September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ತಂಬಾಕು ರಹಿತ ದಿನ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಕಬ್ಸ್ ಬುಲ್ ಬುಲ್, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ತಂಬಾಕು ರಹಿತ ಜಾಗೃತಿಯನ್ನು ಮೂಡಿಸಿದರು. ತಂಬಾಕಿನಿಂದ ಆಗುವ ದುಷ್ಪರಿಣಾಮಗಳ ಚಿತ್ರಕಲೆ, ಪ್ರಬಂಧ, ಕವನವನ್ನು ರಚಿಸಿದರು.


ತಂಬಾಕು ರಹಿತ ಕಾರ್ಯಕ್ರಮದನ್ವಯ ಆರೋಗ್ಯ ಇಲಾಖೆಯಿಂದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ ಸಿಸ್ಟರ್ ಮಾಹಿತಿಯನ್ನು ನೀಡಿದರು. ಅಲ್ಲದೆ ಸಿಸ್ಟರ್ ರಮ್ಯಾ ಹದಿಹರೆಯದ ಬಗ್ಗೆ ಮಕ್ಕಳಿಗೆ ತಿಳಿಯಪಡಿಸಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಹಾಯಕ ಆಯುಕ್ತ ಸೋಮಶೇಖರ್ ಶೆಟ್ಟಿ ಮಕ್ಕಳಿಗೆ ಸ್ಕೌಟ್ಸ್ ಚಳವಳಿಯ ಬಗ್ಗೆ ತಿಳಿಯಪಡಿಸಿದರು. ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ಉಪಸ್ಥಿತರಿದ್ದರು. ಕ್ಲಬ್ ಬುಲ್ ಬುಲ್ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಕಾರ್ಯಕ್ರಮದ ಸಂಘಟನೆ ಹಾಗೂ ನಿರೂಪಣೆ ಸ್ವಾಗತ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ , ಗೈಡರ್ ಶ್ರೀಮತಿ ಪ್ರಮೀಳಾ ನೆರವೇರಿಸಿದರು. ಸ್ಕೌಟ್ಸ್ ಮಾಸ್ಟರ್ ಮಂಜುನಾಥ್ ಧನ್ಯವಾದವಿತ್ತರು.

Related posts

ಉಜಿರೆ: ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಘಟಿಕೋತ್ಸವ ಹಾಗೂ ವಿದ್ಯಾರ್ಥಿನಿಯರ ಸ್ವಾಗತ ಕಾರ್ಯಕ್ರಮ

Suddi Udaya

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ: ಸಾವ೯ಜನಿಕ ಅಹವಾಲು ಸ್ವೀಕಾರ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಸ್ವ ಸಹಾಯ ಸಂಘಗಳಿಗೆ ಸಾಲ ವಿತರಣಾ ಕಾರ್ಯಕ್ರಮ – ಜನಸುರಕ್ಷಾ ಯೋಜನೆಗಳ ಸಂಪೂರ್ಣತಾ ಅಭಿಯಾನ

Suddi Udaya

ಮುಂಡಾಜೆ: ಹುರ್ತಾಜೆ ನಿವಾಸಿ ಸೀತಾ ಶೆಟ್ಟಿ ನಿಧನ

Suddi Udaya

ಧರ್ಮಸ್ಥಳ ಶ್ರೀ ಧ.ಮಂ. ಭಜನಾ ಪರಿಷತ್ ಇದರ ಅಧ್ಯಕ್ಷರಾಗಿ ಆಯ್ಕೆಯಾದ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ರವರಿಗೆ ತಾಲೂಕು ಭಜನಾ ಪರಿಷತ್ ವತಿಯಿಂದ ಅಭಿನಂದನೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲ ಚುನಾವಣೆ

Suddi Udaya
error: Content is protected !!