September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿಯ ಸಭೆ

ಶಿಶಿಲ :ಜಿಲ್ಲಾಧಿಕಾರಿಯವರ ಆದೇಶದಂತೆ ಶಿಶಿಲ ಗ್ರಾಮಪಂಚಾಯತ್ ವಿಪತ್ತು ನಿರ್ವಹಣಾ ಸಮಿತಿಯ ಸಭೆಯು ಜೂ.28 ರಂದು ಗ್ರಾಮ ಪಂಚಾಯತ್ ಕಚೇರಿಯಲ್ಲಿ ನಡೆಸಲಾಯಿತು.

ಗ್ರಾಮದಲ್ಲಿ ಇರುವ ಸಮಸ್ಯೆಗಳ ಪಟ್ಟಿ ಮಾಡಿ ಇಲಾಖೆಗಳಿಗೆ ಮಾಹಿತಿ ನೀಡಿ ಇಲಾಖೆಗಳಿಂದ ತಕ್ಷಣ ಕ್ರಮಕೈಗೊಳ್ಳಲು ಗ್ರಾಮ ಪಂಚಾಯತ್ ಮಟ್ಟದ ವಿಪತ್ತು ನಿರ್ವಹಣಾ ಸಭೆಯಲ್ಲಿ ನಿರ್ಧಾರಿಸಲಾಯಿತು. ವಿಪತ್ತು ನಿರ್ವಹಣಾ ತಂಡದ ಸದಸ್ಯರು ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವಂತೆ ಗ್ರಾಮ ಪಂಚಾಯತ್ ವಿಪತ್ತು ನಿರ್ವಹಣಾ ತಂಡದ ಸಭೆಯಲ್ಲಿ ಸೂಚಿಸಲಾಯಿತು. ಗ್ರಾಮದಲ್ಲಿ ಇರುವ ಅಪಾಯಕಾರಿ ಮರಗಳು, ವಿದ್ಯುತ್ ಕಂಬಗಳನ್ನು ತೆರವುಗೊಳ್ಳಿಸುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮಪಂಚಾಯತ್ ಅಧ್ಯಕ್ಷ ಸುಧೀನ್ ಡಿ., ಪಂಚಾಯತ್ ಅಭಿವೃದ್ದಿ ಅಧಿಕಾರಿ ದಿನೇಶ್ ಎಂ, ಗ್ರಾಮ ಆಡಳಿತಾಧಿಕಾರಿ ತೇಜಸ್ವಿ, ಧರ್ಮಸ್ಥಳ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಶಶಿಧರ್, ಸಂದೀಪ್, ಗಸ್ತು ಅರಣ್ಯ ಪಾಲಕ ನಾಗಲಿಂಗ ಬಡಿಗೇರ, ಕೊಳಕ್ಕೆಬೈಲು ಶಾಲಾ ಮುಖ್ಯೋಪಾಧ್ಯಾಯರಾದ ರೊನಾಲ್ಡ್ ಮಿನೇಜಸ್, ಹೆವಾಜೆ ಶಾಲಾ ಮುಖ್ಯೋಪಾಧ್ಯಾಯರಾದ ನಾಗರಾಜ್, ಆಶ್ರಮ ಶಾಲಾ ಅಧ್ಯಾಪಕರಾದ ಕರುಣಾಕರ, ಸಮುದಾಯ ಆರೋಗ್ಯ ಅಧಿಕಾರಿ ಪವಿತ್ರ, ಅಂಗನವಾಡಿ ಕಾರ್ಯಕರ್ತೆಯರಾದ ಯಶೋದಾ, ಕುಸುಮಾವತಿ, ನಯನ ಕುಮಾರಿ, ಆಶಾ ಕಾರ್ಯಕರ್ತೆ ರೂಪ, ಸಂಜೀವಿನಿ ಒಕ್ಕೂಟದ ಎಂಬಿಕೆ ಶಾರದಾ, ಎಲ್ ಸಿ ಆರ್ ಪಿ ಶಶಿ, ಕೃಷಿ ಸಖಿ ವಸಂತಿ, ಪಶು ಸಖಿ ಆಶಿಕಾ, ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರಾದ ಕಿರಣ್, ಗಂಗಾಧರ, ಯುವಕ ಮಂಡಲ ಸದಸ್ಯ ಪದ್ಮನಾಭ, ರಾಧಾಕೃಷ್ಣ ಗೌಡ ಗುತ್ತು ಮುಂತಾದವರು ಭಾಗವಹಿಸಿದ್ದರು.

Related posts

ಮೆದುಳಿನ ಸ್ಟ್ರೋಕ್ ಸಮಸ್ಯೆಯಿಂದ ಬಳಲುತ್ತಿರುವ ಪಟ್ರಮೆಯ ಲಕ್ಷಣ ಗೌಡ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ನಾಳೆ (ಮೇ 7): ಬೆಳ್ತಂಗಡಿ ತಾಲೂಕಿನ ವಿವಿಧೆಡೆ ವಿದ್ಯುತ್ ನಿಲುಗಡೆ

Suddi Udaya

ವೇಣೂರು ಸರಕಾರಿ ಶಾಲೆ ಸ್ಥಳಾಂತರದ ಬಗ್ಗೆ ಹಳೆ ವಿದ್ಯಾರ್ಥಿಗಳ ವಿಚಾರ ವಿನಿಮಯ ಸಭೆ: ಕುಂದುಕೊರತೆ ನೀಗಿಸಲು ಹಳೆವಿದ್ಯಾರ್ಥಿಗಳಿಂದ ಸಹಾಯ ಯಾಚಿಸಲು ನಿರ್ಧಾರ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಸವಣಾಲು : ಕೋಟಿ ಚೆನ್ನಯ್ಯ ಸೈಬರ್ ಸೆಂಟರ್ ಶುಭಾರಂಭ

Suddi Udaya

ಸೋಣಂದೂರು ಸ ಹಿ ಪ್ರಾ ಶಾಲೆಯಲ್ಲಿ ಮಕ್ಕಳ ಹಬ್ಬ ಮತ್ತು ಪ್ರತಿಭಾ ಪುರಸ್ಕಾರ

Suddi Udaya
error: Content is protected !!