25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

ಬೆಳ್ತಂಗಡಿ: ಇತಿಹಾಸದ ಮಹಾಪುರುಷರನ್ನು ನೆನಪಿಸಿಕೊಂಡು ಅವರ ಆದರ್ಶಗಳನ್ನು ಪಾಲಿಸುವುದು ನಮ್ಮೆಲ್ಲರ ಧ್ಯೇಯವಾಗಿರಬೇಕು ಎಂದು ವಾಣಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಬೆಳಿಯಪ್ಪ .ಕೆ ಹೇಳಿದರು.


ಅವರು ವಾಣಿ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಜರುಗಿದ ನಾಡಪ್ರಭು ಕೆಂಪೇಗೌಡರ ಜನ್ಮ ದಿನಾಚರಣೆಯ ಕುರಿತು ಮಾತನಾಡುತ್ತ, ಜಗತ್ತಿನ ಎಲ್ಲಾ ಪ್ರದೇಶದ ಜನರನ್ನು ವಿವಿಧ ರೀತಿಯಲ್ಲಿ ಆಕರ್ಷಿಸುವ ಬೆಂಗಳೂರು ಇಂದು ವಾಣಿಜ್ಯ ನಗರಿ ಮಾತ್ರವಲ್ಲದೆ ಶೈಕ್ಷಣಿಕ, ಔದ್ಯೋಗಿಕ, ತಾಂತ್ರಿಕ ಕ್ಷೇತ್ರದಲ್ಲಿ ಮುನ್ನಡೆಯನ್ನು ಹೊಂದಿದೆ. ಪ್ರಾಕೃತಿಕವಾಗಿ ಉತ್ತಮ ಅಂಶಗಳನ್ನು ಹೊಂದಿದ್ದು ,ಎಲ್ಲಾ ರೀತಿಯ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಬೆಳೆಸಿದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ. ಅವರ ದೂರಾಲೋಚನೆ ಯುವ ಜನರಿಗೆ ಮಾದರಿಯಾಗಿದೆ ಎಂದರು.


ವಾಣಿ ಶಿಕ್ಷಣ ಸಂಸ್ಥೆಯ ಜೊತೆ ಕಾರ್ಯದರ್ಶಿ ಶ್ರೀನಾಥ್ .ಕೆ.ಎನ್ ಅಧ್ಯಕ್ಷತೆಯನ್ನು ವಹಿಸಿದ್ದರು. ಸಂಸ್ಥೆಯ ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್ ಉಪಸಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಸ್ವಾಗತಿಸಿದರು. ಉಪಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ ವಂದಿಸಿದರು. ಉಪನ್ಯಾಸಕ ಮಹಾಬಲ ಗೌಡ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿಯಲ್ಲಿ ಮೊಟ್ಟ ಮೊದಲ ಭಾರಿ ಮೈಫ್ಸ್ (MIFSE) ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜು ಜಂಟಿ ಸಹಯೋಗದಲ್ಲಿ ಡಿಪ್ಲೋಮಾ, ಪಿ ಜಿ ಡಿಪ್ಲೋಮಾ ಹಾಗೂ ತಾಂತ್ರಿಕ , ವೃತ್ತಿಪರ ತರಬೇತಿ ಸಂಸ್ಥೆ ಶೀಘ್ರದಲ್ಲಿ ಆರಂಭ

Suddi Udaya

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ ಕುಕ್ಕೆ ಕುಮಾರಧಾರ ಸ್ಥಾನಗಟ್ಟ ನದಿಯಲ್ಲಿ ಸ್ವಚ್ಛತಾ ಕಾರ್ಯ

Suddi Udaya

ನದಿಗೆ ಬಲೆ ಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿ ಅಸಹಜವಾಗಿ ಸಾವು

Suddi Udaya

ಬೆಳ್ತಂಗಡಿ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿರುವ ಮನೋಹರ ಕುಮಾರ್ ರಿಗೆ ಹೆಚ್ಚುವರಿ ಹೊಣೆ ಹೊರಿಸಿ ಸರಕಾರ ಆದೇಶ

Suddi Udaya

ಜ.24-30: ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ಯುವ ವೈಭವ: ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!