25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಎಸ್.ಡಿ.ಎಂ.ವಸತಿ ಪದವಿ ಪೂರ್ವ ಕಾಲೇಜು ‘ಅಂತಾರಾಷ್ಟ್ರೀಯ ಯೋಗ ದಿನಾಚರಣೆ’

ಉಜಿರೆ: ಮನಸ್ಸು ಮತ್ತು ದೇಹಕ್ಕೆ ಯೋಗ್ಯ ಸ್ಥಿತಿ ತಂದು ಕೊಡುವಲ್ಲಿ ಯೋಗದ ಪಾತ್ರ ಬಹಳ ಮುಖ್ಯ. ಮಾನಸಿಕ ದೈಹಿಕ ಒತ್ತಡಗಳಿಂದ ಹೊರಬರುವಲ್ಲಿ ಚಿಕಿತ್ಸೆಯಂತೆ ಫಲಕಾರಿ, ಯೋಗ ಬಲ್ಲವನಿಗೆ ರೋಗವಿಲ್ಲ, ಇತ್ತೀಚಿಗಿನ ಒತ್ತಡ ತುಂಬಿದ ಬದುಕಿನಲ್ಲಿ ಮಾನಸಿಕ ಸಮತೋಲನವೇ ಬಹಳ ಮುಖ್ಯ , ಹಾಗಾಗಿ ವಯಸ್ಸಿನ ಮಿತಿಯಿಲ್ಲದೆ ಎಲ್ಲರೂ ಯೋಗದ ಮೊರೆ ಹೋದರೆ ಆರೋಗ್ಯಯುತ ಬದುಕು ಸಾಧ್ಯವೆಂದು ಕಾಲೇಜಿನ ಪ್ರಾಂಶುಪಾಲರಾದ ಶ್ರೀಯುತ ಸುನಿಲ್ ಪಂಡಿತ್ ಹೇಳಿದರು.

ಕಾಲೇಜಿನಲ್ಲಿ ನಡೆದ ‘ಯೋಗ ದಿನ’ದ ಆಚರಣೆ ಅಂಗವಾಗಿ ಯೋಗ ಸ್ಪರ್ಧೆ ಏರ್ಪಡಿಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಿಲಾಯಿತು, ನಂತರ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ನಡೆಯಿತು.

ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿದ್ದ ಲಕ್ಷ್ಮಣ್ ಜಿ. ಡಿ ಹಾಗೂ ಉಪ ಪ್ರಾಂಶುಪಾಲರಾದ ಮನೀಶ್ ಕುಮಾರ್ ಹಾಗೂ ಕಾಲೇಜಿನ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಭೌತಶಾಸ್ತ್ರ ಉಪನ್ಯಾಸಕರಾದ ವಿಕ್ರಂ.ಪಿ ವಂದಿಸಿ,ನಿರೂಪಿಸಿದರು.

Related posts

ನ.30: ಕರಾಯದಲ್ಲಿ ವಿದ್ಯುತ್ ನಿಲುಗಡೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಹಬ್ಬ ಆಚರಣೆ

Suddi Udaya

ಹೆಜಮಾಡಿಕೋಡಿಯಿಂದ ರೂ.21 ಲಕ್ಷ ಮೌಲ್ಯದ ಕಬ್ಬಿಣದ ಶೀಟು ಮತ್ತು ರಾಡ್‌ಗಳ ಕಳವು ಪ್ರಕರಣ: ಮದ್ದಡ್ಕ, ಬೆಳ್ತಂಗಡಿ, ಹಳೆಪೇಟೆ ಕುಂಠಿನಿಯ ಐವರು ಆರೋಪಿಗಳ ಬಂಧನ

Suddi Udaya

ಗರ್ಡಾಡಿ : ಪ್ರಗತಿಪರ ಕೃಷಿಕ ಹಾಗೂ ಖ್ಯಾತ ಜ್ಯೋತಿಷಿ ಅನಂತ ಗೋವಿಂದ ಪಟವರ್ಧನ್ ನಿಧನ

Suddi Udaya

ಉಜಿರೆ : ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ಗೋಡೆ ಬರಹ’ ಅನಾವರಣ”

Suddi Udaya

ಪದ್ಮುಂಜ ಸ.ಪ್ರೌ. ಶಾಲೆಯಲ್ಲಿ ಸಮಾಜ ವಿಜ್ಞಾನ ವಿಷಯ ವೇದಿಕೆಯ ಸಮಾಲೋಚನಾ ಸಭೆ

Suddi Udaya
error: Content is protected !!