July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಐಸಮ್ಮರವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

ಉಜಿರೆ: ಒಕ್ಕೂಟದ ಪದಾಧಿಕಾರಿಗಳು ಮತ್ತು ಸೇವಾಪ್ರತಿನಿಧಿಯವರು ಸಂಘದ ಸದಸ್ಯರಾಗಿರುವ ಹೆಚ್ಚಿನ ಸದಸ್ಯರು ಪ್ರಗತಿನಿಧಿಯನ್ನು ಪಡೆದುಕೊಂಡು ಪದ್ಮಿನಿಯೋಗ ಮಾಡಿ ಅಭಿವೃದ್ಧಿಯನ್ನು ಆಗುತ್ತಿರುವ ಮಾಹಿತಿಯನ್ನು ಪಡೆಯಲು ಹಾಗು ಅವರಿಗೆ ಇನ್ನಷ್ಟು ಯೋಜನೆಯ ಸೇವೆಗಳನ್ನು ನೀಡುವ ಉದ್ದೇಶದಿಂದ ಮನೆ ಭೇಟಿಯನ್ನು ಮಾಡುವ ಸಂದರ್ಭದಲ್ಲಿ, ಐಸಮ್ಮ ರವರಿಗೆ ವೀಲ್ ಚಯರ್ ಅಗತ್ಯತೆಯನ್ನು ಇದೆ ಎನ್ನುವಂತಹ ವಿಷಯವನ್ನು ಮನೆ ಭೇಟಿ ಮಾಡಿದ ಸಂದರ್ಭ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸೇವಾಪ್ರತಿನಿಧಿಯವರು ಪೂಜ್ಯ ಖಾವಂದರಿಗೆ ವಿಶೇಷವಾದ ಮನವಿಯನ್ನು ನೀಡಿದ್ದು ಈ ಮನವಿಗೆ ಪೂಜ್ಯರು ಸಮ್ಮತಿಸಿ ಉಚಿತವಾಗಿ ವೀಲ್ ಚೇರ್ ಒದಗಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಲಾಯಿಲ ವಲಯದ ಲಾಯಿಲ ಗಾಂಧಿನಗರ ಎಂಬಲ್ಲಿನ ಐಸಮ್ಮರವರಿಗೆ ನಡೆದಾಡಲು ಶಕ್ತಿ ಇಲ್ಲದಿರುವ ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ವತಿಯಿಂದ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಉಚಿತವಾಗಿ ನೀಡಿರುವ ವೀಲ್ ಚಯರ್ ನ್ನು ತಾಲ್ಲೂಕು ಯೋಜನಾಧಿಕಾರಿ ಸುರೇಂದ್ರರವರು ವಿತರಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಮಾಜಿ ಅಧ್ಯಕ್ಷರಾದ ಶ್ರೀಮತಿ ವನಿತಾ, ಲಾಯಿಲ ಸಿ ಒಕ್ಕೂಟದ ಕಾರ್ಯದರ್ಶಿಯಾದ ಕೈರುಣಿಸ,
ವಲಯ ಮೇಲ್ವಿಚಾರಕರಾದ ಸುಶಾಂತ್ ,ಸೇವಾಪ್ರತಿನಿಧಿಯಾದ ದಿವ್ಯ ಉಪಸ್ಥಿತರಿದ್ದರು…

Related posts

ಉಳ್ತೂರು: ದರ್ಸ್ ವಾರ್ಷಿಕ ಮತ್ತು ಬೀಳ್ಕೊಡುಗೆ ಕಾರ್ಯಕ್ರಮ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ಇಂದು ಮಹಾ ಬ್ರಹ್ಮರಥೋತ್ಸವ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ; ಮಚ್ಚಿನ ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘದ ಉದ್ಘಾಟನೆ

Suddi Udaya

ಬೆಳ್ತಂಗಡಿ: ಕೃಷಿ ತರಬೇತಿ ಕೇಂದ್ರದಲ್ಲಿ ಕೃಷಿ ಪಂಪ್‌ಸೆಟ್‌ಗಳು ಮತ್ತು ನೀರಿನ ಸಂರಕ್ಷಣೆ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!