25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಐಸಮ್ಮರವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

ಉಜಿರೆ: ಒಕ್ಕೂಟದ ಪದಾಧಿಕಾರಿಗಳು ಮತ್ತು ಸೇವಾಪ್ರತಿನಿಧಿಯವರು ಸಂಘದ ಸದಸ್ಯರಾಗಿರುವ ಹೆಚ್ಚಿನ ಸದಸ್ಯರು ಪ್ರಗತಿನಿಧಿಯನ್ನು ಪಡೆದುಕೊಂಡು ಪದ್ಮಿನಿಯೋಗ ಮಾಡಿ ಅಭಿವೃದ್ಧಿಯನ್ನು ಆಗುತ್ತಿರುವ ಮಾಹಿತಿಯನ್ನು ಪಡೆಯಲು ಹಾಗು ಅವರಿಗೆ ಇನ್ನಷ್ಟು ಯೋಜನೆಯ ಸೇವೆಗಳನ್ನು ನೀಡುವ ಉದ್ದೇಶದಿಂದ ಮನೆ ಭೇಟಿಯನ್ನು ಮಾಡುವ ಸಂದರ್ಭದಲ್ಲಿ, ಐಸಮ್ಮ ರವರಿಗೆ ವೀಲ್ ಚಯರ್ ಅಗತ್ಯತೆಯನ್ನು ಇದೆ ಎನ್ನುವಂತಹ ವಿಷಯವನ್ನು ಮನೆ ಭೇಟಿ ಮಾಡಿದ ಸಂದರ್ಭ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸೇವಾಪ್ರತಿನಿಧಿಯವರು ಪೂಜ್ಯ ಖಾವಂದರಿಗೆ ವಿಶೇಷವಾದ ಮನವಿಯನ್ನು ನೀಡಿದ್ದು ಈ ಮನವಿಗೆ ಪೂಜ್ಯರು ಸಮ್ಮತಿಸಿ ಉಚಿತವಾಗಿ ವೀಲ್ ಚೇರ್ ಒದಗಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಲಾಯಿಲ ವಲಯದ ಲಾಯಿಲ ಗಾಂಧಿನಗರ ಎಂಬಲ್ಲಿನ ಐಸಮ್ಮರವರಿಗೆ ನಡೆದಾಡಲು ಶಕ್ತಿ ಇಲ್ಲದಿರುವ ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ವತಿಯಿಂದ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಉಚಿತವಾಗಿ ನೀಡಿರುವ ವೀಲ್ ಚಯರ್ ನ್ನು ತಾಲ್ಲೂಕು ಯೋಜನಾಧಿಕಾರಿ ಸುರೇಂದ್ರರವರು ವಿತರಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಮಾಜಿ ಅಧ್ಯಕ್ಷರಾದ ಶ್ರೀಮತಿ ವನಿತಾ, ಲಾಯಿಲ ಸಿ ಒಕ್ಕೂಟದ ಕಾರ್ಯದರ್ಶಿಯಾದ ಕೈರುಣಿಸ,
ವಲಯ ಮೇಲ್ವಿಚಾರಕರಾದ ಸುಶಾಂತ್ ,ಸೇವಾಪ್ರತಿನಿಧಿಯಾದ ದಿವ್ಯ ಉಪಸ್ಥಿತರಿದ್ದರು…

Related posts

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಪೌರ ಕಾರ್ಮಿಕರು

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲಾ ವಾರ್ಷಿಕೋತ್ಸವ “ಮನೋಲ್ಲಾಸ ಸಾಂಸ್ಕೃತಿಕ ಸಂಭ್ರಮ -2025”

Suddi Udaya

ತಣ್ಣೀರುಪಂತ: ಮುಂದಿಲ ನಿವಾಸಿ ಸೋಮವಾತಿ ನಿಧನ

Suddi Udaya

”ರಂಗ ಸಂಭ್ರಮ” ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಸಾಧನೆ

Suddi Udaya

ಕಾಶಿಪಟ್ಣ ಕೇಳ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿಯ ವಾರ್ಷಿಕ ನೇಮೋತ್ಸವ ಸಮಾರಂಭದಲ್ಲಿ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ ಕಾಶಿಪಟ್ಣರವರಿಗೆ ಸನ್ಮಾನ

Suddi Udaya

ತಾಲೂಕು ಮಟ್ಟದ ಎರಡು ದಿನದ ತುಳು ಸಾಹಿತ್ಯ ರಚನಾ ಕಮ್ಮಟದ ಸಮಾರೋಪ

Suddi Udaya
error: Content is protected !!