23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆರೋಗ್ಯಶಾಲಾ ಕಾಲೇಜು

ಕುವೆಟ್ಟು ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ

ಕುವೆಟ್ಟು: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕುವೆಟ್ಟು ಜೂ 21 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ಗುರುವಾಯನಕೆರೆ ಇದರ ವತಿಯಿಂದ ಪರಿಸರ ಜಾಗೃತಿ ಹಾಗೂ ಮಾಹಿತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಕುವೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಭಾರತಿ ಎಸ್ ಶೆಟ್ಟಿ ಉದ್ಘಾಟಿಸಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುರುವಾಯನಕೆರೆ ವಲಯದ ಮೇಲ್ವಿಚಾರಕ ಯಶೋಧರವರು ಮಕ್ಕಳಲ್ಲಿ ಪರಿಸರ ಸ್ವಚ್ಛತೆ, ಮಹತ್ವ, ರಕ್ಷಣೆಯ ಬಗ್ಗೆ ಮಾಹಿತಿ ನೀಡಿ ಪರಿಸರ ಜಾಗೃತಿಯನ್ನು ಮೂಡಿಸಿದರು. ಕಾರ್ಯಕ್ರಮದಲ್ಲಿ ಕುವೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ಶಾಲಿನಿ ಪಯ್ಯೊಟ್ಟು, ಆಮಿನ ಮದ್ದಡ್ಕ , ಸೇವಾ ನಿರತರಾದ ಆನಂದ ಪೂಜಾರಿ, ಶಾಲಾ ಎಸ್ ಡಿ ಯಂ ಸಿ ಅಧ್ಯಕ್ಷ ಸಿರಾಜ್ ಚಿಲಿಂಬಿ, ಜಾಗೂ ಸದಸ್ಯರು, ಆಶಾ ಕಾರ್ಯಕರ್ತೆ ಜಯಂತಿ, ಶಾಲೆಯ ಮುಖ್ಯ ಶಿಕ್ಷಕ ಭಾಸ್ಕರ, ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಟ್ರಸ್ಟ್ ವತಿಯಿಂದ ನಡೆಸಲಾದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನವನ್ನು ನೀಡಲಾಯಿತು ಬಳಿಕ ಟ್ರಸ್ಟ್ ನಿಂದ ನೀಡಲಾದ ಹಲವು ಗಿಡಗಳನ್ನು ಶಾಲಾ ಆವರಣದಲ್ಲಿ ನೆಡಲಾಯಿತು. ಮುಖ್ಯ ಶಿಕ್ಷಕರಾದ ಭಾಸ್ಕರ ಸ್ವಾಗತಿಸಿ. ಸುರೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related posts

ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಏಕತಾ ದಿನಾಚರಣೆ

Suddi Udaya

ಶ್ರೀ ಮಾತಾ ನಾಲ್ಕೂರು ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ನಡ ಸ. ಪ.ಪೂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಪಡೆಯಲು ಮಂಗಳೂರಿನಲ್ಲಿರುವ ಎಂಐಯು ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ರೋಗಿಗಳಿಗೆ ನೇರವಾಗಿ ದಾಖಲಾತಿಗೆ ಅವಕಾಶ ಮಾಡಿಕೊಡಬೇಕು ಸದನದಲ್ಲಿ :ಶಾಸಕಹರೀಶ್ ಪೂಂಜಾ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ವತಿಯಿಂದ ನೀಟ್ ಸಾಧಕ ಆದಿತ್ ಜೈನ್ ಗೆ ಸನ್ಮಾನ

Suddi Udaya

ತೆಕ್ಕಾರು: ಕುಟ್ಟಿಗಳ ಬಜಾರ್ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!