25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜು ‘ವಿವಿಧ ಸಂಘಗಳ ಉದ್ಘಾಟನೆ’

ಉಜಿರೆ: ವಿದ್ಯಾರ್ಥಿಗಳ ಅಂತಿಮ ಗುರಿ ಉತ್ತಮ ಫಲಿತಾಂಶವೇ ಆಗಿದ್ದರೂ, ಕೇವಲ ಕಲಿಕೆಯೊಂದೇ ಬದುಕು ಕಟ್ಟಿಕೊಡದು .ವಿದ್ಯಾರ್ಜನೆ ಜೊತೆ ಜೊತೆಗೆ ಕ್ರಿಯಾಶೀಲ ವ್ಯಕ್ತಿತ್ವ ನಿರ್ಮಾಣ ಬಹಳ ಅಗತ್ಯ. ಈ ಶಿಕ್ಷಣ ಸಂಸ್ಥೆ ನಿರ್ಮಿಸಿಕೊಡುವ ವ್ಯವಸ್ಥೆಗಳಲ್ಲಿ, ಸಿಗುವ ಸಂಪನ್ಮೂಲಗಳ ಸರಿಯಾದ ಬಳಕೆ ಮಾಡುವುದರ ಮೂಲಕ ನಿಮ್ಮ ಸರ್ವಾಂಗೀಣ ಅಭಿವೃದ್ಧಿ ಸಾಧ್ಯಾವಾಗಿಸಿಕೊಳ್ಳಿ. ಕಲಿಕೆ ಜೊತೆಗೆ ಇತರೆ ಪ್ರತಿಭೆಗಳಿದ್ದರೆ ಭವಿಷ್ಯದಲ್ಲಿ ಪ್ರಯೋಜನಕಾರಿ. ನಿಮ್ಮ ಆಸಕ್ತಿಯ ಸಂಘಗಳಲ್ಲಿ ಸೇರಿಕೊಂಡು ಸುಪ್ತ ಪ್ರತಿಭೆಗಳ ಅನಾವರಣಗೊಳಿಸಿ ಎಂದು ಕಾಲೇಜಿನ ಈ ಶೈಕ್ಷಣಿಕ ವರ್ಷದ ‘ವಿವಿಧ ಸಂಘಗಳ ಉದ್ಘಾಟನೆ’ ನೆರವೇರಿಸಿ ,ಎಸ್. ಡಿ. ಎಂ ಪದವಿ ಕಾಲೇಜಿನ ಆಡಳಿತ ಕುಲಸಚಿವೆ ಹಾಗೂ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರಾಗಿರುವ ಶಲಿಪ್ ಎ. ಪಿ. ಇವರು ಮಾತಾಡಿದರು.

ಪಾಂಡವರಿಗೆ ಶಸ್ತ್ರ-ಶಾಸ್ತ್ರಗಳ ಕಲಿಕೆಯ ಜೊತೆ ಜೊತೆಗೆ ಅವರ ಸ್ವಂತ ಆಸಕ್ತಿಯ ವಿಷಯಗಳ ಕಲಿಕೆಗೂ ಒತ್ತು ನೀಡಿ ಕಡ್ಡಾಯ ಕಲಿಕೆ ಎಂದು ನಿಗದಿಗೊಳಿಸಿ ಸನ್ನದ್ಧಗೊಳಿಸಿದ ವಿದ್ಯೆಗಳು ಅಜ್ಞಾತವಾಸದ ವೇಳೆ ಪಾಂಡವರ ಕಾಪಾಡಿತು.ಹಾಗೆಯೇ ಐದ್ಯೋಗಿಕ ನೆಲೆಯಲ್ಲಿ ಮಾತ್ರವಲ್ಲದೇ, ಮಾನಸಿಕ ನೆಮ್ಮದಿ ಹಾಗೂ ಕುಷಿಗೆ ಪೂರಕವಾದ ಕಲಿಕೆಗೆ, ಪ್ರತಿಭಾ ಪ್ರದರ್ಶನಗಳಿಗೆ ಸಂಘದ ಕಾರ್ಯ ಚಟುವಟಿಕೆ ಸಹಕಾರಿ. ಎಲ್ಲರೂ ಸಕ್ರಿಯವಾಗಿ ಭಾಗವಹಿಸಿ ಎಂದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಹೇಳಿದರು.

ವೇದಿಕೆಯಲ್ಲಿ ಉಪ ಪ್ರಾಂಶುಪಾಲರಾದ ಮನೀಶ್ ಕುಮಾರ್ ಹಾಗೂ ವಿಜ್ಞಾನ ಸಂಘದ ಸಂಯೋಜಕರು ಹಾಗೂ ಭೌತಶಾಸ್ತ್ರ ಮುಖ್ಯಸ್ಥರಾದ ರಮೇಶ್ ಬಾಬು ಎಚ್. ಪಿ ಉಪಸ್ಥಿತರಿದ್ದರು.

ಇಂಗ್ಲಿಷ್ ವಿಭಾಗದ ಉಪನ್ಯಾಸಕರಾದ ಪಾರ್ಶ್ವನಾಥ ಹೆಗ್ಡೆ ಕಾರ್ಯಕ್ರಮ ದಲ್ಲಿ ವಂದಿಸಿ, ನಿರೂಪಿಸಿದರು.

Related posts

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 350ನೇ ಪಟ್ಟಾಭಿಷೇಕ ಸಂಭ್ರಮಾಚರಣೆ

Suddi Udaya

ಬಂಗಾಡಿ ಸಹಸ್ರ ನಾಗಬನದಲ್ಲಿ ಶ್ರೀ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವರು ಮತ್ತು ಶ್ರೀ ಮಹಾಗಣಪತಿ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್‌ ವತಿಯಿಂದ ಬಡ ಕುಟುಂಬದ ಸುಬ್ರಾಯ ಗೌಡ ಹತ್ಯಡ್ಕ ರವರಿಗೆ ರೂ.30 ಸಾವಿರ ಚೆಕ್ ಹಸ್ತಾಂತರ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್‌ ರಕ್ತದಾನ ಶಿಬಿರ

Suddi Udaya

ಅರಸಿನಮಕ್ಕಿ : 33ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸಂಚಾರಿ ನಿಯಮ ಪಾಲನೆ ಮತ್ತು ಕಾನೂನು ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!