September 6, 2026
ಗ್ರಾಮಾಂತರ ಸುದ್ದಿ

ನಾವೂರು ಕೈಕಂಬ ಪ್ರದೇಶದ ಲಾಯಿಲ- ಕಿಲ್ಲೂರು ಪಿಡ್ಲೂಡಿ ರಸ್ತೆ ಬದಿಯ ಚರಂಡಿಯಲ್ಲಿ ತುಂಬಿದ ಹೂಳು:ಚರಂಡಿ ಹೂಳು ತೆಗೆದ ಯುವ ಉದ್ಯಮಿ ಅನಿಲ್ ಎಂ.ಜೆ ನರ್ನೊಟ್ಟು : ಸಾರ್ವಜನಿಕರ ಪ್ರಶಂಸೆ

ನಾವೂರು ಗ್ರಾಮದ ಕೈಕಂಬ ಪ್ರದೇಶದ ಲಾಯಿಲ- ಕಿಲ್ಲೂರು ಪಿಡ್ಲೂಡಿ ರಸ್ತೆ ಬದಿಯ ಚರಂಡಿಯಲ್ಲಿ ಹೂಳು ತುಂಬಿ ಮಳೆ ನೀರು ರಸ್ತೆಯಲ್ಲಿ ಹರಿದಾಡುತ್ತಿರುವುದನ್ನು ಗಮನಿಸಿದ ಯುವ ಉದ್ಯಮಿ ಅನಿಲ್ ಎಂ.ಜೆ ನರ್ನೊಟ್ಟು ತನ್ನ ಸ್ವಂತ ಜೆಸಿಬಿ ಮೂಲಕ ಚರಂಡಿ ಹೂಳು ತೆಗೆದು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ನಾವೂರು ಗ್ರಾಮದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು , ಮಳೆಯ ನೀರು ಚರಂಡಿಯಲ್ಲಿ ಹರಿಯುವ ಬದಲಿಗೆ ರಸ್ತೆಯಲ್ಲಿ ಹರಿಯುತ್ತಿತ್ತು. ಮಳೆಗಾಲ ಆರಂಭಕ್ಕೆ ಮುನ್ನ ಚರಂಡಿಯ ಹೂಳು ಎತ್ತಿ ಮಳೆಯ ನೀರು ಸುಗಮವಾಗಿ ಸಾಗಲು ಅವಕಾಶ ಮಾಡಿಕೊಡಬೇಕಾದ

ನಾವೂರು ಗ್ರಾಮ ಪಂಚಾಯತ್ ಮತ್ತು ಪಿಡ್ಲೂಡಿ ಇಲಾಖೆ ಕಣ್ಣಿದ್ದು ಕುರುಡರಂತೆ ವರ್ತಿಸಿತ್ತು. ಇದರಿಂದ ಬೆಸೆತ್ತ ನಾವೂರು ಗ್ರಾಮದ ಯುವ ಉದ್ಯಮಿ ಅನಿಲ್ ಎಂ.ಜೆ ರವರು ತನ್ನ ಸ್ವಂತ ಜೆಸಿಬಿ ಮೂಲಕ ಚರಂಡಿಯ ಹೂಳು ಎತ್ತಿ ನೀರು ಸರಾಗವಾಗಿ ಹರಿಯುವಂತೆ ಮಾಡಿದರು. ಅವರಿಗೆ ಸ್ಥಳೀಯ ಉದ್ಯಮಿಗಳು ಹಾಗೂ ರಿಕ್ಷಾ ಚಾಲಕ , ಮಾಲೀಕರು ಸಾಥ್ ನೀಡಿದರು.

ಉದ್ಯಮಿ ಅನಿಲ್ ಎಂ.ಜೆ ಅವರಿಗೆ ಕೈಕಂಬ ಜನರಲ್ ಸ್ಟೋರ್ ನ ಕೃಷ್ಣಪ್ಪ ಗೌಡ ದಡ್ಡು , ಕೋಟ್ಯಾನ್ ಚಿಕನ್ ಸೆಂಟರ್ ನ ಪ್ರವೀಣ್ ಕೋಟ್ಯಾನ್ , ರಿಕ್ಷಾ ಚಾಲಕ , ಮಾಲೀಕರಾದ ಓಬಯ್ಯ ಗೌಡ ಕುಂಡಡ್ಕ , ದಿನೇಶ್ ಗೌಡ ಕುಪ್ಲೋಟ್ಟು , ನವೀನ್ ಪೂಜಾರಿ ಮಲ್ಲಡ್ಕ , ಸಂತೋಷ್ ಕುಲಾಲ್ ಕಾರಿಂಜ , ಮೋಹನ್ ಕೊರಂಡ , ವಿಶ್ವನಾಥ ಉಲ್ಲಂಜ , ಸ್ಥಳೀಯರಾದ ಸುರೇಂದ್ರ ಪೂಜಾರಿ ಕೈಕಂಬ ಸಹಕಾರ ನೀಡಿದರು. ಉದ್ಯಮಿ ಅನಿಲ್ ಎಂ.ಜೆ ಹಾಗೂ ಸ್ಥಳೀಯರ ಕಾರ್ಯ ನಾವೂರು ಗ್ರಾಮ ಪಂಚಾಯತ್ ಹಾಗೂ ಪಿಡ್ಲೂಡಿ ಇಲಾಖೆಗೆ ಮುಜುಗರ ಪಡುವಂತೆ ಆಗಿದೆ.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ

Suddi Udaya

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವರ ಮತ್ತು ಪರಿವಾರ ದೈವಗಳ ಆಡಳಿತ ಸೇವಾ ಟ್ರಸ್ಟ್ ನ ದ್ವಿತೀಯ ಸಾಮಾನ್ಯ ಸಭೆ

Suddi Udaya

ಮಿತ್ತಬಾಗಿಲು ಗ್ರಾಮ ಸಭೆ: ಆಶ್ರಯ ಯೋಜನೆಯ ಮನೆ ಮಂಜೂರಾತಿಯಲ್ಲಿ ಪಾರದರ್ಶಕತೆ ಇರಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಶಿಬಿರ’ದ ಉದ್ಘಾಟನೆ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ “ವಾಕ್-ಇನ್ ವಿದ್ವತ್” – ಎ ಸ್ಟೆಪ್ ಇಂಟು ಸಕ್ಸಸ್” ಕಾರ್ಯಕ್ರಮದ ಲೋಗೋ ಅನಾವರಣ

Suddi Udaya

ಬಿಸಿಲ ಝಳಕ್ಕೆ ತಂಪೆರೆದ ವರುಣ

Suddi Udaya
error: Content is protected !!