April 2, 2025
ಗ್ರಾಮಾಂತರ ಸುದ್ದಿ

ನಾವೂರು ಕೈಕಂಬ ಪ್ರದೇಶದ ಲಾಯಿಲ- ಕಿಲ್ಲೂರು ಪಿಡ್ಲೂಡಿ ರಸ್ತೆ ಬದಿಯ ಚರಂಡಿಯಲ್ಲಿ ತುಂಬಿದ ಹೂಳು:ಚರಂಡಿ ಹೂಳು ತೆಗೆದ ಯುವ ಉದ್ಯಮಿ ಅನಿಲ್ ಎಂ.ಜೆ ನರ್ನೊಟ್ಟು : ಸಾರ್ವಜನಿಕರ ಪ್ರಶಂಸೆ

ನಾವೂರು ಗ್ರಾಮದ ಕೈಕಂಬ ಪ್ರದೇಶದ ಲಾಯಿಲ- ಕಿಲ್ಲೂರು ಪಿಡ್ಲೂಡಿ ರಸ್ತೆ ಬದಿಯ ಚರಂಡಿಯಲ್ಲಿ ಹೂಳು ತುಂಬಿ ಮಳೆ ನೀರು ರಸ್ತೆಯಲ್ಲಿ ಹರಿದಾಡುತ್ತಿರುವುದನ್ನು ಗಮನಿಸಿದ ಯುವ ಉದ್ಯಮಿ ಅನಿಲ್ ಎಂ.ಜೆ ನರ್ನೊಟ್ಟು ತನ್ನ ಸ್ವಂತ ಜೆಸಿಬಿ ಮೂಲಕ ಚರಂಡಿ ಹೂಳು ತೆಗೆದು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ನಾವೂರು ಗ್ರಾಮದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು , ಮಳೆಯ ನೀರು ಚರಂಡಿಯಲ್ಲಿ ಹರಿಯುವ ಬದಲಿಗೆ ರಸ್ತೆಯಲ್ಲಿ ಹರಿಯುತ್ತಿತ್ತು. ಮಳೆಗಾಲ ಆರಂಭಕ್ಕೆ ಮುನ್ನ ಚರಂಡಿಯ ಹೂಳು ಎತ್ತಿ ಮಳೆಯ ನೀರು ಸುಗಮವಾಗಿ ಸಾಗಲು ಅವಕಾಶ ಮಾಡಿಕೊಡಬೇಕಾದ

ನಾವೂರು ಗ್ರಾಮ ಪಂಚಾಯತ್ ಮತ್ತು ಪಿಡ್ಲೂಡಿ ಇಲಾಖೆ ಕಣ್ಣಿದ್ದು ಕುರುಡರಂತೆ ವರ್ತಿಸಿತ್ತು. ಇದರಿಂದ ಬೆಸೆತ್ತ ನಾವೂರು ಗ್ರಾಮದ ಯುವ ಉದ್ಯಮಿ ಅನಿಲ್ ಎಂ.ಜೆ ರವರು ತನ್ನ ಸ್ವಂತ ಜೆಸಿಬಿ ಮೂಲಕ ಚರಂಡಿಯ ಹೂಳು ಎತ್ತಿ ನೀರು ಸರಾಗವಾಗಿ ಹರಿಯುವಂತೆ ಮಾಡಿದರು. ಅವರಿಗೆ ಸ್ಥಳೀಯ ಉದ್ಯಮಿಗಳು ಹಾಗೂ ರಿಕ್ಷಾ ಚಾಲಕ , ಮಾಲೀಕರು ಸಾಥ್ ನೀಡಿದರು.

ಉದ್ಯಮಿ ಅನಿಲ್ ಎಂ.ಜೆ ಅವರಿಗೆ ಕೈಕಂಬ ಜನರಲ್ ಸ್ಟೋರ್ ನ ಕೃಷ್ಣಪ್ಪ ಗೌಡ ದಡ್ಡು , ಕೋಟ್ಯಾನ್ ಚಿಕನ್ ಸೆಂಟರ್ ನ ಪ್ರವೀಣ್ ಕೋಟ್ಯಾನ್ , ರಿಕ್ಷಾ ಚಾಲಕ , ಮಾಲೀಕರಾದ ಓಬಯ್ಯ ಗೌಡ ಕುಂಡಡ್ಕ , ದಿನೇಶ್ ಗೌಡ ಕುಪ್ಲೋಟ್ಟು , ನವೀನ್ ಪೂಜಾರಿ ಮಲ್ಲಡ್ಕ , ಸಂತೋಷ್ ಕುಲಾಲ್ ಕಾರಿಂಜ , ಮೋಹನ್ ಕೊರಂಡ , ವಿಶ್ವನಾಥ ಉಲ್ಲಂಜ , ಸ್ಥಳೀಯರಾದ ಸುರೇಂದ್ರ ಪೂಜಾರಿ ಕೈಕಂಬ ಸಹಕಾರ ನೀಡಿದರು. ಉದ್ಯಮಿ ಅನಿಲ್ ಎಂ.ಜೆ ಹಾಗೂ ಸ್ಥಳೀಯರ ಕಾರ್ಯ ನಾವೂರು ಗ್ರಾಮ ಪಂಚಾಯತ್ ಹಾಗೂ ಪಿಡ್ಲೂಡಿ ಇಲಾಖೆಗೆ ಮುಜುಗರ ಪಡುವಂತೆ ಆಗಿದೆ.

Related posts

ಪಟ್ರಮೆ : ರೂ. 40 ಲಕ್ಷ ವೆಚ್ಚದ ಉಳಿಯ ಬೀಡಿನ ಕಾಲು ಸೇತುವೆಗೆ ಶಿಲಾನ್ಯಾಸ

Suddi Udaya

ಬೆಳ್ತಂಗಡಿ: ಚುನಾವಣೆ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿ : 24 ಗಂಟೆಯೂ ಸಂಚರಿಸುವ ವಾಹನಗಳ ಪರಿಶೀಲನೆ

Suddi Udaya

ನಿಡ್ಲೆ ಗ್ರಾ.ಪಂ. ನ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್‌ವೈಎಸ್ ಬೆಳ್ತಂಗಡಿ ಝೋನ್ ನಿಂದ ತಹಶೀಲ್ದಾರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ‘ದೆಸಿಲ್ದರತಿ’ ಶಿಶಿಲೇಶ್ವರ ದೇವರ ಭಕ್ತಿಗೀತೆಯ ಚಿತ್ರೀಕರಣ

Suddi Udaya

ಉಜಿರೆ: ಸೌಜನ್ಯ ಪ್ರಕರಣ: ಆರೋಪಿ ಸಂತೋಷ್ ರಾವ್ ನಿರಪರಾಧಿ ಸಿಬಿಐ ನ್ಯಾಯಾಲಯ ಆದೇಶ

Suddi Udaya
error: Content is protected !!