September 6, 2026
ಗ್ರಾಮಾಂತರ ಸುದ್ದಿ

ನಾವೂರು ಕೈಕಂಬ ಪ್ರದೇಶದ ಲಾಯಿಲ- ಕಿಲ್ಲೂರು ಪಿಡ್ಲೂಡಿ ರಸ್ತೆ ಬದಿಯ ಚರಂಡಿಯಲ್ಲಿ ತುಂಬಿದ ಹೂಳು:ಚರಂಡಿ ಹೂಳು ತೆಗೆದ ಯುವ ಉದ್ಯಮಿ ಅನಿಲ್ ಎಂ.ಜೆ ನರ್ನೊಟ್ಟು : ಸಾರ್ವಜನಿಕರ ಪ್ರಶಂಸೆ

ನಾವೂರು ಗ್ರಾಮದ ಕೈಕಂಬ ಪ್ರದೇಶದ ಲಾಯಿಲ- ಕಿಲ್ಲೂರು ಪಿಡ್ಲೂಡಿ ರಸ್ತೆ ಬದಿಯ ಚರಂಡಿಯಲ್ಲಿ ಹೂಳು ತುಂಬಿ ಮಳೆ ನೀರು ರಸ್ತೆಯಲ್ಲಿ ಹರಿದಾಡುತ್ತಿರುವುದನ್ನು ಗಮನಿಸಿದ ಯುವ ಉದ್ಯಮಿ ಅನಿಲ್ ಎಂ.ಜೆ ನರ್ನೊಟ್ಟು ತನ್ನ ಸ್ವಂತ ಜೆಸಿಬಿ ಮೂಲಕ ಚರಂಡಿ ಹೂಳು ತೆಗೆದು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ನಾವೂರು ಗ್ರಾಮದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು , ಮಳೆಯ ನೀರು ಚರಂಡಿಯಲ್ಲಿ ಹರಿಯುವ ಬದಲಿಗೆ ರಸ್ತೆಯಲ್ಲಿ ಹರಿಯುತ್ತಿತ್ತು. ಮಳೆಗಾಲ ಆರಂಭಕ್ಕೆ ಮುನ್ನ ಚರಂಡಿಯ ಹೂಳು ಎತ್ತಿ ಮಳೆಯ ನೀರು ಸುಗಮವಾಗಿ ಸಾಗಲು ಅವಕಾಶ ಮಾಡಿಕೊಡಬೇಕಾದ

ನಾವೂರು ಗ್ರಾಮ ಪಂಚಾಯತ್ ಮತ್ತು ಪಿಡ್ಲೂಡಿ ಇಲಾಖೆ ಕಣ್ಣಿದ್ದು ಕುರುಡರಂತೆ ವರ್ತಿಸಿತ್ತು. ಇದರಿಂದ ಬೆಸೆತ್ತ ನಾವೂರು ಗ್ರಾಮದ ಯುವ ಉದ್ಯಮಿ ಅನಿಲ್ ಎಂ.ಜೆ ರವರು ತನ್ನ ಸ್ವಂತ ಜೆಸಿಬಿ ಮೂಲಕ ಚರಂಡಿಯ ಹೂಳು ಎತ್ತಿ ನೀರು ಸರಾಗವಾಗಿ ಹರಿಯುವಂತೆ ಮಾಡಿದರು. ಅವರಿಗೆ ಸ್ಥಳೀಯ ಉದ್ಯಮಿಗಳು ಹಾಗೂ ರಿಕ್ಷಾ ಚಾಲಕ , ಮಾಲೀಕರು ಸಾಥ್ ನೀಡಿದರು.

ಉದ್ಯಮಿ ಅನಿಲ್ ಎಂ.ಜೆ ಅವರಿಗೆ ಕೈಕಂಬ ಜನರಲ್ ಸ್ಟೋರ್ ನ ಕೃಷ್ಣಪ್ಪ ಗೌಡ ದಡ್ಡು , ಕೋಟ್ಯಾನ್ ಚಿಕನ್ ಸೆಂಟರ್ ನ ಪ್ರವೀಣ್ ಕೋಟ್ಯಾನ್ , ರಿಕ್ಷಾ ಚಾಲಕ , ಮಾಲೀಕರಾದ ಓಬಯ್ಯ ಗೌಡ ಕುಂಡಡ್ಕ , ದಿನೇಶ್ ಗೌಡ ಕುಪ್ಲೋಟ್ಟು , ನವೀನ್ ಪೂಜಾರಿ ಮಲ್ಲಡ್ಕ , ಸಂತೋಷ್ ಕುಲಾಲ್ ಕಾರಿಂಜ , ಮೋಹನ್ ಕೊರಂಡ , ವಿಶ್ವನಾಥ ಉಲ್ಲಂಜ , ಸ್ಥಳೀಯರಾದ ಸುರೇಂದ್ರ ಪೂಜಾರಿ ಕೈಕಂಬ ಸಹಕಾರ ನೀಡಿದರು. ಉದ್ಯಮಿ ಅನಿಲ್ ಎಂ.ಜೆ ಹಾಗೂ ಸ್ಥಳೀಯರ ಕಾರ್ಯ ನಾವೂರು ಗ್ರಾಮ ಪಂಚಾಯತ್ ಹಾಗೂ ಪಿಡ್ಲೂಡಿ ಇಲಾಖೆಗೆ ಮುಜುಗರ ಪಡುವಂತೆ ಆಗಿದೆ.

Related posts

ಬಂಟ್ವಾಳ ವಲಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕಚೇರಿ ಮಚ್ಚಿನದಲ್ಲಿ ಉದ್ಘಾಟನೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವದ ಬೆಳ್ಳಿಹಬ್ಬ ಮಹೋತ್ಸವ:ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಶಾಲಾ ಸುರಕ್ಷತೆ ಮತ್ತು ವಿಪತ್ತು ನಿರ್ವಹಣೆ ಅರಿವು ತರಬೇತಿ ಕಾರ್ಯಕ್ರಮ

Suddi Udaya

ಮೂಡಾದ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ತನಿಖೆ ಎದುರಿಸಬೇಕಾಗಿ ಬಂದಿರುವುದರಿಂದ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲು ಸಿದ್ಧರಾಮಯ್ಯ ರಿಗೆ ಯಾವುದೇ ನೈತಿಕತೆ ಇಲ್ಲ: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ಸ್ಪೋಟಕ ವಸ್ತು ಸ್ಪೋಟಗೊಂಡು ಬಾಲಕ ಗಾಯಗೊಂಡ ಪ್ರಕರಣ : ಆಸ್ಪತ್ರೆಗೆ ಭೇಟಿ ನೀಡಿದ ರಕ್ಷಿತ್ ಶಿವರಾಂ

Suddi Udaya
error: Content is protected !!