23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕುಂಭಶ್ರೀ ಶಾಲೆಯಲ್ಲಿ ಪಠ್ಯೇತರ ಚಟುವಟಿಕೆ

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜು ನಿಟ್ಟಡೆ ವೇಣೂರು ಇಲ್ಲಿ ಶಿಕ್ಷಣಕ್ಕೆ ಮಾತ್ರ ಮಹತ್ವವನ್ನು ನೀಡುವುದಲ್ಲದೆ ಪಠ್ಯೇತರ ಚಟುವಟಿಕೆಗಳಿಗೆ ಪ್ರಾಮುಖ್ಯತೆಯನ್ನು ನೀಡುತ್ತಾ ಬಂದಿದ್ದು ವಾರದಲ್ಲಿ ಒಂದು ದಿನ ಕರಾಟೆ, ಯೋಗಸನ ,ಸಂಗೀತ ,ಡ್ಯಾನ್ಸ್ ಯಕ್ಷಗಾನ, ಭರತನಾಟ್ಯ ತರಬೇತಿಗಳನ್ನು ನುರಿತ ತರಬೇತುದಾರರಿಂದ ನೀಡಲಾಗುತ್ತಿದೆ. ಅದೇ ರೀತಿ ನಮ್ಮ ಶಾಲಾ ಸಂಸ್ಥಾಪಕರಾದ ಗಿರೀಶ್ ಕೆ ಹೆಚ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಅಶ್ವಿತ್ ಕುಲಾಲ್ ರವರ ಮಾರ್ಗದರ್ಶನದಲ್ಲಿ ವಿಜ್ಞಾನ ಪರಿಸರ, ಸಾಂಸ್ಕೃತಿಕ ,ಭಾಷಾ ಸಮಾಜ ,ಎನ್ ಸಿ ಸಿ ಸೇವಾದಳ ಹಲವಾರು ವಿಭಾಗಗಳಾಗಿ ವಿಂಗಡಿಸಲಾಯಿತು.

ಆಯಾಯ ಕ್ಲಬ್ ನ ಶಿಕ್ಷಕರು ನಾಯಕರನ್ನು ಆಯ್ಕೆ ಮಾಡಿ ಗುಂಪಿನ ಹೆಸರನ್ನು ಚಾರ್ಟಿನ ಮೂಲಕ ಎಲ್ಲಾ ವಿದ್ಯಾರ್ಥಿಗಳ ಸಹಕಾರದಿಂದ ವಿವಿಧ ರೀತಿಯಲ್ಲಿ ಅಲಂಕಾರಗೊಳಿಸಿ, ಕ್ಲಬ್ ನ ಸಂಯೋಜಕರಾದ ಉಪನ್ಯಾಸಕಿ ಪ್ರಜ್ಞ, ಶಿಕ್ಷಕಿ ಗೌತಮಿ, ಶಿಕ್ಷಕಿ ಭವಾನಿ ದಿವ್ಯ ಇವರ ಮುಂದಾಳತ್ವದಲ್ಲಿ ಉದ್ಘಾಟಿಸಲಾಯಿತು. ಕಬ್ಬಿನ ಶಿಕ್ಷಕರಾದಂತಹ ಸಾಂಸ್ಕೃತಿಕ ಕ್ಲಬ್ -ವಿನಯ್ ಮತ್ತು ಅಕ್ಷತ , ವಿಜ್ಞಾನ ಕ್ಲಬ್-ವಾಣಿ ಮತ್ತು ಉಷಾ, ಭಾಷಾ ಕ್ಲಬ್-ಮಮತಾ ಮತ್ತು ಮನೋಹರ್, ಸೇವಾದಳ ಕ್ಲಬ್ -ಶುಭ ಮತ್ತು ಚೈತ್ರ ಶ್ರೀ, ಪರಿಸರ ಕ್ಲಬ್ -ಶ್ವೇತಾ ಮತ್ತು ಸುಜಾತ, ಎನ್‌ ಸಿ ಸಿ -ಪವಿತ್ರ ಮತ್ತು ಸುಮನ್, ಸಮಾಜ ಕ್ಲಬ್- ಶ್ವೇತಾ ಮತ್ತು ಅಕ್ಷತ ಇವರು ಮಕ್ಕಳಿಗೆ ಪ್ರೋತ್ಸಾಹಿಸಿದರು.

Related posts

ಮಳೆಗೆ ಹಾನಿಗೊಳಗಾದ ನಾವರ ಜಾಲಪಲ್ಕೆ ದಾಮೋದರ ಪೂಜಾರಿ ರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

Suddi Udaya

ಮೇಲಂತಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಗಣೇಶೋತ್ಸವ ಆಚರಣೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಪುಂಜಾಲಕಟ್ಟೆ ವಲಯಮಟ್ಟದ ಪ್ರೌಢಶಾಲಾ ವಿಭಾಗದ ತ್ರೋಬಾಲ್ ಪಂದ್ಯಾಟ ಉದ್ಘಾಟನೆ

Suddi Udaya

ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನ : ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಂದ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಂಡಿಂಜೆ: ವಿಶ್ವನಾಥ ಪೂಜಾರಿ ನಿಧನ

Suddi Udaya

ಧರ್ಮಸ್ಥಳ: ಬೋಳಿಯರ್ ನಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಗೆ ಗುದ್ದಿದ್ದ ಕಾಡಾನೆ: ಸ್ಕೂಟರ್ ಗೆ ಹಾನಿ

Suddi Udaya
error: Content is protected !!