30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಬೈಕ್‌ಗೆ ಅಡ್ಡ ಬಂದ ನಾಯಿ: ಬೈಕ್ ಪಲ್ಟಿಯಾಗಿ ನವವಿವಾಹಿತೆ ದಾರುಣ ಸಾವು

ನಾರಾವಿ: ರಸ್ತೆಯಲ್ಲಿ ನಾಯಿಯೊಂದು ಬೈಕ್‌ಗೆ ಅಡ್ಡ ಬಂದ ಪರಿಣಾಮ ಬೈಕ್ ಪಲ್ಟಿಯಾಗಿ ನವವಿವಾಹಿತೆ ದಾರುಣ ಸಾವಿಗೀಡಾದ ಘಟನೆ ಹೊಸ್ಮಾರು ಬಳಿ ಜೂ.28 ರಂದು ಸಂಭವಿಸಿದೆ.

ಈದು ಗ್ರಾಮದ ಕರೆಂಬಾಲುವಿನ ವಿಶಾಲ್ ಅವರ ಪತ್ನಿ ನೀಕ್ಷಾ (26ವ) ಎಂಬವರೇ ಮೃತಪಟ್ಟ ಮಹಿಳೆ. ಕಾರ್ಕಳ-ಗುರುವಾಯನಕೆರೆ ರಸ್ತೆಯ ಹೊಸ್ಮಾರು ಸೇತುವೆ ಬಳಿ ಜೂ.28ರ ಸಂಜೆ ಗಂಡನೊಂದಿಗೆ ಬೈಕ್‌ನಲ್ಲಿ ಸಾಗುತ್ತಿದ್ದಾಗ ನಾಯಿ ದಿಢೀರನೆ ಅಡ್ಡ ಬಂದ ಪರಿಣಾಮ ಬೈಕ್ ರಸ್ತೆಗೆಸೆಯಲ್ಪಟ್ಟಿತ್ತು.

ಘಟನೆಯಿಂದ ನೀಕ್ಷಾ ರಸ್ತೆಗೆ ಎಸೆಯಲ್ಪಟ್ಟು ತೀವ್ರ ಸ್ವರೂಪದ ಗಾಯವಾಗಿದ್ದು, ಆಸ್ಪತ್ರೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದರು. ನೀಕ್ಷಾ ಅವರಿಗೆ ಎರಡು ತಿಂಗಳ ಹಿಂದೆಯಷ್ಟೇ ಮದುವೆ ಆಗಿತ್ತು ಎಂದು ತಿಳಿದು ಬಂದಿದೆ.

Related posts

ಬಳಂಜ ಜ್ಯೋತಿ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ ಸಭೆ: ಅಧ್ಯಕ್ಷರಾಗಿ ಚೇತನಾ ಜೈನ್, ಪ್ರ.ಕಾರ್ಯದರ್ಶಿಯಾಗಿ ಯಕ್ಷಿತಾ ದೇವಾಡಿಗ

Suddi Udaya

ಚಾರ್ಮಾಡಿ, ತೋಟತ್ತಾಡಿ, ಚಿಬಿದ್ರೆ ಗ್ರಾಮಗಳಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬರೋಡಾದ ಶಶಿ ಕ್ಯಾಟರಿಂಗ್ ಸರ್ವೀಸಸ್ ಮಾಲಕ,ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಮುಂದಾಳು ಪ್ರಸಿದ್ದ ಉದ್ಯಮಿ ಶಶಿಧರ ಬಿ.ಶೆಟ್ಟಿ ನವಶಕ್ತಿಯವರಿಂದ ದೇವಸ್ಥಾನಗಳಿಗೆ ರೂ.30 ಲಕ್ಷ ದೇಣಿಗೆ

Suddi Udaya

ಪಶ್ಚಿಮ ಘಟ್ಟದ ಎಲ್ಲ ಅರಣ್ಯ ಒತ್ತುವರಿ ಮತ್ತು ಅನಧಿಕೃತ ಹೋಮ್ ಸ್ಟೇ, ಬಡಾವಣೆ, ರೆಸಾರ್ಟ್ ಗಳನ್ನು ತೆರವುಗೊಳಿಸುವಂತೆ ಅರಣ್ಯ ಸಚಿವರಿಂದ ಖಡಕ್ ಸೂಚನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಚಂಡಿಕಾಯಾಗ-ಸತ್ಯದರ್ಶನ ಸಮಾವೇಶ: ಬೆಳ್ತಂಗಡಿ ತಾಲೂಕಿನಾದ್ಯಂತದಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಭಾಗಿ

Suddi Udaya

ಶಾಲೆತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಸ್ಥಾನಕ್ಕೆ ಸಹಕಾರ ಭಾರತಿ ಅಭ್ಯರ್ಥಿಗಳ ಅವಿರೋಧ ಆಯ್ಕೆ

Suddi Udaya
error: Content is protected !!