July 23, 2026
ಗ್ರಾಮಾಂತರ ಸುದ್ದಿ

ನಾವೂರು ಕೈಕಂಬ ಪ್ರದೇಶದ ಲಾಯಿಲ- ಕಿಲ್ಲೂರು ಪಿಡ್ಲೂಡಿ ರಸ್ತೆ ಬದಿಯ ಚರಂಡಿಯಲ್ಲಿ ತುಂಬಿದ ಹೂಳು:ಚರಂಡಿ ಹೂಳು ತೆಗೆದ ಯುವ ಉದ್ಯಮಿ ಅನಿಲ್ ಎಂ.ಜೆ ನರ್ನೊಟ್ಟು : ಸಾರ್ವಜನಿಕರ ಪ್ರಶಂಸೆ

ನಾವೂರು ಗ್ರಾಮದ ಕೈಕಂಬ ಪ್ರದೇಶದ ಲಾಯಿಲ- ಕಿಲ್ಲೂರು ಪಿಡ್ಲೂಡಿ ರಸ್ತೆ ಬದಿಯ ಚರಂಡಿಯಲ್ಲಿ ಹೂಳು ತುಂಬಿ ಮಳೆ ನೀರು ರಸ್ತೆಯಲ್ಲಿ ಹರಿದಾಡುತ್ತಿರುವುದನ್ನು ಗಮನಿಸಿದ ಯುವ ಉದ್ಯಮಿ ಅನಿಲ್ ಎಂ.ಜೆ ನರ್ನೊಟ್ಟು ತನ್ನ ಸ್ವಂತ ಜೆಸಿಬಿ ಮೂಲಕ ಚರಂಡಿ ಹೂಳು ತೆಗೆದು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ನಾವೂರು ಗ್ರಾಮದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು , ಮಳೆಯ ನೀರು ಚರಂಡಿಯಲ್ಲಿ ಹರಿಯುವ ಬದಲಿಗೆ ರಸ್ತೆಯಲ್ಲಿ ಹರಿಯುತ್ತಿತ್ತು. ಮಳೆಗಾಲ ಆರಂಭಕ್ಕೆ ಮುನ್ನ ಚರಂಡಿಯ ಹೂಳು ಎತ್ತಿ ಮಳೆಯ ನೀರು ಸುಗಮವಾಗಿ ಸಾಗಲು ಅವಕಾಶ ಮಾಡಿಕೊಡಬೇಕಾದ

ನಾವೂರು ಗ್ರಾಮ ಪಂಚಾಯತ್ ಮತ್ತು ಪಿಡ್ಲೂಡಿ ಇಲಾಖೆ ಕಣ್ಣಿದ್ದು ಕುರುಡರಂತೆ ವರ್ತಿಸಿತ್ತು. ಇದರಿಂದ ಬೆಸೆತ್ತ ನಾವೂರು ಗ್ರಾಮದ ಯುವ ಉದ್ಯಮಿ ಅನಿಲ್ ಎಂ.ಜೆ ರವರು ತನ್ನ ಸ್ವಂತ ಜೆಸಿಬಿ ಮೂಲಕ ಚರಂಡಿಯ ಹೂಳು ಎತ್ತಿ ನೀರು ಸರಾಗವಾಗಿ ಹರಿಯುವಂತೆ ಮಾಡಿದರು. ಅವರಿಗೆ ಸ್ಥಳೀಯ ಉದ್ಯಮಿಗಳು ಹಾಗೂ ರಿಕ್ಷಾ ಚಾಲಕ , ಮಾಲೀಕರು ಸಾಥ್ ನೀಡಿದರು.

ಉದ್ಯಮಿ ಅನಿಲ್ ಎಂ.ಜೆ ಅವರಿಗೆ ಕೈಕಂಬ ಜನರಲ್ ಸ್ಟೋರ್ ನ ಕೃಷ್ಣಪ್ಪ ಗೌಡ ದಡ್ಡು , ಕೋಟ್ಯಾನ್ ಚಿಕನ್ ಸೆಂಟರ್ ನ ಪ್ರವೀಣ್ ಕೋಟ್ಯಾನ್ , ರಿಕ್ಷಾ ಚಾಲಕ , ಮಾಲೀಕರಾದ ಓಬಯ್ಯ ಗೌಡ ಕುಂಡಡ್ಕ , ದಿನೇಶ್ ಗೌಡ ಕುಪ್ಲೋಟ್ಟು , ನವೀನ್ ಪೂಜಾರಿ ಮಲ್ಲಡ್ಕ , ಸಂತೋಷ್ ಕುಲಾಲ್ ಕಾರಿಂಜ , ಮೋಹನ್ ಕೊರಂಡ , ವಿಶ್ವನಾಥ ಉಲ್ಲಂಜ , ಸ್ಥಳೀಯರಾದ ಸುರೇಂದ್ರ ಪೂಜಾರಿ ಕೈಕಂಬ ಸಹಕಾರ ನೀಡಿದರು. ಉದ್ಯಮಿ ಅನಿಲ್ ಎಂ.ಜೆ ಹಾಗೂ ಸ್ಥಳೀಯರ ಕಾರ್ಯ ನಾವೂರು ಗ್ರಾಮ ಪಂಚಾಯತ್ ಹಾಗೂ ಪಿಡ್ಲೂಡಿ ಇಲಾಖೆಗೆ ಮುಜುಗರ ಪಡುವಂತೆ ಆಗಿದೆ.

Related posts

ಕುಕ್ಕಾಜೆ ದಿ. ಕುಶಾಲಪ್ಪ ನಾಯ್ಕರ ಮನೆಯವರಿಗೆ ಧನಸಹಾಯ ಹಸ್ತಾಂತರ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಜು.19: ಡಾಕ್ಯುಮೆಂಟರಿ ಪ್ರದರ್ಶನ ಮತ್ತು ಕುದ್ಕ ಬಚ್ಚಿರೆ ಪುಸ್ತಕ ಬಿಡುಗಡೆ

Suddi Udaya

ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಶಾಸಕ ಹರೀಶ್ ಪೂಂಜರವರ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ

Suddi Udaya

572 ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ: ವಿದ್ಯಾಮಾತಾ ಅಕಾಡೆಮಿಯಿಂದ ತರಬೇತಿ ಪ್ರಾರಂಭ: ಪಿಯುಸಿ ಮುಗಿಸಿರುವಂತಹ ಅಭ್ಯರ್ಥಿಗಳಿಗೆ ಅತ್ಯುತ್ತಮ ಅವಕಾಶ

Suddi Udaya

ಕೊಕ್ಕಡ: ಯುವಕ ಸಂಶಯಾಸ್ಪದ ಸಾವು: ಪೊಲೀಸರ ತನಿಖೆ

Suddi Udaya
error: Content is protected !!