24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ನಾವೂರು ಕೈಕಂಬ ಪ್ರದೇಶದ ಲಾಯಿಲ- ಕಿಲ್ಲೂರು ಪಿಡ್ಲೂಡಿ ರಸ್ತೆ ಬದಿಯ ಚರಂಡಿಯಲ್ಲಿ ತುಂಬಿದ ಹೂಳು:ಚರಂಡಿ ಹೂಳು ತೆಗೆದ ಯುವ ಉದ್ಯಮಿ ಅನಿಲ್ ಎಂ.ಜೆ ನರ್ನೊಟ್ಟು : ಸಾರ್ವಜನಿಕರ ಪ್ರಶಂಸೆ

ನಾವೂರು ಗ್ರಾಮದ ಕೈಕಂಬ ಪ್ರದೇಶದ ಲಾಯಿಲ- ಕಿಲ್ಲೂರು ಪಿಡ್ಲೂಡಿ ರಸ್ತೆ ಬದಿಯ ಚರಂಡಿಯಲ್ಲಿ ಹೂಳು ತುಂಬಿ ಮಳೆ ನೀರು ರಸ್ತೆಯಲ್ಲಿ ಹರಿದಾಡುತ್ತಿರುವುದನ್ನು ಗಮನಿಸಿದ ಯುವ ಉದ್ಯಮಿ ಅನಿಲ್ ಎಂ.ಜೆ ನರ್ನೊಟ್ಟು ತನ್ನ ಸ್ವಂತ ಜೆಸಿಬಿ ಮೂಲಕ ಚರಂಡಿ ಹೂಳು ತೆಗೆದು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ನಾವೂರು ಗ್ರಾಮದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು , ಮಳೆಯ ನೀರು ಚರಂಡಿಯಲ್ಲಿ ಹರಿಯುವ ಬದಲಿಗೆ ರಸ್ತೆಯಲ್ಲಿ ಹರಿಯುತ್ತಿತ್ತು. ಮಳೆಗಾಲ ಆರಂಭಕ್ಕೆ ಮುನ್ನ ಚರಂಡಿಯ ಹೂಳು ಎತ್ತಿ ಮಳೆಯ ನೀರು ಸುಗಮವಾಗಿ ಸಾಗಲು ಅವಕಾಶ ಮಾಡಿಕೊಡಬೇಕಾದ

ನಾವೂರು ಗ್ರಾಮ ಪಂಚಾಯತ್ ಮತ್ತು ಪಿಡ್ಲೂಡಿ ಇಲಾಖೆ ಕಣ್ಣಿದ್ದು ಕುರುಡರಂತೆ ವರ್ತಿಸಿತ್ತು. ಇದರಿಂದ ಬೆಸೆತ್ತ ನಾವೂರು ಗ್ರಾಮದ ಯುವ ಉದ್ಯಮಿ ಅನಿಲ್ ಎಂ.ಜೆ ರವರು ತನ್ನ ಸ್ವಂತ ಜೆಸಿಬಿ ಮೂಲಕ ಚರಂಡಿಯ ಹೂಳು ಎತ್ತಿ ನೀರು ಸರಾಗವಾಗಿ ಹರಿಯುವಂತೆ ಮಾಡಿದರು. ಅವರಿಗೆ ಸ್ಥಳೀಯ ಉದ್ಯಮಿಗಳು ಹಾಗೂ ರಿಕ್ಷಾ ಚಾಲಕ , ಮಾಲೀಕರು ಸಾಥ್ ನೀಡಿದರು.

ಉದ್ಯಮಿ ಅನಿಲ್ ಎಂ.ಜೆ ಅವರಿಗೆ ಕೈಕಂಬ ಜನರಲ್ ಸ್ಟೋರ್ ನ ಕೃಷ್ಣಪ್ಪ ಗೌಡ ದಡ್ಡು , ಕೋಟ್ಯಾನ್ ಚಿಕನ್ ಸೆಂಟರ್ ನ ಪ್ರವೀಣ್ ಕೋಟ್ಯಾನ್ , ರಿಕ್ಷಾ ಚಾಲಕ , ಮಾಲೀಕರಾದ ಓಬಯ್ಯ ಗೌಡ ಕುಂಡಡ್ಕ , ದಿನೇಶ್ ಗೌಡ ಕುಪ್ಲೋಟ್ಟು , ನವೀನ್ ಪೂಜಾರಿ ಮಲ್ಲಡ್ಕ , ಸಂತೋಷ್ ಕುಲಾಲ್ ಕಾರಿಂಜ , ಮೋಹನ್ ಕೊರಂಡ , ವಿಶ್ವನಾಥ ಉಲ್ಲಂಜ , ಸ್ಥಳೀಯರಾದ ಸುರೇಂದ್ರ ಪೂಜಾರಿ ಕೈಕಂಬ ಸಹಕಾರ ನೀಡಿದರು. ಉದ್ಯಮಿ ಅನಿಲ್ ಎಂ.ಜೆ ಹಾಗೂ ಸ್ಥಳೀಯರ ಕಾರ್ಯ ನಾವೂರು ಗ್ರಾಮ ಪಂಚಾಯತ್ ಹಾಗೂ ಪಿಡ್ಲೂಡಿ ಇಲಾಖೆಗೆ ಮುಜುಗರ ಪಡುವಂತೆ ಆಗಿದೆ.

Related posts

ಧರ್ಮಸ್ಥಳ ಲಕ್ಷ ದೀಪೋತ್ಸವದ ಪ್ರಯುಕ್ತ 12ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಸಭೆ

Suddi Udaya

ಕಳೆಂಜ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಬಿಜೆಪಿ‌ ಕಣಿಯೂರು ಮಹಾಶಕ್ತಿ ಕೇಂದ್ರ ಹಾಗೂ ಬಂದಾರು ಗ್ರಾ.ಪಂ. ವ್ಯಾಪ್ತಿಯ ಅಭಿಮಾನಿಗಳಿಂದ ಶಾಸಕ ಹರೀಶ್ ಪೂoಜರವರ ಹುಟ್ಟುಹಬ್ಬ ಆಚರಣೆ

Suddi Udaya

ನಾಲ್ಕೂರು: ಪಾಲೆದಡಿ ಸಂಕಪ್ಪ ಪೂಜಾರಿ ನಿಧನ

Suddi Udaya

ಎ 6-7:ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ, “ಉದ್ಯೋಗಂ-2026”

Suddi Udaya
error: Content is protected !!