25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ಶ್ರೀ.ಧ.ಮಂ ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ  ಮತ್ತು ನೃತ್ಯ ತರಗತಿಗಳ ಉದ್ಘಾಟನೆ

ಪುದುವೆಟ್ಟು : ಶ್ರೀ.ಧ.ಮಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟುವಿನಲ್ಲಿ ಯಕ್ಷಗಾನ  ಮತ್ತು ನೃತ್ಯ ತರಗತಿಗಳ ಉದ್ಘಾಟನೆಯು ನಡೆಯಿತು.

ಸ್ಥಳೀಯ ಉದ್ಯಮಿ ಹಾಗೂ ಪುದುವೆಟ್ಟು ಗ್ರಾಮ ಪಂಚಾಯತಿನ ಮಾಜಿ ಅಧ್ಯಕ್ಷೆಯಾದ ಶ್ರೀಮತಿ ವಾರಿಜಾ. ಎಸ್ ಉದ್ಘಾಟನೆಯನ್ನು ನೆರವೇರಿಸಿ ವಿದ್ಯಾರ್ಥಿ ಜೀವನದಲ್ಲಿ ಪಠ್ಯ ಚಟುವಟಿಕೆಗಳಷ್ಟೇ ಸಹ ಪಠ್ಯ ಚಟುವಟಿಕೆಗಳು ಕೂಡ ಪ್ರಮುಖ ಪಾತ್ರವನ್ನು ವಹಿಸುತ್ತವೆ. ಆದುದರಿಂದ ವಿದ್ಯಾರ್ಥಿಗಳು ಸಹ ಪಠ್ಯ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದು ಅಗತ್ಯ ಎಂದು ಹೇಳಿದರು.

ಯಕ್ಷಗಾನ ತರಬೇತುದರರಾದ ಎಸ್.ಡಿ.ಎಂ.ಕಲಾ ಕೇಂದ್ರದ ಯಕ್ಷಗಾನ ಗುರುಗಳು ಅರುಣ್ ಕುಮಾರ್ ಹಾಗೂ ನೃತ್ಯ ತರಬೇತುದಾರರಾದ ಎಸ್ ಡಿ ಎಮ್ ಕಲಾ ಕೇಂದ್ರದ ಕುಮಾರಿ ಚೈತ್ರ ಭಟ್ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಹಿರಿಯ ಶಿಕ್ಷಕಿ ಶ್ರೀಮತಿ ತೇಜಾವತಿಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯರಾದ ಶೀನಪ್ಪ ಗೌಡ  ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಶ್ರೀಮತಿ ಶೀಲ.ಎನ್. ಸ್ವಾಗತಿಸಿದರು ಪವನ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು . ಶ್ರೀಮತಿ ಪುಷ್ಪಲತಾ ಧನ್ಯವಾದ ಸಮರ್ಪಿಸಿದರು. ಎಲ್ಲಾ ಶಿಕ್ಷಕ ಶಿಕ್ಷಕಿಯರು ಉಪಸ್ಥಿರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related posts

ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಸಿದ್ಧಶ್ರೀ ಪ್ರಶಸ್ತಿ

Suddi Udaya

ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಖರೀದಿಯ ಮೇಲೆ ಶೇ.20 ಸ್ಪೆಷಲ್ ಡಿಸ್ಕೌಂಟ್ ಆಫರ್

Suddi Udaya

ಬೆಳ್ತಂಗಡಿ: ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಕೆ ಗಂಗಾಧರ ಗೌಡರವರ ನೂತನ ಕಛೇರಿ ಉದ್ಘಾಟನೆ

Suddi Udaya

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಾಗಿ ಜನಾರ್ದನ ಗೌಡ ಆಯ್ಕೆ

Suddi Udaya

ಮಂಗಳೂರು ಮಾಂಡೋವಿ ಮೋಟಾರ್ಸ್ ಉದ್ಯೋಗಿ, ಬೆಳ್ತಂಗಡಿ ತಾಲೂಕಿನ ಮುಂಡೂರು ನಿವಾಸಿ ಬೈಕ್ ಅಪಘಾತದಲ್ಲಿ ಮೃತ್ಯು

Suddi Udaya

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕಿ ಶ್ರದ್ದಾ ಶೆಟ್ಟಿ ಎಣಿಂಜೆ ರವರು ಸೌತಡ್ಕ ದೇವಸ್ಥಾನಕ್ಕೆ ಭೇಟಿ, ವಿಶೇಷ ಪೂಜೆ

Suddi Udaya
error: Content is protected !!