23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿಯ ಸಭೆ

ಶಿಶಿಲ :ಜಿಲ್ಲಾಧಿಕಾರಿಯವರ ಆದೇಶದಂತೆ ಶಿಶಿಲ ಗ್ರಾಮಪಂಚಾಯತ್ ವಿಪತ್ತು ನಿರ್ವಹಣಾ ಸಮಿತಿಯ ಸಭೆಯು ಜೂ.28 ರಂದು ಗ್ರಾಮ ಪಂಚಾಯತ್ ಕಚೇರಿಯಲ್ಲಿ ನಡೆಸಲಾಯಿತು.

ಗ್ರಾಮದಲ್ಲಿ ಇರುವ ಸಮಸ್ಯೆಗಳ ಪಟ್ಟಿ ಮಾಡಿ ಇಲಾಖೆಗಳಿಗೆ ಮಾಹಿತಿ ನೀಡಿ ಇಲಾಖೆಗಳಿಂದ ತಕ್ಷಣ ಕ್ರಮಕೈಗೊಳ್ಳಲು ಗ್ರಾಮ ಪಂಚಾಯತ್ ಮಟ್ಟದ ವಿಪತ್ತು ನಿರ್ವಹಣಾ ಸಭೆಯಲ್ಲಿ ನಿರ್ಧಾರಿಸಲಾಯಿತು. ವಿಪತ್ತು ನಿರ್ವಹಣಾ ತಂಡದ ಸದಸ್ಯರು ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವಂತೆ ಗ್ರಾಮ ಪಂಚಾಯತ್ ವಿಪತ್ತು ನಿರ್ವಹಣಾ ತಂಡದ ಸಭೆಯಲ್ಲಿ ಸೂಚಿಸಲಾಯಿತು. ಗ್ರಾಮದಲ್ಲಿ ಇರುವ ಅಪಾಯಕಾರಿ ಮರಗಳು, ವಿದ್ಯುತ್ ಕಂಬಗಳನ್ನು ತೆರವುಗೊಳ್ಳಿಸುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮಪಂಚಾಯತ್ ಅಧ್ಯಕ್ಷ ಸುಧೀನ್ ಡಿ., ಪಂಚಾಯತ್ ಅಭಿವೃದ್ದಿ ಅಧಿಕಾರಿ ದಿನೇಶ್ ಎಂ, ಗ್ರಾಮ ಆಡಳಿತಾಧಿಕಾರಿ ತೇಜಸ್ವಿ, ಧರ್ಮಸ್ಥಳ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಶಶಿಧರ್, ಸಂದೀಪ್, ಗಸ್ತು ಅರಣ್ಯ ಪಾಲಕ ನಾಗಲಿಂಗ ಬಡಿಗೇರ, ಕೊಳಕ್ಕೆಬೈಲು ಶಾಲಾ ಮುಖ್ಯೋಪಾಧ್ಯಾಯರಾದ ರೊನಾಲ್ಡ್ ಮಿನೇಜಸ್, ಹೆವಾಜೆ ಶಾಲಾ ಮುಖ್ಯೋಪಾಧ್ಯಾಯರಾದ ನಾಗರಾಜ್, ಆಶ್ರಮ ಶಾಲಾ ಅಧ್ಯಾಪಕರಾದ ಕರುಣಾಕರ, ಸಮುದಾಯ ಆರೋಗ್ಯ ಅಧಿಕಾರಿ ಪವಿತ್ರ, ಅಂಗನವಾಡಿ ಕಾರ್ಯಕರ್ತೆಯರಾದ ಯಶೋದಾ, ಕುಸುಮಾವತಿ, ನಯನ ಕುಮಾರಿ, ಆಶಾ ಕಾರ್ಯಕರ್ತೆ ರೂಪ, ಸಂಜೀವಿನಿ ಒಕ್ಕೂಟದ ಎಂಬಿಕೆ ಶಾರದಾ, ಎಲ್ ಸಿ ಆರ್ ಪಿ ಶಶಿ, ಕೃಷಿ ಸಖಿ ವಸಂತಿ, ಪಶು ಸಖಿ ಆಶಿಕಾ, ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರಾದ ಕಿರಣ್, ಗಂಗಾಧರ, ಯುವಕ ಮಂಡಲ ಸದಸ್ಯ ಪದ್ಮನಾಭ, ರಾಧಾಕೃಷ್ಣ ಗೌಡ ಗುತ್ತು ಮುಂತಾದವರು ಭಾಗವಹಿಸಿದ್ದರು.

Related posts

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವ ಅವರ ತಂದೆ, ಶತಾಯುಷಿ ಮಿಜಾರು ಗುತ್ತು ಆನಂದ ಆಳ್ವ ನಿಧನ

Suddi Udaya

ಇಂದಬೆಟ್ಟು: ಕಲ್ಲಾಜೆ ನಿವಾಸಿ ಲಿಂಗಪ್ಪ ಗೌಡ ನಿಧನ

Suddi Udaya

ಧರ್ಮಸಂರಕ್ಷಣ ರಥ ಯಾತ್ರೆಗೆ ಸಾಕ್ಷಿಯಾದ ಸಾವಿರ ಸಾವಿರ ಸಂಖ್ಯೆಯ ಭಕ್ತಾದಿಗಳು: ಉಜಿರೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ದೇವರ ನಾಮಸ್ಮರಣೆಯೊಂದಿಗೆ ಪಾದಯಾತ್ರೆಗೆ ಅದ್ದೂರಿ ಚಾಲನೆ

Suddi Udaya

ನಿಡ್ಲೆ: ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಮುಂಡೂರುಪಳಿಕೆ ಸುಗ್ಗಿ ಪುರುಷರ ಕೂಟದ ಸಮಿತಿ ರಚನೆ

Suddi Udaya
error: Content is protected !!