July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜು ‘ವಿವಿಧ ಸಂಘಗಳ ಉದ್ಘಾಟನೆ’

ಉಜಿರೆ: ವಿದ್ಯಾರ್ಥಿಗಳ ಅಂತಿಮ ಗುರಿ ಉತ್ತಮ ಫಲಿತಾಂಶವೇ ಆಗಿದ್ದರೂ, ಕೇವಲ ಕಲಿಕೆಯೊಂದೇ ಬದುಕು ಕಟ್ಟಿಕೊಡದು .ವಿದ್ಯಾರ್ಜನೆ ಜೊತೆ ಜೊತೆಗೆ ಕ್ರಿಯಾಶೀಲ ವ್ಯಕ್ತಿತ್ವ ನಿರ್ಮಾಣ ಬಹಳ ಅಗತ್ಯ. ಈ ಶಿಕ್ಷಣ ಸಂಸ್ಥೆ ನಿರ್ಮಿಸಿಕೊಡುವ ವ್ಯವಸ್ಥೆಗಳಲ್ಲಿ, ಸಿಗುವ ಸಂಪನ್ಮೂಲಗಳ ಸರಿಯಾದ ಬಳಕೆ ಮಾಡುವುದರ ಮೂಲಕ ನಿಮ್ಮ ಸರ್ವಾಂಗೀಣ ಅಭಿವೃದ್ಧಿ ಸಾಧ್ಯಾವಾಗಿಸಿಕೊಳ್ಳಿ. ಕಲಿಕೆ ಜೊತೆಗೆ ಇತರೆ ಪ್ರತಿಭೆಗಳಿದ್ದರೆ ಭವಿಷ್ಯದಲ್ಲಿ ಪ್ರಯೋಜನಕಾರಿ. ನಿಮ್ಮ ಆಸಕ್ತಿಯ ಸಂಘಗಳಲ್ಲಿ ಸೇರಿಕೊಂಡು ಸುಪ್ತ ಪ್ರತಿಭೆಗಳ ಅನಾವರಣಗೊಳಿಸಿ ಎಂದು ಕಾಲೇಜಿನ ಈ ಶೈಕ್ಷಣಿಕ ವರ್ಷದ ‘ವಿವಿಧ ಸಂಘಗಳ ಉದ್ಘಾಟನೆ’ ನೆರವೇರಿಸಿ ,ಎಸ್. ಡಿ. ಎಂ ಪದವಿ ಕಾಲೇಜಿನ ಆಡಳಿತ ಕುಲಸಚಿವೆ ಹಾಗೂ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರಾಗಿರುವ ಶಲಿಪ್ ಎ. ಪಿ. ಇವರು ಮಾತಾಡಿದರು.

ಪಾಂಡವರಿಗೆ ಶಸ್ತ್ರ-ಶಾಸ್ತ್ರಗಳ ಕಲಿಕೆಯ ಜೊತೆ ಜೊತೆಗೆ ಅವರ ಸ್ವಂತ ಆಸಕ್ತಿಯ ವಿಷಯಗಳ ಕಲಿಕೆಗೂ ಒತ್ತು ನೀಡಿ ಕಡ್ಡಾಯ ಕಲಿಕೆ ಎಂದು ನಿಗದಿಗೊಳಿಸಿ ಸನ್ನದ್ಧಗೊಳಿಸಿದ ವಿದ್ಯೆಗಳು ಅಜ್ಞಾತವಾಸದ ವೇಳೆ ಪಾಂಡವರ ಕಾಪಾಡಿತು.ಹಾಗೆಯೇ ಐದ್ಯೋಗಿಕ ನೆಲೆಯಲ್ಲಿ ಮಾತ್ರವಲ್ಲದೇ, ಮಾನಸಿಕ ನೆಮ್ಮದಿ ಹಾಗೂ ಕುಷಿಗೆ ಪೂರಕವಾದ ಕಲಿಕೆಗೆ, ಪ್ರತಿಭಾ ಪ್ರದರ್ಶನಗಳಿಗೆ ಸಂಘದ ಕಾರ್ಯ ಚಟುವಟಿಕೆ ಸಹಕಾರಿ. ಎಲ್ಲರೂ ಸಕ್ರಿಯವಾಗಿ ಭಾಗವಹಿಸಿ ಎಂದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಹೇಳಿದರು.

ವೇದಿಕೆಯಲ್ಲಿ ಉಪ ಪ್ರಾಂಶುಪಾಲರಾದ ಮನೀಶ್ ಕುಮಾರ್ ಹಾಗೂ ವಿಜ್ಞಾನ ಸಂಘದ ಸಂಯೋಜಕರು ಹಾಗೂ ಭೌತಶಾಸ್ತ್ರ ಮುಖ್ಯಸ್ಥರಾದ ರಮೇಶ್ ಬಾಬು ಎಚ್. ಪಿ ಉಪಸ್ಥಿತರಿದ್ದರು.

ಇಂಗ್ಲಿಷ್ ವಿಭಾಗದ ಉಪನ್ಯಾಸಕರಾದ ಪಾರ್ಶ್ವನಾಥ ಹೆಗ್ಡೆ ಕಾರ್ಯಕ್ರಮ ದಲ್ಲಿ ವಂದಿಸಿ, ನಿರೂಪಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

Suddi Udaya

ತುಮಕೂರು ದುಷ್ಕರ್ಮಿಗಳಿಂದ ಕಾರಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ತುಮಕೂರು ಜಿಲ್ಲಾ ಎಡಿಷನ್ ಎಸ್ಪಿ ಯವರನ್ನು ಬೇಟಿ ಮಾಡಿ ಪ್ರಕರಣದ ಬಗ್ಗೆ ಮಾಹಿತಿ ಪಡೆದ ರಕ್ಷಿತ್ ಶಿವರಾಂ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಐಕ್ಸ್ ದ್ವಿಮಾಸಿಕ ಸಭೆ

Suddi Udaya

ಪಶುಸಂಗೋಪನಾ ಇಲಾಖೆಯ ಅಧಿಕಾರಿ ಜಯಕೀರ್ತಿ ಜೈನ್ ಸೇವಾ ನಿವೃತ್ತಿ

Suddi Udaya

ನೆಲ್ಯಾಡಿಯಲ್ಲಿ ಉದನೆ ವಲಯ ಮಟ್ಟದ ಮಾತೃಸಂಗಮ ‘ಫಿದೆಲಿಯುಂ–2026’

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!