25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಬೆಳ್ತಂಗಡಿ 3 ಸ್ಟಾರ್ ವೈನ್ಸ್’ ಶಾಪ್ ಗೆ ಅಬಕಾರಿ ಇಲಾಖೆಯಿಂದ ಬೀಗ

ಬೆಳ್ತಂಗಡಿ : ಮಾಜಿ ಶಾಸಕ ವಸಂತ ಬಂಗೇರ ನಿಧನದ ಬಳಿಕ ಅಬಕಾರಿ ಕಾನೂನು ಪ್ರಕಾರ ಮಾಲೀಕತ್ವ ಬದಲಾಯಿಸದ ಕಾರಣದಿಂದ ಬೆಳ್ತಂಗಡಿಯ ‘3 ಸ್ಟಾರ್ ವೈನ್ಸ್ ಶಾಪ್ ಗೆ ಬೆಳ್ತಂಗಡಿ ಅಬಕಾರಿ ಇಲಾಖೆ ಬೀಗ ಹಾಕಿದೆ.
ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ರುವ ಗುರುನಾರಾಯಣ ವಾಣಿಜ್ಯ ಸಂಕೀರ್ಣದ ನೆಲಮಹಡಿಯಲ್ಲಿ ಕಾರ್ಯಾಚರಿಸುತ್ತಿದ್ದ ದಿ. ಮಾಜಿ ಶಾಸಕ ಕೆ.ವಸಂತ ಬಂಗೇರರ ಮಾಲೀಕತ್ವದ ‘3 ಸ್ಟಾರ್ ವೈನ್ಸ್ ಶಾಪ್’ ಗೆ ಮಾಲೀಕತ್ವ ಬದಲಾವಣೆ ಮಾಡದ ಕಾರಣದಿಂದ ಬೆಳ್ತಂಗಡಿ ಅಬಕಾರಿ ಇಲಾಖೆ ಜೂ.22 ರಂದು ಸಂಜೆ 6 ಗಂಟೆಗೆ ಬೀಗ ಹಾಕಿ ಸಿಲ್ ಹಾಕಿದೆ.


ಕರ್ನಾಟಕ ಅಬಕಾರಿ ಕಾನೂನು ಪ್ರಕಾರ ಅಬಕಾರಿ ಮದ್ಯ ಮಾರಾಟ ಮಾಡುವ ಮಾಲೀಕ ಮರಣದ ಬಳಿಕ 45 ದಿನದ ಒಳಗಡೆ ಕುಟುಂಬದ ಪತ್ನಿ ಅಥವಾ ಮಕ್ಕಳ ಹೆಸರಿಗೆ ಮಾಲೀಕತ್ವ ಬದಲಾವಣೆ ಮಾಡಿಕೊಂಡು ಲೈಸನ್ಸ್ ರಿನಿವಲ್ ಮಾಡಿಸುವ ನಿಯಮ ಜಾರಿಯಲ್ಲಿದೆ. ಆದರೆ ಬಂಗೇರ ಅವರು ವಿಧಿವಶರಾಗಿ 45 ದಿನ ಕಳೆದರೂ ಮಾಲೀಕತ್ವ ಬದಲಾವಣೆ ಮಾಡದ ಕಾರಣ ಬೆಳ್ತಂಗಡಿ ಅಬಕಾರಿ ಇಲಾಖೆಯ ಇನ್ಸ್ಪೆಕ್ಟರ್ ಲಕ್ಷ್ಮಣ್ ಉಪ್ಪಾರ್ ನಿಯಮ ಪ್ರಕಾರ ವೈನ್ಸ್ ಶಾಪ್ ಗೆ ಬೀಗ ಹಾಕಿ ಸಿಲ್ ಮಾಡಿದ್ದಾರೆ ಎಂದು ವರದಿಯಾಗಿದೆ.

Related posts

ಉಜಿರೆ: ಕೃಷ್ಣಮೂರ್ತಿ ಹೊಳ್ಳ ನಿಧನ

Suddi Udaya

ಕಿಲ್ಲೂರು ಇರ್ಷಾದುಶ್ಶಿಬಿಯಾನ್ ಅರಬಿಕ್ ಮದರಸ ವಿದ್ಯಾರ್ಥಿಗಳಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ ನಿವೃತ್ತ ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಅಧಿಕಾರಿಗಳಿಂದ ನಮಗೆ ಮಾನಸಿಕ ಹಿಂಸೆ : ಗಿರಿಯಪ್ಪ ಗೌಡ ನಾಗನಡ್ಕ ಆರೋಪ

Suddi Udaya

ಕಳೆಂಜ: ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ

Suddi Udaya

ಧರ್ಮಸ್ಥಳ ಬೊಳಿಯಾರ್‌ನ 15ನೇ ಸ್ಥಳದಲ್ಲಿ ಪತ್ತೆಯಾಗದ ಶವದ ಅವಶೇಷಗಳು

Suddi Udaya
error: Content is protected !!