23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆಯ ಬಗ್ಗೆ ಜಾಗೃತಿ ಅಭಿಯಾನ

ಧರ್ಮಸ್ಥಳ : ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಜೂನ್ 26ರಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಯ ಜಂಟಿ ಆಶ್ರಯದಲ್ಲಿ “ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆ ಪರಿಣಾಮದ ಕುರಿತು ಜಾಗೃತಿ ಅಭಿಯಾನ” ಕಾರ್ಯಕ್ರಮ ನಡೆಯಿತು.

ಬೆಳ್ತಂಗಡಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ವಸಂತ ಆಚಾರ್ ಮಾತನಾಡುತ್ತಾ, “ಮಾದಕ ಪದಾರ್ಥಗಳ ಸೇವನೆಯಿಂದ ಮನುಷ್ಯನ ಸ್ವಾಸ್ಥ್ಯ ಕೆಡುವುದಲ್ಲದೆ ಸಾಮಾಜಿಕ ಸ್ವಾಸ್ಥ್ಯವೂ ಕೂಡ ನಾಶವಾಗುವುದು. ವಿದ್ಯಾರ್ಥಿಗಳು ಬಾಲ್ಯದಲ್ಲಿ ಆತ್ಮಸ್ಥೈರ್ಯವನ್ನು ಮೂಡಿಸಿಕೊಳ್ಳುವ ಮೂಲಕ ಯಾವುದೇ ಸಮಸ್ಯೆಗೆ ಎದೆಗುಂದದೆ, ಧನಾತ್ಮಕವಾಗಿ ಚಿಂತಿಸಿ ಗುರು ಹಿರಿಯರಲ್ಲಿ ಪರಿಹಾರವನ್ನು ಕಂಡುಕೊಳ್ಳಬೇಕು” ಎಂದರು.

ಧರ್ಮಸ್ಥಳ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಧರ್ಮಸ್ಥಳ ಠಾಣೆಯ ಸಬ್ ಇನ್ಸ್ಪೆಕ್ಟರ್ ಸಮರ್ಥ್ ರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಧರ್ಮಸ್ಥಳ ಠಾಣೆಯ ಹೆಡ್ ಕಾನ್ಸ್ಟೇಬಲ್ ಪ್ರಶಾಂತ್ ಮತ್ತು ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಪದ್ಮರಾಜ್ ಅಧ್ಯಕ್ಷತೆಯನ್ನು ವಹಿಸಿ, ಸ್ವಾಗತಿಸಿದರು. ಭವ್ಯ ಹೆಗಡೆ ವಂದಿಸಿ, ಶಿಕ್ಷಕ ಯುವರಾಜ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಡೆನ್ನಾನ ಡೆನ್ನನ – 2023 ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ: ಯುವವಾಹಿನಿ ಬೆಳ್ತಂಗಡಿ ಘಟಕ ಚಾಂಪಿಯನ್

Suddi Udaya

ಉಜಿರೆ ಶ್ರೀಶಾರದಾ ಪೂಜೋತ್ಸವ :ಕೃತಜ್ಞತಾ ಸಭೆ

Suddi Udaya

ಎಸ್.ಡಿ.ಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿಯಾಗಿ ಅಶ್ಫಾಕ್ ಪುಂಜಾಲಕಟ್ಟೆ ಆಯ್ಕೆ

Suddi Udaya

ಕೊಕ್ಕಡ ಶ್ರೀ ಕ್ಷೇತ್ರ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya
error: Content is protected !!