24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜು ‘ವಿವಿಧ ಸಂಘಗಳ ಉದ್ಘಾಟನೆ’

ಉಜಿರೆ: ವಿದ್ಯಾರ್ಥಿಗಳ ಅಂತಿಮ ಗುರಿ ಉತ್ತಮ ಫಲಿತಾಂಶವೇ ಆಗಿದ್ದರೂ, ಕೇವಲ ಕಲಿಕೆಯೊಂದೇ ಬದುಕು ಕಟ್ಟಿಕೊಡದು .ವಿದ್ಯಾರ್ಜನೆ ಜೊತೆ ಜೊತೆಗೆ ಕ್ರಿಯಾಶೀಲ ವ್ಯಕ್ತಿತ್ವ ನಿರ್ಮಾಣ ಬಹಳ ಅಗತ್ಯ. ಈ ಶಿಕ್ಷಣ ಸಂಸ್ಥೆ ನಿರ್ಮಿಸಿಕೊಡುವ ವ್ಯವಸ್ಥೆಗಳಲ್ಲಿ, ಸಿಗುವ ಸಂಪನ್ಮೂಲಗಳ ಸರಿಯಾದ ಬಳಕೆ ಮಾಡುವುದರ ಮೂಲಕ ನಿಮ್ಮ ಸರ್ವಾಂಗೀಣ ಅಭಿವೃದ್ಧಿ ಸಾಧ್ಯಾವಾಗಿಸಿಕೊಳ್ಳಿ. ಕಲಿಕೆ ಜೊತೆಗೆ ಇತರೆ ಪ್ರತಿಭೆಗಳಿದ್ದರೆ ಭವಿಷ್ಯದಲ್ಲಿ ಪ್ರಯೋಜನಕಾರಿ. ನಿಮ್ಮ ಆಸಕ್ತಿಯ ಸಂಘಗಳಲ್ಲಿ ಸೇರಿಕೊಂಡು ಸುಪ್ತ ಪ್ರತಿಭೆಗಳ ಅನಾವರಣಗೊಳಿಸಿ ಎಂದು ಕಾಲೇಜಿನ ಈ ಶೈಕ್ಷಣಿಕ ವರ್ಷದ ‘ವಿವಿಧ ಸಂಘಗಳ ಉದ್ಘಾಟನೆ’ ನೆರವೇರಿಸಿ ,ಎಸ್. ಡಿ. ಎಂ ಪದವಿ ಕಾಲೇಜಿನ ಆಡಳಿತ ಕುಲಸಚಿವೆ ಹಾಗೂ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರಾಗಿರುವ ಶಲಿಪ್ ಎ. ಪಿ. ಇವರು ಮಾತಾಡಿದರು.

ಪಾಂಡವರಿಗೆ ಶಸ್ತ್ರ-ಶಾಸ್ತ್ರಗಳ ಕಲಿಕೆಯ ಜೊತೆ ಜೊತೆಗೆ ಅವರ ಸ್ವಂತ ಆಸಕ್ತಿಯ ವಿಷಯಗಳ ಕಲಿಕೆಗೂ ಒತ್ತು ನೀಡಿ ಕಡ್ಡಾಯ ಕಲಿಕೆ ಎಂದು ನಿಗದಿಗೊಳಿಸಿ ಸನ್ನದ್ಧಗೊಳಿಸಿದ ವಿದ್ಯೆಗಳು ಅಜ್ಞಾತವಾಸದ ವೇಳೆ ಪಾಂಡವರ ಕಾಪಾಡಿತು.ಹಾಗೆಯೇ ಐದ್ಯೋಗಿಕ ನೆಲೆಯಲ್ಲಿ ಮಾತ್ರವಲ್ಲದೇ, ಮಾನಸಿಕ ನೆಮ್ಮದಿ ಹಾಗೂ ಕುಷಿಗೆ ಪೂರಕವಾದ ಕಲಿಕೆಗೆ, ಪ್ರತಿಭಾ ಪ್ರದರ್ಶನಗಳಿಗೆ ಸಂಘದ ಕಾರ್ಯ ಚಟುವಟಿಕೆ ಸಹಕಾರಿ. ಎಲ್ಲರೂ ಸಕ್ರಿಯವಾಗಿ ಭಾಗವಹಿಸಿ ಎಂದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಹೇಳಿದರು.

ವೇದಿಕೆಯಲ್ಲಿ ಉಪ ಪ್ರಾಂಶುಪಾಲರಾದ ಮನೀಶ್ ಕುಮಾರ್ ಹಾಗೂ ವಿಜ್ಞಾನ ಸಂಘದ ಸಂಯೋಜಕರು ಹಾಗೂ ಭೌತಶಾಸ್ತ್ರ ಮುಖ್ಯಸ್ಥರಾದ ರಮೇಶ್ ಬಾಬು ಎಚ್. ಪಿ ಉಪಸ್ಥಿತರಿದ್ದರು.

ಇಂಗ್ಲಿಷ್ ವಿಭಾಗದ ಉಪನ್ಯಾಸಕರಾದ ಪಾರ್ಶ್ವನಾಥ ಹೆಗ್ಡೆ ಕಾರ್ಯಕ್ರಮ ದಲ್ಲಿ ವಂದಿಸಿ, ನಿರೂಪಿಸಿದರು.

Related posts

ಮಾ.2: ಟೀಮ್ ದುರ್ಗಾನುಗ್ರಹ ಮುಗೇರಡ್ಕ, ನಮೋ ಬ್ರಿಗೇಡ್ ಮುಗೇರಡ್ಕ ಹಾಗೂ ಕಬಡ್ಡಿ ಅಸೊಸೀಯೇಶನ್ ಆಶ್ರಯದಲ್ಲಿ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಹಗ್ಗಜಗ್ಗಾಟ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಯ್ಯೂರು: ಜೀಪು ಮತ್ತು ಸರಕಾರಿ ಬಸ್ ನಡುವೆ ಅಪಘಾತ

Suddi Udaya

ವಿಧಾನಪರಿಷತ್‌ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣವಚನ ಸ್ವೀಕಾರ

Suddi Udaya

ಬೋಂಟ್ರೊಟ್ಟುಗುತ್ತು, ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ಮತ್ತು ಕಲಶಾಭಿಷೇಕ ಸಮಿತಿ ಮಹಾ ಚಂಡಿಕಾಯಾಗ ಮತ್ತು ದೈವಗಳ ಪುನರ್ ಪ್ರತಿಷ್ಠ ಕಲಶಾಭಿಷೇಕ ಮತ್ತು ನೇಮೋತ್ಸವ ಅಂಗವಾಗಿ ಕ್ಷೇತ್ರದಲ್ಲಿ ಚಪ್ಪರ ಮುಹೂರ್ತ

Suddi Udaya

ಬೆಳಾಲು : ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಆರೋಪಿಗಳ ಮನೆಯಿಂದ ಬೈಕ್, ಬಟ್ಟೆ ಕತ್ತಿ ವಶಕ್ಕೆ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿ ಪವನ್ ಸಾಲ್ಯಾನ್ ಕೊಲ್ಲಾಜೆ

Suddi Udaya
error: Content is protected !!