25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಕೆಂಪೇಗೌಡ ಜಯಂತಿ ಆಚರಣೆ

ಬೆಳ್ತಂಗಡಿ: ಕೆಂಪೇಗೌಡ ವ್ಯಕ್ತಿಯಲ್ಲ,ವಿಶೇಷ ಶಕ್ತಿ “ಕೆಂಪೇಗೌಡ ಒಕ್ಕಲಿಗರ ನಾಯಕ ಮಾತ್ರವಲ್ಲ,ಅವರು ಎಲ್ಲಾ ಸಮಾಜದ ನಾಯಕರು ಹೌದು, ಅವರು ವ್ಯಕ್ತಿಯಲ್ಲ ಅದೊಂದು ವಿಶೇಷ ಶಕ್ತಿ, ಎಂದು ತಾಲೂಕು ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷ ಕೆ. ಬಾಲಕೃಷ್ಣ ಗೌಡ ಹೇಳಿದರು.


ಅವರು ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣೆ ಸಮಿತಿ ವತಿಯಿಂದ ಲಾಯಿಲದ ಸಂಗಮ ಸಭಾಭವನದಲ್ಲಿ ಜೂ.27ರಂದು ಜರಗಿದ ಕೆಂಪೇಗೌಡ ಜಯಂತಿ ಉದ್ಘಾಟಿಸಿ ಮಾತನಾಡಿದರು.
ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ತಾಲೂಕು ಅಧ್ಯಕ್ಷ ಕುಶಾಲಪ್ಪ ಗೌಡ ಪಿ.ಮಾತನಾಡಿ “ಕೆಂಪೇಗೌಡರ ಪ್ರೇರಣೆ ಎಲ್ಲರಿಗೂ ಮಾದರಿ” ಎಂದರು.
ಪ್ರಧಾನ ಭಾಷಣಕಾರ ವಾಣಿ ಪದವಿ ಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ಯದುಪತಿ ಗೌಡ ಮಾತನಾಡಿ “ಕೆಂಪೇಗೌಡರ ಆಧುನಿಕ ಕಲ್ಪನೆಯ ಬೆಂಗಳೂರು ಲಕ್ಷಾಂತರ ಜನರಿಗೆ ಆಶ್ರಯ ನೀಡುತ್ತಿದೆ.ಐದು ಶತಮಾನಗಳ ಹಿಂದೆ ಊಹೆಗೂ ನಿಲುಕದಂತ ಯೋಜನೆ ರೂಪಿಸಿದ ಅವರು ಇತಿಹಾಸವನ್ನು ನಿರ್ಮಾಣ ಮಾಡಿದ್ದಾರೆ ಎಂದರು.

ತಹಸೀಲ್ದಾರ್ ಪೃಥ್ವಿ ಸಾನಿಕಂ ಅಧ್ಯಕ್ಷತೆ ವಹಿಸಿದ್ದರು. ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ರಾಜೇಶ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಯಶೋಧರ, ಎಸ್ಸೆಸ್ಸೆಲ್ಸಿ ಯಲ್ಲಿ ಒಕ್ಕಲಿಗ ಸಮುದಾಯದಲ್ಲಿ ಅಧಿಕ ಅಂಕ ಗಳಿಸಿ ವಿಧ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಕೆಂಪೇಗೌಡರ ಜನ್ಮದಿನಚಾರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪ್ರಬಂಧ,ಚಿತ್ರಕಲಾ ಹಾಗೂ ಪೈಂಟಿಗ್ ಸ್ಪರ್ಧೆಗಳ ಬಹುಮಾನ ವಿತರಿಸಲಾಯಿತು. ತಾಪಂ ಇಒ ಭವಾನಿ ಶಂಕರ್ ಸ್ವಾಗತಿಸಿದರು. ಸಮಾಜ ಕಲ್ಯಾಣ ಇಲಾಖೆಯ ಹೇಮಲತಾ ಕಾರ್ಯಕ್ರಮ ನಿರೂಪಿಸಿದರು. ಕಂದಾಯ ಇಲಾಖೆಯ ಹೇಮಾ ವಂದಿಸಿದರು.

Related posts

ಜ.22: ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಬೆಳ್ತಂಗಡಿ ತಾಲೂಕಿನಾದ್ಯಂತ ಸಂಭ್ರಮಿಸಲು ಸಜ್ಜಾಗಿರುವ ರಾಮಭಕ್ತರು

Suddi Udaya

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ಆಶ್ರಯದಲ್ಲಿ ‘ಆಟಿಡೊಂಜಿ ಕೂಟ’

Suddi Udaya

“ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ , ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೆಬಲ್ ಫೌಂಡೇಶನ್ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಥಮ ಚಿಕಿತ್ಸೆ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಶಿಬಿರ

Suddi Udaya

ಕೊಕ್ಕಡ ಉಪ್ಪಾರಹಳ್ಳದಲ್ಲಿ ದಿಢೀರನೆ ಎದ್ದ ಭೀಕರ ಸುಂಟರ ಗಾಳಿ: ಗಾಳಿಗೆ ಹಾರಿ ಹೋಯಿತು ಹಲವು ಮನೆಗಳ ಹಂಚು, ಶೀಟ್ -ತೋಟಗಳಲ್ಲಿ ಮುರಿದು ಬಿತ್ತು ಅಡಿಕೆ, ತೆಂಗಿನ ಮರಗಳು

Suddi Udaya

ಧರ್ಮಸ್ಥಳ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರ ಅವಿರೋಧ ಆಯ್ಕೆ

Suddi Udaya

ಕನ್ಯಾಡಿ 2: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ನೆರಿಯ ಪೆಟ್ರೋನೆಟ್ ಎಂ ಎಚ್ ಬಿ ಕಂಪನಿ ವತಿಯಿಂದ ಡಿಜಿಟಲ್ ಪ್ರೊಜೆಕ್ಟರ್ ಕೊಡುಗೆ

Suddi Udaya
error: Content is protected !!