July 23, 2026
ಆರೋಗ್ಯಶಾಲಾ ಕಾಲೇಜು

ಕುವೆಟ್ಟು ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ

ಕುವೆಟ್ಟು: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕುವೆಟ್ಟು ಜೂ 21 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ಗುರುವಾಯನಕೆರೆ ಇದರ ವತಿಯಿಂದ ಪರಿಸರ ಜಾಗೃತಿ ಹಾಗೂ ಮಾಹಿತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಕುವೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಭಾರತಿ ಎಸ್ ಶೆಟ್ಟಿ ಉದ್ಘಾಟಿಸಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುರುವಾಯನಕೆರೆ ವಲಯದ ಮೇಲ್ವಿಚಾರಕ ಯಶೋಧರವರು ಮಕ್ಕಳಲ್ಲಿ ಪರಿಸರ ಸ್ವಚ್ಛತೆ, ಮಹತ್ವ, ರಕ್ಷಣೆಯ ಬಗ್ಗೆ ಮಾಹಿತಿ ನೀಡಿ ಪರಿಸರ ಜಾಗೃತಿಯನ್ನು ಮೂಡಿಸಿದರು. ಕಾರ್ಯಕ್ರಮದಲ್ಲಿ ಕುವೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ಶಾಲಿನಿ ಪಯ್ಯೊಟ್ಟು, ಆಮಿನ ಮದ್ದಡ್ಕ , ಸೇವಾ ನಿರತರಾದ ಆನಂದ ಪೂಜಾರಿ, ಶಾಲಾ ಎಸ್ ಡಿ ಯಂ ಸಿ ಅಧ್ಯಕ್ಷ ಸಿರಾಜ್ ಚಿಲಿಂಬಿ, ಜಾಗೂ ಸದಸ್ಯರು, ಆಶಾ ಕಾರ್ಯಕರ್ತೆ ಜಯಂತಿ, ಶಾಲೆಯ ಮುಖ್ಯ ಶಿಕ್ಷಕ ಭಾಸ್ಕರ, ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಟ್ರಸ್ಟ್ ವತಿಯಿಂದ ನಡೆಸಲಾದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನವನ್ನು ನೀಡಲಾಯಿತು ಬಳಿಕ ಟ್ರಸ್ಟ್ ನಿಂದ ನೀಡಲಾದ ಹಲವು ಗಿಡಗಳನ್ನು ಶಾಲಾ ಆವರಣದಲ್ಲಿ ನೆಡಲಾಯಿತು. ಮುಖ್ಯ ಶಿಕ್ಷಕರಾದ ಭಾಸ್ಕರ ಸ್ವಾಗತಿಸಿ. ಸುರೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related posts

ಜ.4: ವಿದ್ವತ್ ಪಿ ಯು. ಕಾಲೇಜು ಗುರುವಾಯನಕೆರೆಯಲ್ಲಿ ತಾಲೂಕು ಮಟ್ಟದ ಪುರುಷರ ಹಾಗೂ ಆಹ್ವಾನಿತ ಮಹಿಳೆಯರ ವಾಲಿಬಾಲ್ ಪಂದ್ಯಾಟ.

Suddi Udaya

ಪಿಲಾತಬೆಟ್ಟು ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ತ್ರೋಬಾಲ್ ಪಂದ್ಯಾಟ: ಸಂತ ತೆರೇಸಾ ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಹೆತ್ತವರಿಗೆ ಮಾಹಿತಿ ಕಾರ್ಯಾಗಾರ

Suddi Udaya

ಎಕ್ಸಲೆಂಟ್ ಮೂಡುಬಿದಿರೆ: ಜೆಇಇ ಅಡ್ವಾನ್ಸ್ಡ್ ರಾಷ್ಟ್ರಮಟ್ಟದ ಸಾಧನೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಅಭಿವಂದನಾ ಕಾರ್ಯಕ್ರಮ: ಚಲನಚಿತ್ರ ನಟ ವಿಜಯ ರಾಘವೇಂದ್ರ ಭಾಗಿ

Suddi Udaya
error: Content is protected !!