ಶಿಬಾಜೆ ಬರ್ಗುಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು: ರೂ.25 ಲಕ್ಷ ಪರಿಹಾರ ನೀಡುವಂತೆ ಮೆಸ್ಕಾಂ ಇಲಾಖೆಗೆ ಶಾಸಕ ಹರೀಶ್ ಪೂಂಜಾ ಆಗ್ರಹ

Suddi Udaya

ಬೆಳ್ತಂಗಡಿ: ಶಿಬಾಜೆಯ ಬರ್ಗುಲಾದಲ್ಲಿ ಜೂನ್ 27ರಂದು ಸಂಜೆ ವಿದ್ಯುತ್ ಸ್ಪರ್ಶಿಸಿ ಯುವತಿ ಮೃತಪಟ್ಟ ಘಟನೆಗೆ ತಕ್ಷಣ ಸ್ಪಂದಿಸಿದ ಶಾಸಕ ಹರೀಶ್ ಪೂಂಜ ಸ್ಥಳಕ್ಕೆ ತಕ್ಷಣ ಭೇಟಿ ನೀಡಿ ಪರಿಶೀಲಿಸುವಂತೆ ಮೆಸ್ಕಾಂ ಇಲಾಖೆಗೆ ಸೂಚಿಸಿ ಗರಿಷ್ಠ ಮೊತ್ತ ರೂ.25 ಲಕ್ಷ ಪರಿಹಾರ ನೀಡುವಂತೆ ಸರಕಾರಕ್ಕೆ ಆಗ್ರಹಿಸಿದರು.

ಇಲಾಖೆ ಕೂಡಲೇ 5 ಲಕ್ಷ ಪರಿಹಾರ ಘೋಷಿಸಿದ್ದು ಹೆಚ್ಚಿನ ಪರಿಹಾರಕ್ಕೆ ಸರಕಾರಕ್ಕೆ ಶಿಫಾರಸು ಮಾಡುವುದಾಗಿ ಸಂಬಂಧಪಟ್ಟ ಅಧಿಕಾರಿಗಳು ಭರವಸೆ ನೀಡಿದರು. ಮಳೆಗಾಲದ ಸಂದರ್ಭದಲ್ಲಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಮೆಸ್ಕಾಂ ಗೆ ಶಾಸಕರು ಸೂಚಿಸಿದರು.

Leave a Comment

error: Content is protected !!