September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ರುಡ್ ಸೆಟ್ ನಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ ಕಾರ್ಯಕ್ರಮದ ಸಮಾರೋಪ

ಉಜಿರೆ: ಮಹಿಳೆಯರು ಎಲ್ಲಾ ಜವಬ್ಧಾರಿಗಳನ್ನು ನಿಭಾಹಿಸುದರ ಜೊತೆಗೆ ತಮ್ಮ ಕನಸುಗಳನ್ನು ಸಕಾರಗೊಳಿಸಲು ಪ್ರಯತ್ನಿಸಬೇಕು. ಮಹಿಳೆಯರಿಗೆ ಅತ್ಯಂತ ಹೆಚ್ಚಿನ ಜವಬ್ಧಾರಿಗಳಿವೆ, ಆದರೂ ಎಲ್ಲಾ ಜವಬ್ಧಾರಿಗಳನ್ನು ಅತ್ಯಂತ ಹೆಚ್ಚಿನ ಮುತುವರ್ಜಿಯಿಂದ ಮಾಡುತ್ತಾಳೆ, ಅದರ ಜೊತೆಗೆ ತನ್ನ ಕನಸ್ಸುಗಳನ್ನು ಮತ್ತು ಆಸೆಗಳನ್ನು ಸಕಾರ ಮಾಡಲು ಪ್ರಯತ್ನಿಸಬೇಕು. ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಕಲ್ಪನೆಯ ಈ ರುಡ್‌ಸೆಟ್ ಸಂಸ್ಥೆಯು ಕಳೆದ 42 ವರ್ಷಗಳಿಂದ ದೇಶದ ಅನೇಕ ಮಹಿಳೆಯರ ಸ್ವ ಉದ್ಯೋಗದ ಕನಸುಗಳನ್ನು ಸಕಾರಗೊಳಿಸಿದೆ. ಉಜಿರೆಯಲ್ಲಿ ಪ್ರಾರಂಭಗೊಂಡ ಈ ರುಡ್‌ಸೆಟ್ ಸಂಸ್ಥೆ ದೇಶದ ಪ್ರತಿ ಜಿಲ್ಲೆಯಲ್ಲೂ ಮಾದರಿ ಸಂಸ್ಥೆ (ಆರ್‌ಸೆಟಿ) ಗಳಾಗಿ ಸ್ಥಾಪನೆಗೊಂಡಿರುವುದು ನಮಗೆ ಹೆಮ್ಮೆಯ ವಿಚಾರ ಎಂದು ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಉಷಾಕಿರಣ್ ಕಾರಂತ್ ರವರು ಅಭಿಪ್ರಾಯಪಟ್ಟರು.

ಅವರುಉಜಿರೆ ರುಡ್ ಸೆಟ್ ನಲ್ಲಿ ನಡೆದ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶಿಭಿರಾರ್ಥೀಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಎಮ್. ಸುರೇಶ್ ಅತಿಥಿಗಳನ್ನು ಸ್ವಾಗತಿಸಿ ತರಬೇತಿಯ ಹಿನ್ನೋಟ ನೀಡಿದರು. ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ವಿಜಯಕುಮಾರ್ ಬಿ.ಪಿ ಅಧ್ಯಕ್ಷತೆ ವಹಿಸಿದ್ದರು, ಹಿರಿಯ ಉಪನ್ಯಾಸಕ ಕರುಣಾಕರ್ ಜೈನ್ ಕಾರ್ಯಕ್ರಮ ನಿರೂಪಿಸಿ, ಅಬ್ರಹಾಂ ಜೇಮ್ಸ್‌ರವರು ವಂದಿಸಿದರು. 30 ದಿನಗಳ ಈ ತರಬೇತಿ ಕಾರ್ಯಕ್ರಮದಲ್ಲಿ 32 ಮಹಿಳಾ ಶಿಬಿರಾರ್ಥಿಗಳು ಭಾಗವಹಿಸಿದ್ದರು. ಕೆಲವು ಶಿಬಿರಾರ್ಥಿಗಳು ತರಬೇತಿಯ ಅನಿಸಿಕೆಯನ್ನು ವ್ಯಕ್ತಪಡಿಸಿದರು.

Related posts

ಶೈಕ್ಷಣಿಕ ಕ್ಷೇತ್ರದ ಅದ್ಭುತ ಸಾಧಕ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ”ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ” ಇಂದು ಸಂಜೆ ಬೆಂಗಳೂರಿನಲ್ಲಿ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

Suddi Udaya

ಕಣಿಯೂರು: ದೀಪಾ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಎಸ್ಐಆರ್ ಹೆಸರಿನಲ್ಲಿ ಕೇಂದ್ರ ಸರ್ಕಾರ ಪ್ರಜಾತಂತ್ರದ ಕಗ್ಗೊಲೆ ಮಾಡಲು ಯತ್ನಿಸುತ್ತಿದೆ. ರಕ್ಷಿತ್ ಶಿವರಾಂ

Suddi Udaya

ಜೆಸಿಐ ಉಜಿರೆ ಘಟಕದ ಆತಿಥ್ಯದಲ್ಲಿ ಬಹು ಘಟಕ ವ್ಯಕ್ತಿತ್ವ ವಿಕಸನ ಕಾರ್ಯಗಾರ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya

ವೇಣೂರು : ಸುನಂದ ಪೂಜಾರಿ ನಿಧನ

Suddi Udaya
error: Content is protected !!