September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜು ‘ವಿವಿಧ ಸಂಘಗಳ ಉದ್ಘಾಟನೆ’

ಉಜಿರೆ: ವಿದ್ಯಾರ್ಥಿಗಳ ಅಂತಿಮ ಗುರಿ ಉತ್ತಮ ಫಲಿತಾಂಶವೇ ಆಗಿದ್ದರೂ, ಕೇವಲ ಕಲಿಕೆಯೊಂದೇ ಬದುಕು ಕಟ್ಟಿಕೊಡದು .ವಿದ್ಯಾರ್ಜನೆ ಜೊತೆ ಜೊತೆಗೆ ಕ್ರಿಯಾಶೀಲ ವ್ಯಕ್ತಿತ್ವ ನಿರ್ಮಾಣ ಬಹಳ ಅಗತ್ಯ. ಈ ಶಿಕ್ಷಣ ಸಂಸ್ಥೆ ನಿರ್ಮಿಸಿಕೊಡುವ ವ್ಯವಸ್ಥೆಗಳಲ್ಲಿ, ಸಿಗುವ ಸಂಪನ್ಮೂಲಗಳ ಸರಿಯಾದ ಬಳಕೆ ಮಾಡುವುದರ ಮೂಲಕ ನಿಮ್ಮ ಸರ್ವಾಂಗೀಣ ಅಭಿವೃದ್ಧಿ ಸಾಧ್ಯಾವಾಗಿಸಿಕೊಳ್ಳಿ. ಕಲಿಕೆ ಜೊತೆಗೆ ಇತರೆ ಪ್ರತಿಭೆಗಳಿದ್ದರೆ ಭವಿಷ್ಯದಲ್ಲಿ ಪ್ರಯೋಜನಕಾರಿ. ನಿಮ್ಮ ಆಸಕ್ತಿಯ ಸಂಘಗಳಲ್ಲಿ ಸೇರಿಕೊಂಡು ಸುಪ್ತ ಪ್ರತಿಭೆಗಳ ಅನಾವರಣಗೊಳಿಸಿ ಎಂದು ಕಾಲೇಜಿನ ಈ ಶೈಕ್ಷಣಿಕ ವರ್ಷದ ‘ವಿವಿಧ ಸಂಘಗಳ ಉದ್ಘಾಟನೆ’ ನೆರವೇರಿಸಿ ,ಎಸ್. ಡಿ. ಎಂ ಪದವಿ ಕಾಲೇಜಿನ ಆಡಳಿತ ಕುಲಸಚಿವೆ ಹಾಗೂ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರಾಗಿರುವ ಶಲಿಪ್ ಎ. ಪಿ. ಇವರು ಮಾತಾಡಿದರು.

ಪಾಂಡವರಿಗೆ ಶಸ್ತ್ರ-ಶಾಸ್ತ್ರಗಳ ಕಲಿಕೆಯ ಜೊತೆ ಜೊತೆಗೆ ಅವರ ಸ್ವಂತ ಆಸಕ್ತಿಯ ವಿಷಯಗಳ ಕಲಿಕೆಗೂ ಒತ್ತು ನೀಡಿ ಕಡ್ಡಾಯ ಕಲಿಕೆ ಎಂದು ನಿಗದಿಗೊಳಿಸಿ ಸನ್ನದ್ಧಗೊಳಿಸಿದ ವಿದ್ಯೆಗಳು ಅಜ್ಞಾತವಾಸದ ವೇಳೆ ಪಾಂಡವರ ಕಾಪಾಡಿತು.ಹಾಗೆಯೇ ಐದ್ಯೋಗಿಕ ನೆಲೆಯಲ್ಲಿ ಮಾತ್ರವಲ್ಲದೇ, ಮಾನಸಿಕ ನೆಮ್ಮದಿ ಹಾಗೂ ಕುಷಿಗೆ ಪೂರಕವಾದ ಕಲಿಕೆಗೆ, ಪ್ರತಿಭಾ ಪ್ರದರ್ಶನಗಳಿಗೆ ಸಂಘದ ಕಾರ್ಯ ಚಟುವಟಿಕೆ ಸಹಕಾರಿ. ಎಲ್ಲರೂ ಸಕ್ರಿಯವಾಗಿ ಭಾಗವಹಿಸಿ ಎಂದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಹೇಳಿದರು.

ವೇದಿಕೆಯಲ್ಲಿ ಉಪ ಪ್ರಾಂಶುಪಾಲರಾದ ಮನೀಶ್ ಕುಮಾರ್ ಹಾಗೂ ವಿಜ್ಞಾನ ಸಂಘದ ಸಂಯೋಜಕರು ಹಾಗೂ ಭೌತಶಾಸ್ತ್ರ ಮುಖ್ಯಸ್ಥರಾದ ರಮೇಶ್ ಬಾಬು ಎಚ್. ಪಿ ಉಪಸ್ಥಿತರಿದ್ದರು.

ಇಂಗ್ಲಿಷ್ ವಿಭಾಗದ ಉಪನ್ಯಾಸಕರಾದ ಪಾರ್ಶ್ವನಾಥ ಹೆಗ್ಡೆ ಕಾರ್ಯಕ್ರಮ ದಲ್ಲಿ ವಂದಿಸಿ, ನಿರೂಪಿಸಿದರು.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ-ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಉಜ್ವಲ ಮತ್ತು ಭವಿಷ್ಯ ಮಕ್ಕಳ ಸಮಿತಿ ರಚನೆ

Suddi Udaya

ಕುಮಟಾ ಸದ್ಗುರು ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಚಾರಣೆ: ಮಂಗಳೂರು ಶಾಸಕ ಡಾ.ಭರತ್ ಶೆಟ್ಟಿಯವರಿಂದ ಪಾದುಕ ಪೂಜೆ

Suddi Udaya

ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ಮೇಲೆ ದೌರ್ಜನ್ಯ ಮಾಡುತ್ತಿರುವ ಚಿಕ್ಕಮಗಳೂರು ಜಿಲ್ಲೆಯ ಮೀನಾ ನಾಗರಾಜ್ ಮತ್ತು ಅಪರ ಜಿಲ್ಲಾಧಿಕಾರಿ ಕನಕರೆಡ್ಡಿ ಇವರನ್ನು ಕೂಡಲೇ ವರ್ಗಾವಣೆ ಮಾಡಿ ನ್ಯಾಯ ಒದಗಿಸಿಕೊಡುವಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ರವರಿಗೆ ಬೆಳ್ತಂಗಡಿ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿ ಸಂಘದಿಂದ ಮನವಿ

Suddi Udaya

ಬಿಜೆಪಿ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ; ಜಿಲ್ಲಾ ಬಂದ್‌ಗೆ ತಾಲೂಕಿನಲ್ಲಿ ಬೆಂಬಲ: ಅಂಗಡಿ-ಮುಂಗಟ್ಟುಗಳು ಬಂದ್; ಸಂಚಾರ ಸ್ಥಗಿತಗೊಳಿಸಿದ ಕೆಎಸ್ಸಾರ್ಟಿಸಿ, ಖಾಸಗಿ ಬಸ್‌ಗಳು

Suddi Udaya

ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನ ಶಿಲಾಮಯ ಧ್ವಜಸ್ತಂಭದ ಸ್ಥಾಪನೆ

Suddi Udaya

ಪ್ರತಿಭಾ ಕಾರಂಜಿ: ಸ್ಟಾರ್‌ಲೈನ್ ಆಂ.ಮಾ. ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ

Suddi Udaya
error: Content is protected !!