23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ರುಡ್ ಸೆಟ್ ನಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ ಕಾರ್ಯಕ್ರಮದ ಸಮಾರೋಪ

ಉಜಿರೆ: ಮಹಿಳೆಯರು ಎಲ್ಲಾ ಜವಬ್ಧಾರಿಗಳನ್ನು ನಿಭಾಹಿಸುದರ ಜೊತೆಗೆ ತಮ್ಮ ಕನಸುಗಳನ್ನು ಸಕಾರಗೊಳಿಸಲು ಪ್ರಯತ್ನಿಸಬೇಕು. ಮಹಿಳೆಯರಿಗೆ ಅತ್ಯಂತ ಹೆಚ್ಚಿನ ಜವಬ್ಧಾರಿಗಳಿವೆ, ಆದರೂ ಎಲ್ಲಾ ಜವಬ್ಧಾರಿಗಳನ್ನು ಅತ್ಯಂತ ಹೆಚ್ಚಿನ ಮುತುವರ್ಜಿಯಿಂದ ಮಾಡುತ್ತಾಳೆ, ಅದರ ಜೊತೆಗೆ ತನ್ನ ಕನಸ್ಸುಗಳನ್ನು ಮತ್ತು ಆಸೆಗಳನ್ನು ಸಕಾರ ಮಾಡಲು ಪ್ರಯತ್ನಿಸಬೇಕು. ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಕಲ್ಪನೆಯ ಈ ರುಡ್‌ಸೆಟ್ ಸಂಸ್ಥೆಯು ಕಳೆದ 42 ವರ್ಷಗಳಿಂದ ದೇಶದ ಅನೇಕ ಮಹಿಳೆಯರ ಸ್ವ ಉದ್ಯೋಗದ ಕನಸುಗಳನ್ನು ಸಕಾರಗೊಳಿಸಿದೆ. ಉಜಿರೆಯಲ್ಲಿ ಪ್ರಾರಂಭಗೊಂಡ ಈ ರುಡ್‌ಸೆಟ್ ಸಂಸ್ಥೆ ದೇಶದ ಪ್ರತಿ ಜಿಲ್ಲೆಯಲ್ಲೂ ಮಾದರಿ ಸಂಸ್ಥೆ (ಆರ್‌ಸೆಟಿ) ಗಳಾಗಿ ಸ್ಥಾಪನೆಗೊಂಡಿರುವುದು ನಮಗೆ ಹೆಮ್ಮೆಯ ವಿಚಾರ ಎಂದು ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಉಷಾಕಿರಣ್ ಕಾರಂತ್ ರವರು ಅಭಿಪ್ರಾಯಪಟ್ಟರು.

ಅವರುಉಜಿರೆ ರುಡ್ ಸೆಟ್ ನಲ್ಲಿ ನಡೆದ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶಿಭಿರಾರ್ಥೀಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಎಮ್. ಸುರೇಶ್ ಅತಿಥಿಗಳನ್ನು ಸ್ವಾಗತಿಸಿ ತರಬೇತಿಯ ಹಿನ್ನೋಟ ನೀಡಿದರು. ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ವಿಜಯಕುಮಾರ್ ಬಿ.ಪಿ ಅಧ್ಯಕ್ಷತೆ ವಹಿಸಿದ್ದರು, ಹಿರಿಯ ಉಪನ್ಯಾಸಕ ಕರುಣಾಕರ್ ಜೈನ್ ಕಾರ್ಯಕ್ರಮ ನಿರೂಪಿಸಿ, ಅಬ್ರಹಾಂ ಜೇಮ್ಸ್‌ರವರು ವಂದಿಸಿದರು. 30 ದಿನಗಳ ಈ ತರಬೇತಿ ಕಾರ್ಯಕ್ರಮದಲ್ಲಿ 32 ಮಹಿಳಾ ಶಿಬಿರಾರ್ಥಿಗಳು ಭಾಗವಹಿಸಿದ್ದರು. ಕೆಲವು ಶಿಬಿರಾರ್ಥಿಗಳು ತರಬೇತಿಯ ಅನಿಸಿಕೆಯನ್ನು ವ್ಯಕ್ತಪಡಿಸಿದರು.

Related posts

ಡಾ. ಕುಮಾರ ಹೆಗ್ಡೆ ರವರಿಗೆ ಪ್ರತಿಷ್ಠಿತ ಜೇಸಿಯ ಉದ್ಯೋಗ ರತ್ನ ಪ್ರಶಸ್ತಿ

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಇಂದು ( ಫೆ. 19): ಬೆಳ್ತಂಗಡಿಯಲ್ಲಿ ಯುವ ನಾಯಕ ಸಂಪತ್ ಬಿ ಸುವರ್ಣರವರ ಮುಂದಾಳತ್ವದಲ್ಲಿ ಸಾಂಸ್ಕೃತಿಕ ವೈಭವ : ವಿವಿಧ ಕ್ಷೇತ್ರದ ಮೂವರು ಸಾಧಕರಿಗೆ ಸುವರ್ಣ ರಂಗ ಸಮ್ಮಾನ್ ಪ್ರಶಸ್ತಿ ಪ್ರದಾನ

Suddi Udaya

ಮಡಂತ್ಯಾರು: ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಜೇನು ಕೃಷಿ ತರಬೇತಿ ಹಾಗೂ ಭತ್ತದ ಕೃಷಿ ಉತ್ಪಾದನೆ ಬಗ್ಗೆ ಮಾಹಿತಿ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ನೂತನ ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭ

Suddi Udaya

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಪಿ. ಜಯರಾಜ್ ಹೆಗ್ಡೆ ಅವಿರೋಧ ಆಯ್ಕೆ

Suddi Udaya
error: Content is protected !!