July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯ ಹಾಗೂ ಅಕ್ರಮ ಸಾಗಾಟ ವಿರೋಧಿ ದಿನಾಚರಣೆ

ಕೊಯ್ಯೂರು : “ಸ್ವಾಸ್ತ್ಯ ಸಮಾಜದ ನಿರ್ಮಾಣದಲ್ಲಿ ಯುವಜನರ ಪಾತ್ರ ಮುಖ್ಯವಾಗಿದ್ದು, ವಿದ್ಯಾರ್ಥಿಗಳು ಮಾದಕ ದ್ರವ್ಯ ಮತ್ತು ದುಶ್ಚಟಗಳಿಂದ ದೂರವಿದ್ದು ಆರೋಗ್ಯ ಪೂರ್ಣ ಸಮಾಜದ ನಿರ್ಮಾಣದಲ್ಲಿ ಕೈ ಜೋಡಿಸಬೇಕೆಂದು ಬೆಳ್ತಂಗಡಿ ಆರಕ್ಷಕ ವೃತ್ತ ನಿರೀಕ್ಷಕ ವಸಂತ ಆಚಾರ್ ವಿದ್ಯಾರ್ಥಿಗಳಿಗೆ ಕರೆನೀಡಿದರು.

ಅವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜರುಗಿದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡುತ್ತಾ ಬಾಲಕಿಯರು ಸಮಾಜದಲ್ಲಿ ನಡೆಯುವ ಅನಿಷ್ಠಗಳಿಗೆ ಬಲಿಯಾಗಬಾರದೆಂದು ಕಾಳಜಿಯನ್ನು ವ್ಯಕ್ತಪಡಿಸಿದರು.


ಬೆಳ್ತಂಗಡಿ ಆರಕ್ಷಕ ಠಾಣೆಯ ಉಪನೀರಿಕ್ಷಕರಾದ ಮುರಳೀಧರ ನಾಯಕ್ ಮಾತನಾಡಿ ಮಾದಕ ದ್ರವ್ಯ ಮತ್ತು ಅಕ್ರಮ ಸಾಗಾಟದಲ್ಲಿ ಯುವಜನರನ್ನು ತೊಡಗಿಸಿಕೊಳ್ಳುವ ಹುನ್ನಾರ ನಡೆಯುತ್ತಿದ್ದು ವಿದ್ಯಾರ್ಥಿಗಳು ಜಾಗರೂಕತೆಯಿಂದ ಮುನ್ನಡೆಯಬೇಕು ಹಾಗೂ ನಮ್ಮ ಸಮಾಜ ಈ ವಿಷ ವರ್ತುಲದಲ್ಲಿ ಸಿಲುಕದಂತೆ ಜಾಗೃತಿ ವಹಿಸಬೇಕೆಂದು ಕರೆ ನೀಡಿದರು. ಮಾದಕ ದ್ರವ್ಯ ವಿರೋಧಿ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳು ಪ್ರಮಾಣವಚನಗೈದರು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಪ್ರಾಚಾರ್ಯರಾದ ಮೋಹನ ಗೌಡ ಪ್ರಾಸ್ತವಿಕವಾಗಿ ಮಾತನಾಡಿ, ಅತಿಥಿಗಳನ್ನು ಸ್ವಾಗತಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ಕುಮಾರಿ ತೃಪ್ತಿ ಧನ್ಯವಾದವಿತ್ತರು.

Related posts

ವೇಣೂರು: ಲಯನ್ಸ್ ಕ್ಲಬ್ ನಲ್ಲಿ ಕಾರ್ಗಿಲ್ ದಿನಾಚರಣೆ

Suddi Udaya

ಎಸ್ ಡಿ ಎಂ ಬೆಳ್ತಂಗಡಿಯಲ್ಲಿ “ಪರಿಸರ ಸ್ನೇಹಿ ಸ್ಕೌಟ್ ಗಣಪತಿ ಆಚರಣೆ

Suddi Udaya

ಜಡಿಮಳೆ: ಕಳೆಂಜ ಕುಟ್ರುಪ್ಪಾಡಿ ರಾಮಣ್ಣ ನಾಯ್ಕರ ಸೋಗೆ ಮನೆ ಛಾವಣಿ ಸಂಪೂರ್ಣ ಕುಸಿತ

Suddi Udaya

ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಮಲವಂತಿಗೆ -ಮಿತ್ತಬಾಗಿಲು ನಲ್ಲಿ “ಸ್ವ ಸಹಾಯ ಸಂಘಗಳ” ಉದ್ಘಾಟನೆ

Suddi Udaya

ಧರ್ಮಸ್ಥಳ: ಚಾಮುಂಡೇಶ್ವರಿ ಭಜನಾ ಮಂಡಳಿ ಮುಳಿಕ್ಕಾರು ಇದರ 25ನೇ ವರ್ಷದ ವಾರ್ಷಿಕೋತ್ಸವ: ಧಾರ್ಮಿಕ ಸಭೆ

Suddi Udaya

ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಸತ್ಯಾಸತ್ಯತೆ ಶೀಘ್ರವಾಗಿ ಹೊರಬರಲಿದೆ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ವಿಜಯೇಂದ್ರ ಹೇಳಿಕೆ

Suddi Udaya
error: Content is protected !!