July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರಾಡಿ ಘಾಟ್ ಚೆಕ್ ಪೋಸ್ಟ್ ಬಳಿ ಸರಣಿ ಅಪಘಾತ

ಬೆಳ್ತಂಗಡಿ: ಶಿರಾಡಿ ಘಾಟ್ ಚೆಕ್ ಪೋಸ್ಟ್ ಬಳಿ ಸರಣಿ ಅಪಘಾತ ನಡೆದ ಘಟನೆ ಇಂದು ಜೂ.29 ಮಧ್ಯಾಹ್ನ ನಡೆದಿದೆ.

ಗೂಡ್ಸ್ ಹೊತ್ತ ಟೆಂಪೋ, ಐರಾವತ ಬಸ್, ರಾಜಹಂಸ ಬಸ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಐರಾವತ ಬಸ್ಸನ್ನು ಗೂಡ್ಸ್ ಹೊತ್ತ ಟೆಂಪೋ ಓವರ್ ಟೇಕ್ ಮಾಡುವ ಭರದಲ್ಲಿ ದುರ್ಘಟನೆ ಸಂಭವಿಸಿತು. ಓವರ್ ಟೇಕ್ ಮಾಡುವ ಸಂದರ್ಭ ಎದುರಿನಿಂದ ರಾಜಹಂಸ ಬಸ್ ಬರುತ್ತಿದ್ದು, ಟೆಂಪೋ ಚಾಲಕ ನಿಯಂತ್ರಣ ಕಳೆದುಕೊಂಡು ರಾಜಹಂಸಕ್ಕೆ ಡಿಕ್ಕಿ‌ ಹೊಡೆದು, ಹಳ್ಳಕ್ಕೆ ಬಿದ್ದ ಘಟನೆ ನಡೆದಿದೆ.

ಇನ್ನೊಂದೆಡೆ ರಾಜಹಂಸ ಹಾಗೂ ಐರಾವತ ಬಸ್ ಮುಖಾಮುಖಿ ಡಿಕ್ಕಿಯಾದವು.

ಸ್ಥಳದಲ್ಲಿ ಟ್ರಾಫಿಕ್ ದಟ್ಟಣೆಯಾಗಿದ್ದು, ಎರಡು ಕಡೆಯೂ ವಾಹನಗಳು ಸಾಲುಗಟ್ಟಿ ನಿಂತಿವೆ. ಸಂಚಾರ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿದ್ದಾರೆ.

Related posts

ಕಳೆಂಜ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಚಿದಾನಂದ ಇಡ್ಯ, ಕಾರ್ಯದರ್ಶಿಯಾಗಿ ಸಂತೋಷ್ ಶೆಟ್ಟಿ ಆಯ್ಕೆ

Suddi Udaya

ಬಂಗಾಡಿ ಶಾಲೆಯ ಶಿಕ್ಷಕ ಅಮಿತಾನಂದ ಹೆಗ್ಡೆ ರವರಿಗೆ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಮುಂಡಾಜೆ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಅನಂತ ಭಟ್ ಮಚ್ಚಿಮಲೆ 5 ನೇ ಬಾರಿ ಆಯ್ಕೆ : ಉಪಾಧ್ಯಕ್ಷರಾಗಿ ಜಯಂತ ಗೌಡ ಎಂ.ಅವಿರೋಧ ಆಯ್ಕೆ

Suddi Udaya

ಶಿರ್ಲಾಲು : ಮಜಲಪಲ್ಕೆ ನಿವಾಸಿ ಹರಿಶ್ಚಂದ್ರ ಪೂಜಾರಿ ರವರಿಗೆ ಬಿಜೆಪಿ ಗ್ರಾಮ ಸಮಿತಿಯ ಸದಸ್ಯರಿಂದ ಆರ್ಥಿಕ ನೆರವು

Suddi Udaya

ಹಿರಿಯ ಯಕ್ಷಗಾನ ಕಲಾವಿದ ಬಿ. ಗೋಪಾಲಕೃಷ್ಣ ನಿಧನ

Suddi Udaya
error: Content is protected !!