July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆಯ ಬಗ್ಗೆ ಜಾಗೃತಿ ಅಭಿಯಾನ

ಧರ್ಮಸ್ಥಳ : ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಜೂನ್ 26ರಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಯ ಜಂಟಿ ಆಶ್ರಯದಲ್ಲಿ “ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆ ಪರಿಣಾಮದ ಕುರಿತು ಜಾಗೃತಿ ಅಭಿಯಾನ” ಕಾರ್ಯಕ್ರಮ ನಡೆಯಿತು.

ಬೆಳ್ತಂಗಡಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ವಸಂತ ಆಚಾರ್ ಮಾತನಾಡುತ್ತಾ, “ಮಾದಕ ಪದಾರ್ಥಗಳ ಸೇವನೆಯಿಂದ ಮನುಷ್ಯನ ಸ್ವಾಸ್ಥ್ಯ ಕೆಡುವುದಲ್ಲದೆ ಸಾಮಾಜಿಕ ಸ್ವಾಸ್ಥ್ಯವೂ ಕೂಡ ನಾಶವಾಗುವುದು. ವಿದ್ಯಾರ್ಥಿಗಳು ಬಾಲ್ಯದಲ್ಲಿ ಆತ್ಮಸ್ಥೈರ್ಯವನ್ನು ಮೂಡಿಸಿಕೊಳ್ಳುವ ಮೂಲಕ ಯಾವುದೇ ಸಮಸ್ಯೆಗೆ ಎದೆಗುಂದದೆ, ಧನಾತ್ಮಕವಾಗಿ ಚಿಂತಿಸಿ ಗುರು ಹಿರಿಯರಲ್ಲಿ ಪರಿಹಾರವನ್ನು ಕಂಡುಕೊಳ್ಳಬೇಕು” ಎಂದರು.

ಧರ್ಮಸ್ಥಳ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಧರ್ಮಸ್ಥಳ ಠಾಣೆಯ ಸಬ್ ಇನ್ಸ್ಪೆಕ್ಟರ್ ಸಮರ್ಥ್ ರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಧರ್ಮಸ್ಥಳ ಠಾಣೆಯ ಹೆಡ್ ಕಾನ್ಸ್ಟೇಬಲ್ ಪ್ರಶಾಂತ್ ಮತ್ತು ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಪದ್ಮರಾಜ್ ಅಧ್ಯಕ್ಷತೆಯನ್ನು ವಹಿಸಿ, ಸ್ವಾಗತಿಸಿದರು. ಭವ್ಯ ಹೆಗಡೆ ವಂದಿಸಿ, ಶಿಕ್ಷಕ ಯುವರಾಜ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಬಿಸಿಲ ಝಳಕ್ಕೆ ತಂಪೆರೆದ ವರುಣ

Suddi Udaya

ಚಾರ್ಮಾಡಿ : ನಾಗಬ್ರಹ್ಮ, ನಾಗಯಕ್ಷಿಣಿ ಹಾಗೂ ಶಿರಾಡಿ ದೈವ, ರುದ್ರಾಂಡಿ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ: ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಅಳದಂಗಡಿ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya

ಬೆಳ್ತಂಗಡಿಯಲ್ಲಿ 12 ನೇ ವರ್ಷದ ಕೋಟಿ ಚೆನ್ನಯ ಕ್ರೀಡಾಕೂಟ, ಸಮಾಜದ 6 ಜೋಡಿ ಅವಳಿಗಳಿಗೆ ಗೌರವಾರ್ಪಣೆ

Suddi Udaya

ಪುತ್ತೂರು: ಸಹಾಯಕ ಆಯುಕ್ತ ಗಿರೀಶ್ ನಂದನ್ ವರ್ಗಾವಣೆ: ನೂತನ ಆಯುಕ್ತರಾಗಿ ಮಹೇಶ್ ಚಂದ್ರ ನೇಮಕ

Suddi Udaya

ಬೆಳ್ತಂಗಡಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದ ಮಹಾಸಭೆ ಹಾಗೂ ಒಕ್ಕೂಟ ಬಲವರ್ಧನೆ ತರಬೇತಿ

Suddi Udaya
error: Content is protected !!