23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಪೋಷಕರ ಜಾಗೃತಿ ಕಾರ್ಯಕ್ರಮ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಜೂ.26 ರಂದು ಪೋಷಕರ ಜಾಗೃತಿ ಕಾರ್ಯಕ್ರಮ ಜರಗಿತು.

ಒಂದರಿಂದ ನಾಲ್ಕನೇ ತರಗತಿವರೆಗಿನ ವಿದ್ಯಾರ್ಥಿಗಳ ಪೋಷಕರಿಗೆ ನಡೆದ ಕಾರ್ಯಕ್ರಮದಲ್ಲಿ ಬೆಳ್ತಂಗಡಿಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಕೌನ್ಸಿಲರ್ ಸೀತಾ ಶೇಟ್ ಸಂಪನ್ಮೂಲ ವ್ಯಕ್ತಿಯಾಗಿದ್ದರು.

ಮಕ್ಕಳ ಬೆಳವಣಿಗೆಯಲ್ಲಿ ಪೋಷಕರು ಹಾಗೂ ಶಿಕ್ಷಕರ ಪಾತ್ರವನ್ನು ಅವರು ವಿವರಿಸಿದರು.

ಮಕ್ಕಳು ದೇವರ ಕೊಡುಗೆಯಾಗಿದ್ದು, ಅವರಿಗೆ ಪೋಷಕರ ವರ್ತನೆ ಹಾಗೂ ಜೀವನ ಶೈಲಿಯೇ ಮಾದರಿಯಾಗಿರುತ್ತದೆ ಎಂದು ಅವರು ತಿಳಿಸಿದರು.

ಶಾಲಾ ಮುಖ್ಯೋಪಾಧ್ಯಾಯನಿ ವಿದ್ಯಾಲಕ್ಷ್ಮಿ ನಾಯಕ್ ಮಾತನಾಡಿ, ಶಾಲೆಯ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳನ್ನು ವಿವರಿಸಿ, ಪೋಷಕರ ಅಹವಾಲುಗಳನ್ನು ವಿಮರ್ಶಿಸಿದರು.

ವಿದ್ಯಾರ್ಥಿಗಳಾದ ಮಾನ್ವಿ ಭಟ್ ಸ್ವಾಗತಿಸಿ, ಧ್ರುವ ವಂದಿಸಿದರು. ಮಾನ್ವಿಲಕ್ಷ್ಮಿ ಅತಿಥಿ ಪರಿಚಯ ನೀಡಿ, ಶಶಿಧರ್ ಕಾರ್ಯಕ್ರಮ ನಿರೂಪಿಸಿದರು.

5, 6 ಮತ್ತು 7ನೇ ತರಗತಿ ವಿಭಾಗದಲ್ಲಿ ಉಜಿರೆಯ ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರದ ಸಹಾಯಕ ಪ್ರಾಧ್ಯಾಪಕಿ ಡಾ. ಅಕ್ಷತಾ ಅವರು ಸಂಪನ್ಮೂಲ ವ್ಯಕ್ತಿಯಾಗಿದ್ದರು.

‘ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಪೋಷಕರ ಪಾತ್ರ’ ಕುರಿತು ಮಾತನಾಡಿದ ಅವರು, ಮಕ್ಕಳು, ಪೋಷಕರು ಮತ್ತು ಶಿಕ್ಷಕರ ನಡುವಿನ ಸಂಬಂಧ, ಒಡನಾಟಗಳ ಬಗ್ಗೆ ತಿಳಿಸಿದರು.

ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮಿ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳಾದ ಸಾನ್ವಿ ಸ್ವಾಗತಿಸಿ, ಪ್ರಸ್ತುತ್ ವಂದಿಸಿ, ಅದಿತಿ ನಿರೂಪಿಸಿದರು.

Related posts

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ: ಸಾಯಿ ಕುಮಾರ್ ಶೆಟ್ಟಿ ನವಶಕ್ತಿ ಇವರಿಂದ ಕಾಯಾ೯ಲಯದ ಉದ್ಘಾಟನೆ

Suddi Udaya

ಫೆ. 01: ಬೆಳಾಲು ಡಿಪಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಾಲಿಬಾಲ್‌ ಪಂದ್ಯಾಟ

Suddi Udaya

ದಾರುನ್ನೂರ್ ಮಸೀದಿ ನಿರ್ಮಿಸಿದ ಶೈಖ್ ಅಬ್ದುಲ್ ರವರ ಪುತ್ರ ಖಾಲಿದ್ ಅಲ್ ಝುಬೈರ್ ರಿಗೆ ಸನ್ಮಾನ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ ಇವರ ವತಿಯಿಂದ ವಿದ್ಯಾಸಿರಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಕೊಕ್ಕಡ: ಪದ್ಮನಾಭ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಉಪಾಧ್ಯಕ್ಷ, ಯುವ ಉದ್ಯಮಿ ಶೀತಲ್ ಜೈನ್ ರವರಿಗೆ ಉದ್ಯಮ ರತ್ನ ಪ್ರಶಸ್ತಿ: ಜೆಸಿಐ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ರವರಿಗೆ ಶೈನಿಂಗ್ ಸೂಪರ್ ಸ್ಟಾರ್ ಪ್ರೆಸಿಡೆಂಟ್ ಪ್ರಶಸ್ತಿ

Suddi Udaya
error: Content is protected !!