22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಅಳದಂಗಡಿ ಪ.ಪೂ. ಕಾಲೇಜಿನಲ್ಲಿ ನೂತನ ವಿಜ್ಞಾನ ಪ್ರಯೋಗಾಲಯ ಕೊಠಡಿ ಮತ್ತು ಇತರ ಮೂಲಭೂತ ಸೌಕರ್ಯಗಳ ಉದ್ಘಾಟನೆ

ಅಳದಂಗಡಿ: ಸರಕಾರಿ ಪದವಿಪೂರ್ವ ಕಾಲೇಜು ಅಳದಂಗಡಿ ಸಂಸ್ಥೆಯ ನೂತನ ವಿಜ್ಞಾನ ಪ್ರಯೋಗಾಲಯ ಕೊಠಡಿ ಮತ್ತು ಇತರ ಮೂಲಭೂತ ಸೌಕರ್ಯಗಳ ಉದ್ಘಾಟನಾ ಸಮಾರಂಭವು ಕಾಲೇಜಿನ ಸಭಾಭವನದಲ್ಲಿ ಜೂ.25ರಂದು ನಡೆಯಿತು. ರೋಟರಿ ಕ್ಲಬ್ ಆಫ್ ಬೆಂಗಳೂರು ಮತ್ತು ಕೊಲೀನ್ಸ್ ಆ್ಯರೋಸ್ಪೇಸ್ ಬೆಂಗಳೂರು ಇವರ ಸಹಭಾಗಿತ್ವದಲ್ಲಿ ಸುಮಾರು 40 ಲಕ್ಷ ಅನುದಾನದಲ್ಲಿ ಕಾಮಗಾರಿ ನಡೆದಿರುತ್ತದೆ.


ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಇವರು ಉದ್ಘಾಟನಾ ಸಮಾರಂಭದ ಅಧ್ಯಕ್ಷ ಸ್ಥಾನವನ್ನು ವಹಿಸಿ ಕೋಲೀನ್ಸ್ ಏರೋಸ್ಪೇಸ್ ಸಿಎಸ್ಆರ್ ನಿಧಿಯಿಂದ ನಿರ್ಮಾಣದವಾದಂತ ಈ ಪ್ರಾಜೆಕ್ಟ್ ಅಳದಂಗಡಿ ಕಾಲೇಜಿನ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಸಹಕಾರಿಯಾಗಿದೆ. ಈ ನಿಟ್ಟಿನಲ್ಲಿ ಕ್ಷೇತ್ರದ ಶಾಸಕನಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಕಂಪೆನಿಯ ಸಿಎಸ್ಆರ್ ಲೀಡ್ ಅಮಿತ್ ಸಾವರ್ಕರ್ ಇವರು ವಿಜ್ಞಾನ ಕೊಠಡಿಯನ್ನು ಉದ್ಘಾಟಿಸಿ ವಿದ್ಯಾರ್ಥಿಗಳು ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡು ಕಲಿಕೆಯಲ್ಲಿ ಸಾಧನೆ ಮಾಡಿ ಸಮಾಜದಲ್ಲಿ ಉತ್ತಮ ಜವಾಬ್ದಾರಿಯುತ ವ್ಯಕ್ತಿಗಳಾಬೇಕು ಎಂದರು.

ವೇದಿಕೆಯಲ್ಲಿ ಮುಖ್ಯ ಅತಿಥಿಯಾಗಿ ಕಂಪನಿಯ ಎಚ್ ಆರ್ ಸೀನಿಯರ್ ಮೆನೇಜರ್ ನವೀನ್ ಶೆಟ್ಟಿ , ರೋಟರಿ ಕ್ಲಬ್ ಆಫ್ ಬೆಂಗಳೂರಿನ ರೊಟೇರಿಯನ್ ಮಂಜುನಾಥ್ ಆನೇಕರ್, ರೊಟೇರಿಯನ್ ರಂಗರಾವ್ ರೊಟೇರಿಯನ್ ಛಲಮಣಿ ಕರ್ನಾಟಕ ಸರ್ಕಾರದ ಉಪ ಕಾರ್ಮಿಕ ಆಯುಕ್ತರಾದ ಗುರುಪ್ರಸಾದ್ ಎಚ್ ಎಲ್ , ಸಿ ಬಿ ಸಿ ಉಪಾಧ್ಯಕ್ಷರಾದ ಸದಾನಂದ ಪೂಜಾರಿ ಉಂಗಿಲ ಬೈಲು ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಶಾಂತಿಮರಿಯ ಉಪಸ್ಥಿತರಿದ್ದರು ಸಂಸ್ಥೆಯ ಪ್ರಾಂಶುಪಾಲರಾದ ಸನ್ನಿ ಕೆಎಂ ರವರು ಗಣ್ಯರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ನುಡಿದರು.

ಈ ಸಂದರ್ಭದಲ್ಲಿ ಸಹಕರಿಸಿದ ಕೊಲೀನ್ ಏರೋಸ್ಪೇಸ್ ಮತ್ತು ರೋಟರಿ ಕ್ಲಬ್ ಅಫ್ ಬೆಂಗಳೂರು ಇದರ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು ಜೀವಶಾಸ್ತ್ರ ಉಪನ್ಯಾಸಕರಾದ ಶ್ರೀ ಪ್ರಶಾಂತ್ ಕುಮಾರ್ ಅವರು ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಸಲ್ಲಿಸಿದರು.

Related posts

ಕುತ್ಲೂರು ಸರಕಾರಿ ಶಾಲಾ ಮಕ್ಕಳಿಗೆ ಬಿಎಎಸ್ಎಫ್ ಸಂಸ್ಥೆಯಿಂದ ಪುಸ್ತಕ ಸಾಮಾಗ್ರಿ ಕೊಡುಗೆ

Suddi Udaya

ದ.ಕ. ಜಿಲ್ಲಾ ಪಶುವೈದ್ಯಕೀಯ ಪರೀಕ್ಷಕರ ಸಂಘದಿಂದ ನಿವೃತ್ತಿಗೊಂಡ ಡಾ ಕೆ. ಜಯಕೀರ್ತಿ ಜೈನ್ ರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ತಾಲೂಕಿನ ಕ್ರೀಡಾಪಟುಗಳಿಗೆ ಶಾಸಕ ಹರೀಶ್ ಪೂಂಜರಿಂದ ಕ್ರೀಡಾ ಸಮವಸ್ತ್ರ ಕೊಡುಗೆ

Suddi Udaya

ಬೆಳ್ತಂಗಡಿ ಲ್ಯಾಂಪ್ಸ್ ವಿವಿದೋದ್ದೇಶ ಸಹಕಾರ ಸಂಘದ ಗೋದಾಮು ಮತ್ತು ಮಾರಾಟ ಮಳಿಗೆಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ

Suddi Udaya

ಧರ್ಮಸ್ಥಳಕ್ಕೆ ಮಂಗಳೂರಿನ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸಂಸ್ಥೆಯ ಎಂ.ಬಿ.ಎ. ವಿದ್ಯಾರ್ಥಿಗಳ ಅಧ್ಯಯನ ಪ್ರವಾಸ

Suddi Udaya
error: Content is protected !!