26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯ ಹಾಗೂ ಅಕ್ರಮ ಸಾಗಾಟ ವಿರೋಧಿ ದಿನಾಚರಣೆ

ಕೊಯ್ಯೂರು : “ಸ್ವಾಸ್ತ್ಯ ಸಮಾಜದ ನಿರ್ಮಾಣದಲ್ಲಿ ಯುವಜನರ ಪಾತ್ರ ಮುಖ್ಯವಾಗಿದ್ದು, ವಿದ್ಯಾರ್ಥಿಗಳು ಮಾದಕ ದ್ರವ್ಯ ಮತ್ತು ದುಶ್ಚಟಗಳಿಂದ ದೂರವಿದ್ದು ಆರೋಗ್ಯ ಪೂರ್ಣ ಸಮಾಜದ ನಿರ್ಮಾಣದಲ್ಲಿ ಕೈ ಜೋಡಿಸಬೇಕೆಂದು ಬೆಳ್ತಂಗಡಿ ಆರಕ್ಷಕ ವೃತ್ತ ನಿರೀಕ್ಷಕ ವಸಂತ ಆಚಾರ್ ವಿದ್ಯಾರ್ಥಿಗಳಿಗೆ ಕರೆನೀಡಿದರು.

ಅವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜರುಗಿದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡುತ್ತಾ ಬಾಲಕಿಯರು ಸಮಾಜದಲ್ಲಿ ನಡೆಯುವ ಅನಿಷ್ಠಗಳಿಗೆ ಬಲಿಯಾಗಬಾರದೆಂದು ಕಾಳಜಿಯನ್ನು ವ್ಯಕ್ತಪಡಿಸಿದರು.


ಬೆಳ್ತಂಗಡಿ ಆರಕ್ಷಕ ಠಾಣೆಯ ಉಪನೀರಿಕ್ಷಕರಾದ ಮುರಳೀಧರ ನಾಯಕ್ ಮಾತನಾಡಿ ಮಾದಕ ದ್ರವ್ಯ ಮತ್ತು ಅಕ್ರಮ ಸಾಗಾಟದಲ್ಲಿ ಯುವಜನರನ್ನು ತೊಡಗಿಸಿಕೊಳ್ಳುವ ಹುನ್ನಾರ ನಡೆಯುತ್ತಿದ್ದು ವಿದ್ಯಾರ್ಥಿಗಳು ಜಾಗರೂಕತೆಯಿಂದ ಮುನ್ನಡೆಯಬೇಕು ಹಾಗೂ ನಮ್ಮ ಸಮಾಜ ಈ ವಿಷ ವರ್ತುಲದಲ್ಲಿ ಸಿಲುಕದಂತೆ ಜಾಗೃತಿ ವಹಿಸಬೇಕೆಂದು ಕರೆ ನೀಡಿದರು. ಮಾದಕ ದ್ರವ್ಯ ವಿರೋಧಿ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳು ಪ್ರಮಾಣವಚನಗೈದರು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಪ್ರಾಚಾರ್ಯರಾದ ಮೋಹನ ಗೌಡ ಪ್ರಾಸ್ತವಿಕವಾಗಿ ಮಾತನಾಡಿ, ಅತಿಥಿಗಳನ್ನು ಸ್ವಾಗತಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ಕುಮಾರಿ ತೃಪ್ತಿ ಧನ್ಯವಾದವಿತ್ತರು.

Related posts

ನ.15: ಕಸ್ತೂರಿ ರಂಗನ್ ವರದಿ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಬೆಂಬಲ

Suddi Udaya

ಪುದುವೆಟ್ಟಿನಲ್ಲಿ ವಿಕಲಚೇತನರ ಸಮನ್ವಯ ಗ್ರಾಮಸಭೆ

Suddi Udaya

ಗರ್ಡಾಡಿ ನಿವಾಸಿ ಲೀಲಾ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು : 37ನೇ ಶಿಶ್ಯೋಪನಯನ ಕಾರ್ಯಕ್ರಮ: 150 ನೂತನ ವಿದ್ಯಾರ್ಥಿಗಳಿಂದ ದೀಕ್ಷೆ ಸ್ವೀಕಾರ

Suddi Udaya

ಬೆಳ್ತಂಗಡಿ: ವಿಶ್ವ ತಂಬಾಕು ನಿಷೇಧ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಮಚ್ಚಿನ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರಿಂದ ಸ್ವಚ್ಚತಾ ಕಾರ್ಯ

Suddi Udaya
error: Content is protected !!