25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜು ‘ವಿವಿಧ ಸಂಘಗಳ ಉದ್ಘಾಟನೆ’

ಉಜಿರೆ: ವಿದ್ಯಾರ್ಥಿಗಳ ಅಂತಿಮ ಗುರಿ ಉತ್ತಮ ಫಲಿತಾಂಶವೇ ಆಗಿದ್ದರೂ, ಕೇವಲ ಕಲಿಕೆಯೊಂದೇ ಬದುಕು ಕಟ್ಟಿಕೊಡದು .ವಿದ್ಯಾರ್ಜನೆ ಜೊತೆ ಜೊತೆಗೆ ಕ್ರಿಯಾಶೀಲ ವ್ಯಕ್ತಿತ್ವ ನಿರ್ಮಾಣ ಬಹಳ ಅಗತ್ಯ. ಈ ಶಿಕ್ಷಣ ಸಂಸ್ಥೆ ನಿರ್ಮಿಸಿಕೊಡುವ ವ್ಯವಸ್ಥೆಗಳಲ್ಲಿ, ಸಿಗುವ ಸಂಪನ್ಮೂಲಗಳ ಸರಿಯಾದ ಬಳಕೆ ಮಾಡುವುದರ ಮೂಲಕ ನಿಮ್ಮ ಸರ್ವಾಂಗೀಣ ಅಭಿವೃದ್ಧಿ ಸಾಧ್ಯಾವಾಗಿಸಿಕೊಳ್ಳಿ. ಕಲಿಕೆ ಜೊತೆಗೆ ಇತರೆ ಪ್ರತಿಭೆಗಳಿದ್ದರೆ ಭವಿಷ್ಯದಲ್ಲಿ ಪ್ರಯೋಜನಕಾರಿ. ನಿಮ್ಮ ಆಸಕ್ತಿಯ ಸಂಘಗಳಲ್ಲಿ ಸೇರಿಕೊಂಡು ಸುಪ್ತ ಪ್ರತಿಭೆಗಳ ಅನಾವರಣಗೊಳಿಸಿ ಎಂದು ಕಾಲೇಜಿನ ಈ ಶೈಕ್ಷಣಿಕ ವರ್ಷದ ‘ವಿವಿಧ ಸಂಘಗಳ ಉದ್ಘಾಟನೆ’ ನೆರವೇರಿಸಿ ,ಎಸ್. ಡಿ. ಎಂ ಪದವಿ ಕಾಲೇಜಿನ ಆಡಳಿತ ಕುಲಸಚಿವೆ ಹಾಗೂ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರಾಗಿರುವ ಶಲಿಪ್ ಎ. ಪಿ. ಇವರು ಮಾತಾಡಿದರು.

ಪಾಂಡವರಿಗೆ ಶಸ್ತ್ರ-ಶಾಸ್ತ್ರಗಳ ಕಲಿಕೆಯ ಜೊತೆ ಜೊತೆಗೆ ಅವರ ಸ್ವಂತ ಆಸಕ್ತಿಯ ವಿಷಯಗಳ ಕಲಿಕೆಗೂ ಒತ್ತು ನೀಡಿ ಕಡ್ಡಾಯ ಕಲಿಕೆ ಎಂದು ನಿಗದಿಗೊಳಿಸಿ ಸನ್ನದ್ಧಗೊಳಿಸಿದ ವಿದ್ಯೆಗಳು ಅಜ್ಞಾತವಾಸದ ವೇಳೆ ಪಾಂಡವರ ಕಾಪಾಡಿತು.ಹಾಗೆಯೇ ಐದ್ಯೋಗಿಕ ನೆಲೆಯಲ್ಲಿ ಮಾತ್ರವಲ್ಲದೇ, ಮಾನಸಿಕ ನೆಮ್ಮದಿ ಹಾಗೂ ಕುಷಿಗೆ ಪೂರಕವಾದ ಕಲಿಕೆಗೆ, ಪ್ರತಿಭಾ ಪ್ರದರ್ಶನಗಳಿಗೆ ಸಂಘದ ಕಾರ್ಯ ಚಟುವಟಿಕೆ ಸಹಕಾರಿ. ಎಲ್ಲರೂ ಸಕ್ರಿಯವಾಗಿ ಭಾಗವಹಿಸಿ ಎಂದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಹೇಳಿದರು.

ವೇದಿಕೆಯಲ್ಲಿ ಉಪ ಪ್ರಾಂಶುಪಾಲರಾದ ಮನೀಶ್ ಕುಮಾರ್ ಹಾಗೂ ವಿಜ್ಞಾನ ಸಂಘದ ಸಂಯೋಜಕರು ಹಾಗೂ ಭೌತಶಾಸ್ತ್ರ ಮುಖ್ಯಸ್ಥರಾದ ರಮೇಶ್ ಬಾಬು ಎಚ್. ಪಿ ಉಪಸ್ಥಿತರಿದ್ದರು.

ಇಂಗ್ಲಿಷ್ ವಿಭಾಗದ ಉಪನ್ಯಾಸಕರಾದ ಪಾರ್ಶ್ವನಾಥ ಹೆಗ್ಡೆ ಕಾರ್ಯಕ್ರಮ ದಲ್ಲಿ ವಂದಿಸಿ, ನಿರೂಪಿಸಿದರು.

Related posts

ಚಿರನಿದ್ರೆಗೆ ಜಾರಿದ ಮಾಜಿ ಶಾಸಕ ಕೆ. ವಸಂತ ಬಂಗೇರ ಮೇ9 ರಂದು (ನಾಳೆ) ಬೆಳಿಗ್ಗೆ ಹಳೆಕೋಟೆ ನಿವಾಸದಲ್ಲಿ ಸಾರ್ವಜನಿಕ ಅಂತಿಮ ದರ್ಶನ

Suddi Udaya

ಮರೋಡಿ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಗ್ರಾಮ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

Suddi Udaya

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ಕೆಡವಿದ ಪ್ರಕರಣ : ಆರಂಭಗೊಂಡ ಕಂದಾಯ – ಅರಣ್ಯ ಜಂಟಿ ಸರ್ವೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಂಕಿಯಿಲ್ಲದ ಅಡುಗೆ ಸ್ಪರ್ಧೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಸದಸ್ಯರಿಗೆ ಲೋಕಲ್ ಆರ್ಗನೈಜೇಷನ್ ಡೆವಲಪ್ಮೆಂಟ್ ತರಬೇತಿ

Suddi Udaya
error: Content is protected !!