24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಕೆಂಪೇಗೌಡ ಜಯಂತಿ ಆಚರಣೆ

ಬೆಳ್ತಂಗಡಿ: ಕೆಂಪೇಗೌಡ ವ್ಯಕ್ತಿಯಲ್ಲ,ವಿಶೇಷ ಶಕ್ತಿ “ಕೆಂಪೇಗೌಡ ಒಕ್ಕಲಿಗರ ನಾಯಕ ಮಾತ್ರವಲ್ಲ,ಅವರು ಎಲ್ಲಾ ಸಮಾಜದ ನಾಯಕರು ಹೌದು, ಅವರು ವ್ಯಕ್ತಿಯಲ್ಲ ಅದೊಂದು ವಿಶೇಷ ಶಕ್ತಿ, ಎಂದು ತಾಲೂಕು ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷ ಕೆ. ಬಾಲಕೃಷ್ಣ ಗೌಡ ಹೇಳಿದರು.


ಅವರು ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣೆ ಸಮಿತಿ ವತಿಯಿಂದ ಲಾಯಿಲದ ಸಂಗಮ ಸಭಾಭವನದಲ್ಲಿ ಜೂ.27ರಂದು ಜರಗಿದ ಕೆಂಪೇಗೌಡ ಜಯಂತಿ ಉದ್ಘಾಟಿಸಿ ಮಾತನಾಡಿದರು.
ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ತಾಲೂಕು ಅಧ್ಯಕ್ಷ ಕುಶಾಲಪ್ಪ ಗೌಡ ಪಿ.ಮಾತನಾಡಿ “ಕೆಂಪೇಗೌಡರ ಪ್ರೇರಣೆ ಎಲ್ಲರಿಗೂ ಮಾದರಿ” ಎಂದರು.
ಪ್ರಧಾನ ಭಾಷಣಕಾರ ವಾಣಿ ಪದವಿ ಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ಯದುಪತಿ ಗೌಡ ಮಾತನಾಡಿ “ಕೆಂಪೇಗೌಡರ ಆಧುನಿಕ ಕಲ್ಪನೆಯ ಬೆಂಗಳೂರು ಲಕ್ಷಾಂತರ ಜನರಿಗೆ ಆಶ್ರಯ ನೀಡುತ್ತಿದೆ.ಐದು ಶತಮಾನಗಳ ಹಿಂದೆ ಊಹೆಗೂ ನಿಲುಕದಂತ ಯೋಜನೆ ರೂಪಿಸಿದ ಅವರು ಇತಿಹಾಸವನ್ನು ನಿರ್ಮಾಣ ಮಾಡಿದ್ದಾರೆ ಎಂದರು.

ತಹಸೀಲ್ದಾರ್ ಪೃಥ್ವಿ ಸಾನಿಕಂ ಅಧ್ಯಕ್ಷತೆ ವಹಿಸಿದ್ದರು. ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ರಾಜೇಶ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಯಶೋಧರ, ಎಸ್ಸೆಸ್ಸೆಲ್ಸಿ ಯಲ್ಲಿ ಒಕ್ಕಲಿಗ ಸಮುದಾಯದಲ್ಲಿ ಅಧಿಕ ಅಂಕ ಗಳಿಸಿ ವಿಧ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಕೆಂಪೇಗೌಡರ ಜನ್ಮದಿನಚಾರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪ್ರಬಂಧ,ಚಿತ್ರಕಲಾ ಹಾಗೂ ಪೈಂಟಿಗ್ ಸ್ಪರ್ಧೆಗಳ ಬಹುಮಾನ ವಿತರಿಸಲಾಯಿತು. ತಾಪಂ ಇಒ ಭವಾನಿ ಶಂಕರ್ ಸ್ವಾಗತಿಸಿದರು. ಸಮಾಜ ಕಲ್ಯಾಣ ಇಲಾಖೆಯ ಹೇಮಲತಾ ಕಾರ್ಯಕ್ರಮ ನಿರೂಪಿಸಿದರು. ಕಂದಾಯ ಇಲಾಖೆಯ ಹೇಮಾ ವಂದಿಸಿದರು.

Related posts

ಸೇವಾಭಾರತಿಯಿಂದ 32ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ನೇಲ್ಯಡ್ಕದಲ್ಲಿ ಉದ್ಘಾಟನೆ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯ ಬ್ಯೂಟಿಪಾರ್ಲರ್ ಮ್ಯಾನೇಜ್‌ಮೆಂಟ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಗ್ರಾಮೀಣ ಪ್ರತಿಭೆ ಉತ್ತಮ‌ ಸಾಧನೆ, ಅಂಡಿಂಜೆಯ ದ್ವಿಶಾನ್ ಜೈನ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಧರ್ಮಸ್ಥಳ ಗ್ರಾ.ಪಂ. ಯಿಂದ ಡೆಂಗ್ಯೂ ಸಾಂಕ್ರಾಮಿಕ ರೋಗ ತಡೆಗಟ್ಟುವ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಅಂಡಿಂಜೆ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ: ಸಿರಿ ಧಾನ್ಯಗಳ ಬಳಕೆ ಹಾಗೂ ಆಷಾಢದಲ್ಲಿ ಒಂದು ದಿನ ಕಾರ್ಯಕ್ರಮ

Suddi Udaya

ಇಂದಬೆಟ್ಟು: ಸಮೃದ್ಧಿ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!