24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ನಾವೂರು ಕೈಕಂಬ ಪ್ರದೇಶದ ಲಾಯಿಲ- ಕಿಲ್ಲೂರು ಪಿಡ್ಲೂಡಿ ರಸ್ತೆ ಬದಿಯ ಚರಂಡಿಯಲ್ಲಿ ತುಂಬಿದ ಹೂಳು:ಚರಂಡಿ ಹೂಳು ತೆಗೆದ ಯುವ ಉದ್ಯಮಿ ಅನಿಲ್ ಎಂ.ಜೆ ನರ್ನೊಟ್ಟು : ಸಾರ್ವಜನಿಕರ ಪ್ರಶಂಸೆ

ನಾವೂರು ಗ್ರಾಮದ ಕೈಕಂಬ ಪ್ರದೇಶದ ಲಾಯಿಲ- ಕಿಲ್ಲೂರು ಪಿಡ್ಲೂಡಿ ರಸ್ತೆ ಬದಿಯ ಚರಂಡಿಯಲ್ಲಿ ಹೂಳು ತುಂಬಿ ಮಳೆ ನೀರು ರಸ್ತೆಯಲ್ಲಿ ಹರಿದಾಡುತ್ತಿರುವುದನ್ನು ಗಮನಿಸಿದ ಯುವ ಉದ್ಯಮಿ ಅನಿಲ್ ಎಂ.ಜೆ ನರ್ನೊಟ್ಟು ತನ್ನ ಸ್ವಂತ ಜೆಸಿಬಿ ಮೂಲಕ ಚರಂಡಿ ಹೂಳು ತೆಗೆದು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ನಾವೂರು ಗ್ರಾಮದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು , ಮಳೆಯ ನೀರು ಚರಂಡಿಯಲ್ಲಿ ಹರಿಯುವ ಬದಲಿಗೆ ರಸ್ತೆಯಲ್ಲಿ ಹರಿಯುತ್ತಿತ್ತು. ಮಳೆಗಾಲ ಆರಂಭಕ್ಕೆ ಮುನ್ನ ಚರಂಡಿಯ ಹೂಳು ಎತ್ತಿ ಮಳೆಯ ನೀರು ಸುಗಮವಾಗಿ ಸಾಗಲು ಅವಕಾಶ ಮಾಡಿಕೊಡಬೇಕಾದ

ನಾವೂರು ಗ್ರಾಮ ಪಂಚಾಯತ್ ಮತ್ತು ಪಿಡ್ಲೂಡಿ ಇಲಾಖೆ ಕಣ್ಣಿದ್ದು ಕುರುಡರಂತೆ ವರ್ತಿಸಿತ್ತು. ಇದರಿಂದ ಬೆಸೆತ್ತ ನಾವೂರು ಗ್ರಾಮದ ಯುವ ಉದ್ಯಮಿ ಅನಿಲ್ ಎಂ.ಜೆ ರವರು ತನ್ನ ಸ್ವಂತ ಜೆಸಿಬಿ ಮೂಲಕ ಚರಂಡಿಯ ಹೂಳು ಎತ್ತಿ ನೀರು ಸರಾಗವಾಗಿ ಹರಿಯುವಂತೆ ಮಾಡಿದರು. ಅವರಿಗೆ ಸ್ಥಳೀಯ ಉದ್ಯಮಿಗಳು ಹಾಗೂ ರಿಕ್ಷಾ ಚಾಲಕ , ಮಾಲೀಕರು ಸಾಥ್ ನೀಡಿದರು.

ಉದ್ಯಮಿ ಅನಿಲ್ ಎಂ.ಜೆ ಅವರಿಗೆ ಕೈಕಂಬ ಜನರಲ್ ಸ್ಟೋರ್ ನ ಕೃಷ್ಣಪ್ಪ ಗೌಡ ದಡ್ಡು , ಕೋಟ್ಯಾನ್ ಚಿಕನ್ ಸೆಂಟರ್ ನ ಪ್ರವೀಣ್ ಕೋಟ್ಯಾನ್ , ರಿಕ್ಷಾ ಚಾಲಕ , ಮಾಲೀಕರಾದ ಓಬಯ್ಯ ಗೌಡ ಕುಂಡಡ್ಕ , ದಿನೇಶ್ ಗೌಡ ಕುಪ್ಲೋಟ್ಟು , ನವೀನ್ ಪೂಜಾರಿ ಮಲ್ಲಡ್ಕ , ಸಂತೋಷ್ ಕುಲಾಲ್ ಕಾರಿಂಜ , ಮೋಹನ್ ಕೊರಂಡ , ವಿಶ್ವನಾಥ ಉಲ್ಲಂಜ , ಸ್ಥಳೀಯರಾದ ಸುರೇಂದ್ರ ಪೂಜಾರಿ ಕೈಕಂಬ ಸಹಕಾರ ನೀಡಿದರು. ಉದ್ಯಮಿ ಅನಿಲ್ ಎಂ.ಜೆ ಹಾಗೂ ಸ್ಥಳೀಯರ ಕಾರ್ಯ ನಾವೂರು ಗ್ರಾಮ ಪಂಚಾಯತ್ ಹಾಗೂ ಪಿಡ್ಲೂಡಿ ಇಲಾಖೆಗೆ ಮುಜುಗರ ಪಡುವಂತೆ ಆಗಿದೆ.

Related posts

ಉಜಿರೆ ಶಾರದಾ ಮಂಟಪದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಕಡಮ್ಮಾಜೆ ಫಾರ್ಮ್ಸ್ ನ ದೇವಿಪ್ರಸಾದ್ ಕೆ. ಗೌಡರಿಗೆ ಕನ್ನಡಿಗ-2026 ಪ್ರಶಸ್ತಿ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತರಿಗೆ ಸಬ್ಸಿಡಿ ದರದಲ್ಲಿ ಮೈಲುತುತ್ತು ವಿತರಣೆ – ಸಬ್ಸಿಡಿ ಬೆಲೆ ಪ್ರತಿ ಕಿಲೋ ರೂ. 280 ಆಗಿದ್ದು,ರೈತರ ಇದರ ಪ್ರಯೋಜನ ಪಡೆಯಿರಿ: ಅಧ್ಯಕ್ಷ ರಾಕೇಶ್ ಹೆಗ್ಡೆ – ರೈತರಿಗೆ ರಸಗೊಬ್ಬರ ಹಾಗೂ ಕೀಟನಾಶಕಗಳ ಖರೀದಿಗೆ ರೂ.20 ಸಾವಿರದಂತೆ ಸಾಲ ಯೋಜನೆ

Suddi Udaya

ನಾವರ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕುಲಾಲ್, ಕಾರ್ಯದರ್ಶಿಯಾಗಿ ರತ್ನಾಕರ ಹೆಚ್ ಆಯ್ಕೆ

Suddi Udaya

ಪಿಂಚಣಿ ಮಸೂದೆಯನ್ನು ತಿದ್ದುಪಡಿ ಮಾಡುವಂತೆ ರಾಜ್ಯ ಸರಕಾರಿ ನಿವೃತ ನೌಕರರ ಸಂಘದಿಂದ ಉಪತಹಶೀಲ್ದಾರ್ ರವರ ಮೂಲಕ ಮನವಿ

Suddi Udaya

ಸೆ.26: ಕೊಲ್ಲಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯಿಂದ ಭಕ್ತರ ಸಭೆ

Suddi Udaya
error: Content is protected !!