22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ರುಡ್ ಸೆಟ್ ನಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ ಕಾರ್ಯಕ್ರಮದ ಸಮಾರೋಪ

ಉಜಿರೆ: ಮಹಿಳೆಯರು ಎಲ್ಲಾ ಜವಬ್ಧಾರಿಗಳನ್ನು ನಿಭಾಹಿಸುದರ ಜೊತೆಗೆ ತಮ್ಮ ಕನಸುಗಳನ್ನು ಸಕಾರಗೊಳಿಸಲು ಪ್ರಯತ್ನಿಸಬೇಕು. ಮಹಿಳೆಯರಿಗೆ ಅತ್ಯಂತ ಹೆಚ್ಚಿನ ಜವಬ್ಧಾರಿಗಳಿವೆ, ಆದರೂ ಎಲ್ಲಾ ಜವಬ್ಧಾರಿಗಳನ್ನು ಅತ್ಯಂತ ಹೆಚ್ಚಿನ ಮುತುವರ್ಜಿಯಿಂದ ಮಾಡುತ್ತಾಳೆ, ಅದರ ಜೊತೆಗೆ ತನ್ನ ಕನಸ್ಸುಗಳನ್ನು ಮತ್ತು ಆಸೆಗಳನ್ನು ಸಕಾರ ಮಾಡಲು ಪ್ರಯತ್ನಿಸಬೇಕು. ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಕಲ್ಪನೆಯ ಈ ರುಡ್‌ಸೆಟ್ ಸಂಸ್ಥೆಯು ಕಳೆದ 42 ವರ್ಷಗಳಿಂದ ದೇಶದ ಅನೇಕ ಮಹಿಳೆಯರ ಸ್ವ ಉದ್ಯೋಗದ ಕನಸುಗಳನ್ನು ಸಕಾರಗೊಳಿಸಿದೆ. ಉಜಿರೆಯಲ್ಲಿ ಪ್ರಾರಂಭಗೊಂಡ ಈ ರುಡ್‌ಸೆಟ್ ಸಂಸ್ಥೆ ದೇಶದ ಪ್ರತಿ ಜಿಲ್ಲೆಯಲ್ಲೂ ಮಾದರಿ ಸಂಸ್ಥೆ (ಆರ್‌ಸೆಟಿ) ಗಳಾಗಿ ಸ್ಥಾಪನೆಗೊಂಡಿರುವುದು ನಮಗೆ ಹೆಮ್ಮೆಯ ವಿಚಾರ ಎಂದು ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಉಷಾಕಿರಣ್ ಕಾರಂತ್ ರವರು ಅಭಿಪ್ರಾಯಪಟ್ಟರು.

ಅವರುಉಜಿರೆ ರುಡ್ ಸೆಟ್ ನಲ್ಲಿ ನಡೆದ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶಿಭಿರಾರ್ಥೀಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಎಮ್. ಸುರೇಶ್ ಅತಿಥಿಗಳನ್ನು ಸ್ವಾಗತಿಸಿ ತರಬೇತಿಯ ಹಿನ್ನೋಟ ನೀಡಿದರು. ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ವಿಜಯಕುಮಾರ್ ಬಿ.ಪಿ ಅಧ್ಯಕ್ಷತೆ ವಹಿಸಿದ್ದರು, ಹಿರಿಯ ಉಪನ್ಯಾಸಕ ಕರುಣಾಕರ್ ಜೈನ್ ಕಾರ್ಯಕ್ರಮ ನಿರೂಪಿಸಿ, ಅಬ್ರಹಾಂ ಜೇಮ್ಸ್‌ರವರು ವಂದಿಸಿದರು. 30 ದಿನಗಳ ಈ ತರಬೇತಿ ಕಾರ್ಯಕ್ರಮದಲ್ಲಿ 32 ಮಹಿಳಾ ಶಿಬಿರಾರ್ಥಿಗಳು ಭಾಗವಹಿಸಿದ್ದರು. ಕೆಲವು ಶಿಬಿರಾರ್ಥಿಗಳು ತರಬೇತಿಯ ಅನಿಸಿಕೆಯನ್ನು ವ್ಯಕ್ತಪಡಿಸಿದರು.

Related posts

ಪಹಲ್ಗಾಮ್ ನಲ್ಲಿ ಭಯೋತ್ಪಾದಕ ದಾಳಿಯನ್ನು ಖಂಡಿಸಿ ವಿ.ಹಿಂ.ಪ. ಬಜರಂಗದಳ ವತಿಯಿಂದ ಉಜಿರೆಯಲ್ಲಿ ಶ್ರದ್ಧಾಂಜಲಿ ಸಭೆ ಮತ್ತು ಪ್ರತಿಭಟನೆ

Suddi Udaya

ಲಕ್ಷಾಂತರ ರೂ. ಮೌಲ್ಯದ ಖೋಟಾ ನೋಟು ಸಂಗ್ರಹ: ಎಫ್‌ಐಆರ್ ರದ್ದು ಕೋರಿ ಅರ್ಜಿ, ಸರಕಾರಕ್ಕೆ ನೋಟಿಸ್

Suddi Udaya

ವಿದ್ಯಾ ವಾಹಿನಿ ವಾಟ್ಸಪ್ ಬಳಗದ ವತಿಯಿಂದ ನಾರಾವಿ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಕ್ರೆಯಾನ್ಸ್ , ಜಾಮಿಟ್ರಿ ಬಾಕ್ಸ್ ಗಳ ವಿತರಣೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಹಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಮಾಯಾ ಒಕ್ಕೂಟದ ಮೈಕ್ರೋ ಬಚತ್ ಪಾಲಿಸಿಯಿಂದ ಮಂಜೂರಾದ ರೂ.2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ಪೆಟ್ರೋಲು, ಡೀಸೆಲ್ ಏರಿಕೆ ಬೆನ್ನಲ್ಲೇ ಸಿಎನ್‌ಜಿ ದರ 2 ರೂ.ಗೆ ಏರಿಕೆ

Suddi Udaya
error: Content is protected !!