25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಎಸ್.ಡಿ.ಎಂ.ವಸತಿ ಪದವಿ ಪೂರ್ವ ಕಾಲೇಜು ‘ಅಂತಾರಾಷ್ಟ್ರೀಯ ಯೋಗ ದಿನಾಚರಣೆ’

ಉಜಿರೆ: ಮನಸ್ಸು ಮತ್ತು ದೇಹಕ್ಕೆ ಯೋಗ್ಯ ಸ್ಥಿತಿ ತಂದು ಕೊಡುವಲ್ಲಿ ಯೋಗದ ಪಾತ್ರ ಬಹಳ ಮುಖ್ಯ. ಮಾನಸಿಕ ದೈಹಿಕ ಒತ್ತಡಗಳಿಂದ ಹೊರಬರುವಲ್ಲಿ ಚಿಕಿತ್ಸೆಯಂತೆ ಫಲಕಾರಿ, ಯೋಗ ಬಲ್ಲವನಿಗೆ ರೋಗವಿಲ್ಲ, ಇತ್ತೀಚಿಗಿನ ಒತ್ತಡ ತುಂಬಿದ ಬದುಕಿನಲ್ಲಿ ಮಾನಸಿಕ ಸಮತೋಲನವೇ ಬಹಳ ಮುಖ್ಯ , ಹಾಗಾಗಿ ವಯಸ್ಸಿನ ಮಿತಿಯಿಲ್ಲದೆ ಎಲ್ಲರೂ ಯೋಗದ ಮೊರೆ ಹೋದರೆ ಆರೋಗ್ಯಯುತ ಬದುಕು ಸಾಧ್ಯವೆಂದು ಕಾಲೇಜಿನ ಪ್ರಾಂಶುಪಾಲರಾದ ಶ್ರೀಯುತ ಸುನಿಲ್ ಪಂಡಿತ್ ಹೇಳಿದರು.

ಕಾಲೇಜಿನಲ್ಲಿ ನಡೆದ ‘ಯೋಗ ದಿನ’ದ ಆಚರಣೆ ಅಂಗವಾಗಿ ಯೋಗ ಸ್ಪರ್ಧೆ ಏರ್ಪಡಿಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಿಲಾಯಿತು, ನಂತರ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ನಡೆಯಿತು.

ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿದ್ದ ಲಕ್ಷ್ಮಣ್ ಜಿ. ಡಿ ಹಾಗೂ ಉಪ ಪ್ರಾಂಶುಪಾಲರಾದ ಮನೀಶ್ ಕುಮಾರ್ ಹಾಗೂ ಕಾಲೇಜಿನ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಭೌತಶಾಸ್ತ್ರ ಉಪನ್ಯಾಸಕರಾದ ವಿಕ್ರಂ.ಪಿ ವಂದಿಸಿ,ನಿರೂಪಿಸಿದರು.

Related posts

ಹೊಟ್ಟೆನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತ್ಯು

Suddi Udaya

ಮಾಲಾಡಿ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾದ ರೂ 1.0 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಮಾಲಾಡಿ ಗ್ರಾಮದ ಪೆರ್ಡೆ ಕ್ರಾಸ್ ನಿಂದ ಊರ್ಲ ಕಾಂಕ್ರೀಟೀಕರಣ ರಸ್ತೆ ಕಾಮಗಾರಿ ಉದ್ಘಾಟನೆ

Suddi Udaya

ಮರ್ಹೂಮ್ ಅಝ್ರಿನ್ ಸಿದ್ದೀಕ್ ಇವರ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ : ವನ್ಯಜೀವಿ ವಿಭಾಗದ ಆರ್.ಎಫ್.ಓ ಸ್ವಾತಿ ಎಲ್. ವರ್ಗಾವಣೆ: ನೂತನ ಆರ್.ಎಫ್.ಓ ಆಗಿ ವಿ. ಶರ್ಮಿಷ್ಠ ನೇಮಕ

Suddi Udaya

ಅರಸಿನಮಕ್ಕಿಯಲ್ಲಿ ಮಲ್ಲ ಚಾವಡಿ ಹಬ್ಬ , ಸನ್ಮಾನ ಸಮಾರಂಭ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya

ಕರ್ನಾಟಕ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಮಂಗಳೂರು ಜಿಲ್ಲಾ ಸಮಿತಿಯ ಸಭೆ

Suddi Udaya
error: Content is protected !!