ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಿಂಜೆ : ಭಗವಾನ್ ಪುಷ್ಪದಂತ ಸ್ವಾಮಿ ಬಸದಿಯಲ್ಲಿ ಮಂಗಲಪ್ರವಚನ

ಪೆರಿಂಜೆ : ಜಪ, ತಪ, ಧ್ಯಾನ, ವೃತ-ನಿಯಮಗಳ ಪಾಲನೆ ಮೊದಲಾದ ಸತ್ಕರ್ಮಗಳಿಂದ ಆತ್ಮನಿಗಂಟಿದ ಸಕಲ ಪಾಪಕರ್ಮಗಳ ಕೊಳೆಯನ್ನು ಕಳೆದಾಗ ಆತ್ಮನೇ ಪರಮಾತ್ಮನಾಗುತ್ತಾನೆ. ಮೋಕ್ಷಪ್ರಾಪ್ತಿಯೇ ಜೀವನದ ಪರಮ ಗುರಿಯಾಗಬೇಕು ಎಂದು ಮೂಡಬಿದ್ರೆ ಜೈನಮಠದ ಪೂಜ್ಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು.


ಅವರು ಜೂ27 ರಂದು ಬೆಳ್ತಂಗಡಿ ತಾಲ್ಲೂಕಿನ ಪೆರಿಂಜೆ ಗ್ರಾಮದಲ್ಲಿ ಭಗವಾನ್ ಪುಷ್ಪದಂತ ಸ್ವಾಮಿ ಬಸದಿಯಲ್ಲಿ ಮಂಗಲಪ್ರವಚನ ನೀಡಿದರು.
ಪರಿಶುದ್ಧ ಮನಸ್ಸಿನಿಂದ ಪಂಚೇಂದ್ರಿಯಗಳ ನಿಯಂತ್ರಣದೊಂದಿಗೆ ಸದಾ ದೇವರಧ್ಯಾನ ಮಾಡಬೇಕು. ಆಗ ಹುಟ್ಟು-ಸಾವಿನ ಮಧ್ಯದ ಜೀವನ ಮಂಗಳಕರವಾಗಿರುತ್ತದೆ. ಹೆಚ್ಚು ಚಿಂತೆ ಮಾಡಿದರೆ ಬೇಗನೆ ಚಿತೆಗೆ ಹೋಗಬೇಕಾಗುತ್ತದೆ. ಸದಾ ದೇವರ ಧ್ಯಾನದಲ್ಲಿ ಮನಸ್ಸು ಪವಿತ್ರವಾಗುತ್ತದೆ.


ಇತ್ತೀಚೆಗೆ ನಿಧನರಾದ ಪೆರಿಂಜೆ ಮಾಗಣೆ ಗುತ್ತು ಕರಿಮಣೇಲು ಕೆ. ವಿನಯಕುಮಾರ್ ಸೇಮಿತರು, ಉತ್ತಮ ಶ್ರಾವಕರಾಗಿದ್ದು, ಸಮಾಜಸೇವೆಯಲ್ಲಿ ಪರಿಣತರಾಗಿದ್ದು, ಆದರ್ಶ ಕೌಟುಂಬಿಕ ಜೀವನ ನಡೆಸಿದ್ದರು. ಇತ್ತೀಚೆಗೆ ವೇಣೂರಿನಲ್ಲಿ ನಡೆದ ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಸಂದರ್ಭದಲ್ಲಿ ಮಾಧ್ಯಮಕೇಂದ್ರದ ಸಂಚಾಲಕರಾಗಿ ಅವರು ಮಾಡಿದ ಸೇವೆಯನ್ನು ಸ್ವಾಮೀಜಿ ಸ್ಮರಿಸಿದರು.


ಅವರ ಆತ್ಮನಿಗೆ ಚಿರಶಾಂತಿ ಕೋರಿ 9 ಬಾರಿ ಸಾಮೂಹಿಕ ಪಂಚನಮಸ್ಕಾರ ಮಂತ್ರ ಪಠಣ ಮಾಡಲಾಯಿತು.
ಭಗವಾನ್ ಪುಷ್ಪದಂತ ಸ್ವಾಮಿಗೆ 216 ಕಲಶ ಅಭಿಷೇಕ, ಭಗವಾನ್ ಆದಿನಾಥ ಸ್ವಾಮಿಗೆ ಪಂಚಾಮೃತ ಅಭಿಷೇಕ, ಬ್ರಹ್ಮಯಕ್ಷ ದೇವರಿಗೆ ಮತ್ತು ಪದ್ಮಾವತಿ ಅಮ್ಮನವರಿಗೆ ವಿಶೇಷ ಅಲಂಕಾರ ಪೂಜೆ ನಡೆಸಲಾಯಿತು.


ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಎಸ್.ಡಿ. ಸಂಪತ್ ಸಾಮ್ರಾಜ್ಯ ಶಿರ್ತಾಡಿ, ಪಿ. ಜಯರಾಜ ಕಂಬಳಿ, ಪೆರಿಂಜೆಗುತ್ತು ಹಾಗೂ ಊರ-ಪರವೂರ ಶ್ರಾವಕರು, ಶ್ರಾವಕಿಯರು ಉಪಸ್ಥಿತರಿದ್ದರು.

Related posts

ಮಲವಂತಿಗೆ: ಉಮೇಶ್ ರವರಿಗೆ ಹಲ್ಲೆ, ಬೆದರಿಕೆ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮೆಥಮೆಟಿಕ್ಸ್ ಒಲೆಂಪಿಯಾಡ್; ರಿಷಿಕಾ ಎಂ ಉಜಿರೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ವಲಯ ಮಟ್ಟದ ಗೀತ ಗಾಯನ ಸ್ಪರ್ಧೆ :ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಲಯನ್ಸ್ ಕ್ಲಬ್ ವತಿಯಿಂದ ಸುಲ್ಕೇರಿ ಕೋಲ್ಯಾಯದಲ್ಲಿ ನದಿಯ ಅಣೆಕಟ್ಟಿಗೆ ಸಿಲುಕಿಕೊಂಡಿದ್ದ ಮರದ ದಿಮ್ಮಿ, ಕಸಕಡ್ಡಿಗಳ ತೆರವು ಕಾರ್ಯ

Suddi Udaya

ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ನಾಮನಿರ್ದೇಶಿತ ಸದಸ್ಯರಾಗಿ ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ ಗೌಡ ಆಯ್ಕೆ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘದ ಮಹಾಸಭೆ: ರೂ.276ಕೋಟಿ ವ್ಯವಹಾರ, ರೂ.1.15ಕೋಟಿ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಡ್

Suddi Udaya
error: Content is protected !!