September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್‌ ರಕ್ತದಾನ ಶಿಬಿರ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ, ಒಕ್ಕಲಿಗ ಗೌಡರ ಯುವ ಸಂಘ ಒಕ್ಕಲಿಗ ಗೌಡರ ಮಹಿಳಾ ಸಂಘ, ಒಕ್ಕಲಿಗ ಗೌಡರ ಮಹಿಳಾ ಯುವ ಸಂಘ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ.) ಉಜಿರೆ ಇದರ ಸಹಯೋಗದಲ್ಲಿ ಜೂ. 27 ರಂದು ಉಜಿರೆಯ ಶ್ರೀ ಶಾರದ ಮಂಟಪದಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಪ್ರಸನ್ನ ಶಿಕ್ಷಣ ಸಮೂಹ ವಿದ್ಯಾಸಂಸ್ಥೆಗಳು ಲಾಯಿಲ ಬೆಳ್ತಂಗಡಿ ಕೆ.ಎಂ.ಸಿ ಆಸ್ಪತ್ರೆ ಮಂಗಳೂರು ಮತ್ತು ಊರ ನಾಗರಿಕರ ಸಹಭಾಗಿತ್ವದಲ್ಲಿ ಬೃಹತ್‌ ರಕ್ತದಾನ ಶಿಬಿರ ನಡೆಯಿತು.

ಕಾರ್ಯಕ್ರಮವನ್ನು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನ ಆನುವಂಶಿಕ ಆಡಳಿತ ಮೊಕ್ತೇಸರರು ಶರತ್‌ ಕೃಷ್ಣ ಪಡ್ಡೆಟ್ನಾಯ ಉದ್ಘಾಟಿಸಿ ಶುಭಹಾರೈಸಿದರು. ಅಧ್ಯಕ್ಷತೆಯನ್ನು ಮಾಜಿ ಸಚಿವರು ಕೆ. ಗಂಗಾಧರ ಗೌಡ ವಹಿಸಿದರು.

ಮುಖ್ಯ ಅತಿಥಿಗಳಾಗಿ ಮಂಗಳೂರು ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಕಿವಿ, ಮೂಗು, ಗಂಟಲು ಶಸ್ತ್ರ ಚಿಕಿತ್ಸಾ ತಜ್ಞರು ಡಾ| ವಿಶ್ವ ವಿಜೇತ ಎಸ್.ಕೆ., ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರ್, ಉಜಿರೆ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ) ಅಧ್ಯಕ್ಷ ರಂಜನ್ ಜಿ. ಗೌಡ, ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಂದರ ಗೌಡ ಇಚ್ಚಿಲ, ಒಕ್ಕಲಿಗರ ಸೇವಾ ಸಂಘ ಜೊತೆ ಕಾರ್ಯದರ್ಶಿ ದಾಮೋದರ ಗೌಡ ಸುರುಳಿ, ಒಕ್ಕಲಿಗರ ಸೇವಾ ಸಂಘ ಸದಸ್ಯೆ ಶ್ರೀಮತಿ ಸೌಮ್ಯಲತಾ ಜಯಂತ ಗೌಡ ಗುರಿಪಳ್ಳ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಯುವ ಸಂಘ ಅಧ್ಯಕ್ಷ ಅನಿಲ್ ಕುಮಾರ್ ಅಂತರ, ತಾಲೂಕು ಒಕ್ಕಲಿಗ ಗೌಡರ ಮಹಿಳಾ ಸಂಘ ಅಧ್ಯಕ್ಷೆ ಶ್ರೀಮತಿ ಅಪರ್ಣಾ ಶಿವಕಾಂತ ಗೌಡ, ತಾಲೂಕು ಒಕ್ಕಲಿಗ ಗೌಡರ ಮಹಿಳಾ ಯುವ ಸಂಘ ಅಧ್ಯಕ್ಷೆ ಶ್ರೀಮತಿ ಅನುಪಮಾ ಸತೀಶ್ ಗೌಡ, ಮಂಗಳೂರು ಕೆ.ಎಂ.ಸಿ. ಬ್ಲಡ್ ಬ್ಯಾಂಕ್, ಮೆಡಿಕಲ್ ಆಫಿಸರ್ ಡಾ| ಸುನಿಧಿ ಉಪಸ್ಥಿತರಿದ್ದರು..

Related posts

ಕುಂಟಾಲಪಳಿಕೆ ಶಾಲೆಯಲ್ಲಿ ತುಂಬೆತ್ತಡ್ಕ ರಾಣೆಯಾರ್ ಸಮಾಜ ಸೇವಾ ಸಂಘದಿಂದ ಶ್ರಮದಾನ

Suddi Udaya

ಲಾಯಿಲ ರಾಘವೇಂದ್ರ ಮಠದಲ್ಲಿ ದೃಢಕಲಶ ಉತ್ಸವ

Suddi Udaya

ಉಳ್ಳಾಲ ಸಯ್ಯಿದ್ ಮದನಿ ವಲಿಯುಲ್ಲಾಹಿ ದರ್ಗಾಶರೀಫ್ ನಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವಂತೆ ವಿಶೇಷ ಪ್ರಾರ್ಥನೆ

Suddi Udaya

ಅ.28: ಕುತ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಸಮಗ್ರ ರಕ್ಷಣಾ ಯೋಜನೆ ಅಪಘಾತ ವಿಮಾ ಮೇಳ’

Suddi Udaya

ಬಡವರಿಗೆ ವಸತಿ, ನಿವೇಶನ ಕಲ್ಪಿಸಲು ವಿಫಲ: ಲಾಯಿಲ ಗ್ರಾ.ಪಂ. ವಿರುದ್ಧ ಗ್ರಾಮಸ್ಥರ ಆಕ್ರೋಶ

Suddi Udaya

ತೆಲಂಗಾಣ ಚುನಾವಣಾ ವಾರ್ ರೂಮ್ ಸಂಯೋಜಕರಾಗಿ ರಕ್ಷಿತ್ ಶಿವರಾಂ ನೇಮಕ

Suddi Udaya
error: Content is protected !!