ಉಜಿರೆಯಲ್ಲಿ ಭೀಕರ ರಸ್ತೆ ಅಪಘಾತ: ಬೆಳ್ತಂಗಡಿಯ ಪ್ರಜ್ವಲ್ ನಾಯಕ್ ಮೃತ್ಯು

Suddi Udaya

Updated on:

ಉಜಿರೆ:: ಉಜಿರೆ – ಧರ್ಮಸ್ಥಳ ಮುಖ್ಯ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತವಾದ. ಘಟನೆಯಲ್ಲಿ ಬೆಂಝ್ ಕಾರು ಛಿದ್ರ ಛಿದ್ರವಾಗಿದ್ದು, ವಾಹನ ಚಾಲಕ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯುವ ವೇಳೆ ಸಾವನ್ನಪ್ಪಿರುವುದಾಗಿ ಜೂ.29ರಂದು ವರದಿಯಾಗಿದೆ.

ಬೆಳ್ತಂಗಡಿಯ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರಾದ ಪ್ರಮೋದ್ ಆರ್. ನಾಯಕ್ ಅವರ ಪುತ್ರ ಪ್ರಜ್ವಲ್ ನಾಯಕ್ ಸಾವನ್ನಪ್ಪಿದವರು ಎಂದು ತಿಳಿದು ಬಂದಿದೆ.

ಪ್ರಜ್ವಲ್ ಉಜಿರೆಯ ಡಿ.ಎಂ ಗೌಡ ಕಾಂಪ್ಲೆಕ್ಸ್ ನಲ್ಲಿ ಗೇಮಿಂಗ್ ಶಾಪ್ ಮಾಲೀಕ ಹಾಗೂ ಉದ್ಯಮಿ ಯಾಗಿದ್ದು, ಇಂದು ಬೆಳಗ್ಗೆ. ಅಲ್ಲಿಗೆ ಹೋಗುತ್ತಿರುವ ವೇಳೆ ಈ ದುರ್ಘಟನೆ ನಡೆದಿದೆ.

Leave a Comment

error: Content is protected !!