25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿಯ ಸಭೆ

ಶಿಶಿಲ :ಜಿಲ್ಲಾಧಿಕಾರಿಯವರ ಆದೇಶದಂತೆ ಶಿಶಿಲ ಗ್ರಾಮಪಂಚಾಯತ್ ವಿಪತ್ತು ನಿರ್ವಹಣಾ ಸಮಿತಿಯ ಸಭೆಯು ಜೂ.28 ರಂದು ಗ್ರಾಮ ಪಂಚಾಯತ್ ಕಚೇರಿಯಲ್ಲಿ ನಡೆಸಲಾಯಿತು.

ಗ್ರಾಮದಲ್ಲಿ ಇರುವ ಸಮಸ್ಯೆಗಳ ಪಟ್ಟಿ ಮಾಡಿ ಇಲಾಖೆಗಳಿಗೆ ಮಾಹಿತಿ ನೀಡಿ ಇಲಾಖೆಗಳಿಂದ ತಕ್ಷಣ ಕ್ರಮಕೈಗೊಳ್ಳಲು ಗ್ರಾಮ ಪಂಚಾಯತ್ ಮಟ್ಟದ ವಿಪತ್ತು ನಿರ್ವಹಣಾ ಸಭೆಯಲ್ಲಿ ನಿರ್ಧಾರಿಸಲಾಯಿತು. ವಿಪತ್ತು ನಿರ್ವಹಣಾ ತಂಡದ ಸದಸ್ಯರು ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವಂತೆ ಗ್ರಾಮ ಪಂಚಾಯತ್ ವಿಪತ್ತು ನಿರ್ವಹಣಾ ತಂಡದ ಸಭೆಯಲ್ಲಿ ಸೂಚಿಸಲಾಯಿತು. ಗ್ರಾಮದಲ್ಲಿ ಇರುವ ಅಪಾಯಕಾರಿ ಮರಗಳು, ವಿದ್ಯುತ್ ಕಂಬಗಳನ್ನು ತೆರವುಗೊಳ್ಳಿಸುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮಪಂಚಾಯತ್ ಅಧ್ಯಕ್ಷ ಸುಧೀನ್ ಡಿ., ಪಂಚಾಯತ್ ಅಭಿವೃದ್ದಿ ಅಧಿಕಾರಿ ದಿನೇಶ್ ಎಂ, ಗ್ರಾಮ ಆಡಳಿತಾಧಿಕಾರಿ ತೇಜಸ್ವಿ, ಧರ್ಮಸ್ಥಳ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಶಶಿಧರ್, ಸಂದೀಪ್, ಗಸ್ತು ಅರಣ್ಯ ಪಾಲಕ ನಾಗಲಿಂಗ ಬಡಿಗೇರ, ಕೊಳಕ್ಕೆಬೈಲು ಶಾಲಾ ಮುಖ್ಯೋಪಾಧ್ಯಾಯರಾದ ರೊನಾಲ್ಡ್ ಮಿನೇಜಸ್, ಹೆವಾಜೆ ಶಾಲಾ ಮುಖ್ಯೋಪಾಧ್ಯಾಯರಾದ ನಾಗರಾಜ್, ಆಶ್ರಮ ಶಾಲಾ ಅಧ್ಯಾಪಕರಾದ ಕರುಣಾಕರ, ಸಮುದಾಯ ಆರೋಗ್ಯ ಅಧಿಕಾರಿ ಪವಿತ್ರ, ಅಂಗನವಾಡಿ ಕಾರ್ಯಕರ್ತೆಯರಾದ ಯಶೋದಾ, ಕುಸುಮಾವತಿ, ನಯನ ಕುಮಾರಿ, ಆಶಾ ಕಾರ್ಯಕರ್ತೆ ರೂಪ, ಸಂಜೀವಿನಿ ಒಕ್ಕೂಟದ ಎಂಬಿಕೆ ಶಾರದಾ, ಎಲ್ ಸಿ ಆರ್ ಪಿ ಶಶಿ, ಕೃಷಿ ಸಖಿ ವಸಂತಿ, ಪಶು ಸಖಿ ಆಶಿಕಾ, ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರಾದ ಕಿರಣ್, ಗಂಗಾಧರ, ಯುವಕ ಮಂಡಲ ಸದಸ್ಯ ಪದ್ಮನಾಭ, ರಾಧಾಕೃಷ್ಣ ಗೌಡ ಗುತ್ತು ಮುಂತಾದವರು ಭಾಗವಹಿಸಿದ್ದರು.

Related posts

ಬೆಳ್ತಂಗಡಿಯಲ್ಲಿ ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗೆ ಮಾಜಿ ಶಾಸಕ ವಸಂತ ಬಂಗೇರರಿಂದ ಚಾಲನೆ

Suddi Udaya

ಸಹಕಾರಿ ಸಪ್ತಾಹದಲ್ಲಿ ಕೃಷಿ ಕ್ಷೇತ್ರದ ಸಾಧಕರಾದ ಪೆರಾಡಿ ಸೊಸೈಟಿ ಸದಸ್ಯರಿಗೆ ಸನ್ಮಾನ

Suddi Udaya

ರಾಷ್ಟ್ರೀಯ ಮಟ್ಟದ ಭಾರ ಎತ್ತುವಿಕೆ ಸ್ಪರ್ಧೆಯಲ್ಲಿ ಭಾಗವಹಿಸಲು ಹಿಮಾಚಲ ಪ್ರದೇಶಕ್ಕೆ ತೆರಳಲಿರುವ ಬಂದಾರು ಕೆ ತೇಜಸ್ವಿನಿ ಪೂಜಾರಿ ರವರಿಗೆ ಬೆಳ್ತಂಗಡಿ ಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘದ ವತಿಯಿಂದ ಆರ್ಥಿಕ ನೆರವು

Suddi Udaya

ಅಪಘಾತದಲ್ಲಿ ಮೃತಪಟ್ಟ ಉದ್ಯಮಿ ಚಂದ್ರಶೇಖರ ಗೌಡರಿಗೆ ಕೊಕ್ಕಡದಲ್ಲಿ ಅಂತಿಮ ದರ್ಶನ: ವರ್ತಕರಿಂದ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಶ್ರದ್ಧಾಂಜಲಿ

Suddi Udaya

ಗರ್ಡಾಡಿ: ಜೀಪು ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya

ಉಜಿರೆ ಆಟೋ ಚಾಲಕರ ಮಹಾಸಭೆ

Suddi Udaya
error: Content is protected !!