July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2023-24ನೆಯ ಸಾಲಿನಲ್ಲಿ ದಾಖಲೆಯ ನೇರ ನೇಮಕಾತಿಯ ಮೂಲಕ ಉದ್ಯೋಗಾವಕಾಶ

ಉಜಿರೆಯಲ್ಲಿ ಕಳೆದ ಹಲವು ವರ್ಷಗಳಿಂದ ಉನ್ನತ ರೀತಿಯ ತಾಂತ್ರಿಕ ಶಿಕ್ಷಣವನ್ನು ನೀಡಿ ಉತ್ತಮ ಉದ್ಯೋಗಾವಕಾಶ ಕಲ್ಪಿಸುತ್ತಿರುವ ರಾಜ್ಯದ ಪ್ರತಿಷ್ಠಿತ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಒಂದಾದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2023-24 ನೆಯ ಸಾಲಿನಲ್ಲಿ ಕೂಡ ಅತಿ ಹೆಚ್ಚು ವಿದ್ಯಾರ್ಥಿಗಳಿಗೆ ಕಾಲೇಜಿನಿಂದಲೇ ನೇರ ನೇಮಕಾತಿ ನಡೆಸಿ ಉದ್ಯೋಗಾವಕಾಶ ಕಲ್ಪಿಸಿಕೊಟ್ಟಿದೆ. ಬಹುರಾಷ್ಟ್ರೀಯ ಪ್ರತಿಷ್ಠಿತ ಕಂಪನಿಗಳಾದ BOSCH, Tata Consulting Engineers, TVS, Toyota Kirlosker Motor Pvt Ltd, Asian Paints, Schnieder electric, Centum Electronics, Unimac Aerospace, Kirloskar Electric, Qcrete Readymix, Sindhu Corporation, Technolab Solutions,Wipro GE Health care, Volvo Group India, TATA Electronics ಇಂತಹ ಸುಮಾರು 40 ಹೆಚ್ಚು ಕಂಪನಿಗಳು ಸುಮಾರು 100ಕ್ಕೂ ಹೆಚ್ಚು ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶವನ್ನು ಕಲ್ಪಿಸಿದೆ

ಪ್ರಥಮ ವರ್ಷದ ಪ್ರವೇಶಾತಿ ಆರಂಭ

2024-25ನೆಯ ಸಾಲಿನ ಪಾಲಿಟೆಕ್ನಿಕ್ ಕೋರ್ಸಿನ ಪ್ರಥಮ ವರ್ಷಕ್ಕೆ ಪ್ರವೇಶಾತಿ ಬಯಸುವ ವಿದ್ಯಾರ್ಥಿಗಳಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ದಾಖಲಾತಿ ಆರಂಭಗೊಂಡಿದ್ದು ಉತ್ತಮ ರೀತಿಯ ತಾಂತ್ರಿಕ ಶಿಕ್ಷಣ ಬಯಸುವವರು ಕಾಲೇಜಿನ ಆಡಳಿತ ಮಂಡಳಿಯನ್ನು ಸಂಪರ್ಕಿಸಬಹುದಾಗಿದೆ ಹೆಚ್ಚಿನ ಮಾಹಿತಿಗಾಗಿ +919845893731,+919880724085 ನಂಬರ್ ಅನ್ನು ಸಂಪರ್ಕಿಸಿ

ಕಾಲೇಜಿನ ವೈಶಿಷ್ಟ್ಯಗಳು:
ಬಹು ಬೇಡಿಕೆಯ 1.ಸಿವಿಲ್ ಇಂಜಿನಿಯರಿಂಗ್, 2.ಕಂಪ್ಯೂಟರ್ ಸೈನ್ಸ್, 3.ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್, 4.ಮೆಕಾನಿಕಲ್ ಇಂಜಿನಿಯರಿಂಗ್ ಎಂಬ ಕೋರ್ಸುಗಳು.

ಆಡಿಯೋ/ವಿಡಿಯೋ ತರಗತಿಗಳ ಜೊತೆ ನುರಿತ ಪ್ರಾಧ್ಯಾಪಕ ವರ್ಗ.
ಶೇಕಡಾ 100% ಉದ್ಯೋಗಾವಕಾಶ
ಹಾಸ್ಟೆಲ್ ಸೌಲಭ್ಯ
Bosch company ಪ್ರಾಯೋಜಿತ ವಿಶೇಷ ತಂತ್ರಜ್ಞಾನ ಆಧಾರಿತ ಪ್ರಯೋಗಾಲಯ
ಭಾರತ ಸರ್ಕಾರದ AICTE ಮತ್ತು ಕರ್ನಾಟಕ ಸರ್ಕಾರದ DTE ನಿಂದ ಮಾನ್ಯತೆ ಪಡೆದ ಸಂಸ್ಥೆ
Putting value into Education ಎಂಬ ವಿಶೇಷ ಧ್ಯೆಯ ವಾಕ್ಯದಡಿ ನಡೆಯುತ್ತಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯಿಂದ ನಡೆಸಲ್ಪಡುತ್ತಿರುವ ಕಾಲೇಜು ಇದಾಗಿದೆ.

Related posts

ವರ್ಲ್ಡ್ ರೈಲ್ವೇಸ್ ವಾಲಿಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಅಶ್ವಲ್ ರೈ ರಿಗೆ ಭಾರತದ ಅತ್ಯುತ್ತಮ ಆಟಗಾರ -2024 ಹಾಗೂ ಉದಯ ಕುಮಾರ್ ರಾಷ್ಟ್ರೀಯ ಪ್ರಶಸ್ತಿ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ವಾಣಿ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿ ಕು. ಮಾನ್ಯ 620 ಅಂಕದೊಂದಿಗೆ ರಾಜ್ಯಮಟ್ಟದಲ್ಲಿ 6ನೇ ರ‍್ಯಾಂಕ್

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಾಸರಹಳ್ಳಿ ಶಾಸಕ ಮುನಿರಾಜು ಕುಟುಂಬ ಸಮೇತ ಭೇಟಿ

Suddi Udaya

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

ಶಿಶಿಲ ಶೌರ್ಯ ವಿಪತ್ತು ತಂಡದ ಕೆಲಸ ಕಾರ್ಯಗಳನ್ನು ಮೆಚ್ಚಿ ಜೀವರಕ್ಷಕ ಪರಿಕರಗಳನ್ನು ಕೊಡುಗೆಯಾಗಿ ನೀಡಿದ ಎಸ್ ಎಂ ಶಿವಪ್ರಕಾಶ್

Suddi Udaya

ಗೇರುಕಟ್ಟೆ : ಕಳಿಯ ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya
error: Content is protected !!