25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಐಸಮ್ಮರವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

ಉಜಿರೆ: ಒಕ್ಕೂಟದ ಪದಾಧಿಕಾರಿಗಳು ಮತ್ತು ಸೇವಾಪ್ರತಿನಿಧಿಯವರು ಸಂಘದ ಸದಸ್ಯರಾಗಿರುವ ಹೆಚ್ಚಿನ ಸದಸ್ಯರು ಪ್ರಗತಿನಿಧಿಯನ್ನು ಪಡೆದುಕೊಂಡು ಪದ್ಮಿನಿಯೋಗ ಮಾಡಿ ಅಭಿವೃದ್ಧಿಯನ್ನು ಆಗುತ್ತಿರುವ ಮಾಹಿತಿಯನ್ನು ಪಡೆಯಲು ಹಾಗು ಅವರಿಗೆ ಇನ್ನಷ್ಟು ಯೋಜನೆಯ ಸೇವೆಗಳನ್ನು ನೀಡುವ ಉದ್ದೇಶದಿಂದ ಮನೆ ಭೇಟಿಯನ್ನು ಮಾಡುವ ಸಂದರ್ಭದಲ್ಲಿ, ಐಸಮ್ಮ ರವರಿಗೆ ವೀಲ್ ಚಯರ್ ಅಗತ್ಯತೆಯನ್ನು ಇದೆ ಎನ್ನುವಂತಹ ವಿಷಯವನ್ನು ಮನೆ ಭೇಟಿ ಮಾಡಿದ ಸಂದರ್ಭ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸೇವಾಪ್ರತಿನಿಧಿಯವರು ಪೂಜ್ಯ ಖಾವಂದರಿಗೆ ವಿಶೇಷವಾದ ಮನವಿಯನ್ನು ನೀಡಿದ್ದು ಈ ಮನವಿಗೆ ಪೂಜ್ಯರು ಸಮ್ಮತಿಸಿ ಉಚಿತವಾಗಿ ವೀಲ್ ಚೇರ್ ಒದಗಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಲಾಯಿಲ ವಲಯದ ಲಾಯಿಲ ಗಾಂಧಿನಗರ ಎಂಬಲ್ಲಿನ ಐಸಮ್ಮರವರಿಗೆ ನಡೆದಾಡಲು ಶಕ್ತಿ ಇಲ್ಲದಿರುವ ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ವತಿಯಿಂದ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಉಚಿತವಾಗಿ ನೀಡಿರುವ ವೀಲ್ ಚಯರ್ ನ್ನು ತಾಲ್ಲೂಕು ಯೋಜನಾಧಿಕಾರಿ ಸುರೇಂದ್ರರವರು ವಿತರಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಮಾಜಿ ಅಧ್ಯಕ್ಷರಾದ ಶ್ರೀಮತಿ ವನಿತಾ, ಲಾಯಿಲ ಸಿ ಒಕ್ಕೂಟದ ಕಾರ್ಯದರ್ಶಿಯಾದ ಕೈರುಣಿಸ,
ವಲಯ ಮೇಲ್ವಿಚಾರಕರಾದ ಸುಶಾಂತ್ ,ಸೇವಾಪ್ರತಿನಿಧಿಯಾದ ದಿವ್ಯ ಉಪಸ್ಥಿತರಿದ್ದರು…

Related posts

ರಾಜ್ಯಮಟ್ಟದ ಸ್ಪೆಲ್ ಬಿ ಪರೀಕ್ಷೆ: ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಕೋರಂ ಕೊರತೆ ಹಾಗೂ ಅಧಿಕಾರಿಗಳು ಭಾಗವಹಿಸದ್ದರಿಂದ ಕೊಕ್ಕಡ ಗ್ರಾಮಸಭೆ ಮುಂದೂಡಿಕೆ

Suddi Udaya

ವಲಯ ಮಟ್ಟದ ಪ್ರೌಢ ಶಾಲೆಗಳ ಪ್ರತಿಭಾ ಕಾರಂಜಿ: ವಾಣಿ ಆಂ.ಮಾ.ಪ್ರೌ. ಶಾಲೆಗೆ ರನ್ನರ್‍ಸ್ ಚಾಂಪಿಯನ್ ಮತ್ತು ಹಲವು ಪ್ರಶಸ್ತಿಗಳು

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕನ್ಯಾಡಿ ಸ.ಉ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಎ.ಆರ್.ಎಂ ಮೋಟಾರ್ಸ್ ನಲ್ಲಿ ಕಿಯಾ ಕಂಪನಿಯ ‘ನ್ಯೂ ಸೆಲ್ಟೋಸ್’ ಕಾರು ಬಿಡುಗಡೆ

Suddi Udaya

ಭಾರತೀಯ ಜೈನ್ ಮಿಲನ್ ನ ಕೆನಡಾ ಘಟಕವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೆಬಿನಾರ್ ಮೂಲಕ ಉದ್ಘಾಟನೆ

Suddi Udaya
error: Content is protected !!