು.

ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಅಮ್ಮಿ ಸಿಸ್ಟರ್ ವಿದ್ಯಾರ್ಥಿಗಳಿಗೆ ಡೆಂಗ್ಯೂ ಮತ್ತು ಮಲೇರಿಯಾ ರೋಗ ಬಾರದಂತೆ ತಡೆಯುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಸೇವಿಸಬೇಕಾದ ಆಹಾರಗಳ ಬಗ್ಗೆ ಸವಿವರ ಮಾಹಿತಿ ನೀಡಿದರು. ಸ್ನೇಹ ಕ್ಲಿನಿಕ್ ನ ಆಪ್ತ ಸಮಾಲೋಚಕಿ ಶ್ರೀಮತಿ ರಮ್ಯಾ ಹದಿಹರೆಯದ ಸಮಸ್ಯೆಗಳ ಬಗ್ಗೆ ವಿದ್ಯಾರ್ಥಿಗಳ ಗಮನ ಸೆಳೆಯುತ್ತಾ ಆಪ್ತ ಸಮಾಲೋಚನೆ ನಡೆಸಿದರು.

ಶಾಲಾ ಮುಖ್ಯ ಶಿಕ್ಷಕ ಶಶಿಧರ್ ಕೆ ಅವರು ಸ್ವಾಗತಿಸಿದರು. ಶ್ರೀಮತಿ ಸೌಮ್ಯ ನಿರೂಪಿಸಿ ಶ್ರೀಮತಿ ಹರಿಣಾಕ್ಷಿ ಧನ್ಯವಾದವಿತ್ತರು. ಶಿಕ್ಷಕರಾದ ದೇವುದಾಸ್ ನಾಯಕ್, ಶ್ರೀಮತಿ ಸರಿನ್ ತಾಜ್ ಶ್ರೀಮತಿ ಸುಜಾತ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

Related posts

ಡಿ.3: ಬೆಳ್ತಂಗಡಿ ಹಳೆಕೋಟೆ ಜೋರ್ಡನ್ ರಿವರ್ ವೆಲ್ ವ್ಯೂ ರೂಮ್ಸ್ & ಸೂಟ್ಸ್ ವಿಸ್ಕೃತ ಕಟ್ಟಡದ ಉದ್ಘಾಟನೆ

Suddi Udaya

ಉಜಿರೆ: ಶ್ರೀ ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ಮೌಲ್ಯಧಾರಿತ ಶಿಕ್ಷಣ ತರಗತಿಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಬಿ. ನಿರಂಜನ್ ಬಾವಂತಬೆಟ್ಟುರವರಿಗೆ ನುಡಿನಮನ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಸೇವಾ ಟ್ರಸ್ಟ್ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ

Suddi Udaya

ಅರಸಿನಮಕ್ಕಿ: ವಿಶ್ವ ಮಹಿಳಾ ದಿನ ಹಾಗೂ ಅರಸಿನಮಕ್ಕಿ ಗೊಂಚಲು ಸ್ತ್ರೀ ಶಕ್ತಿ ಸಂಘದ ಬೆಳ್ಳಿಹಬ್ಬದ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ

Suddi Udaya

ಬೆಳಾಲು: ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!